3 ದಿನದಲ್ಲಿ ವೋಟರ್‌ ಸ್ಲಿಪ್‌: ಸವಾಲು


Team Udayavani, May 2, 2018, 3:03 PM IST

3dinadal;li.jpg

ಬೆಂಗಳೂರು: ನಗರದಲ್ಲಿರುವ ಮತದಾರರಿಗೆ ಮನೆ ಮನೆಗೆ “ವೋಟರ್‌ ಸ್ಲಿಪ್‌’ (ಮತದಾರರ ಚೀಟಿ) ತಲುಪಿಸುವುದಾಗಿ ಚುನಾವಣಾ ಆಯೋಗ ಹೇಳಿದೆಯಾದರೂ ಈ ಕೆಲಸ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ.

ನಗರದಲ್ಲಿ ಮತದಾರರ ಸಂಖ್ಯೆ 91.13 ಲಕ್ಷವಿದ್ದು, ಅವರಿಗೆ ಮತದಾರರ ಚೀಟಿ ತಲುಪಿಸುವ ಬೂತ್‌ಮಟ್ಟದ ಅಧಿಕಾರಿಗಳಿರುವುದು ಬರೀ 8,278 ಮಾತ್ರ. ಅಲ್ಲದೆ, ಇರುವ ಕಾಲಾವಕಾಶ ಕೇವಲ ಮೂರು ದಿನಗಳು. ಈ ಅಲ್ಪಾವಧಿಯಲ್ಲಿ ಬೆಂಗಳೂರಿನಂತಹ ನಗರದಲ್ಲಿ ನಿತ್ಯ ಸರಾಸರಿ 350 ಮತದಾರರನ್ನು ಭೇಟಿ ಮಾಡಿ, ಸ್ಲಿಪ್‌ ತಲುಪಿಸುವುದು ಅಕ್ಷರಶಃ ಸವಾಲಾಗಿದೆ. ಹಾಗಾಗಿ, ಈ ಪ್ರಕ್ರಿಯೆ ಸಮರ್ಪಕವಾಗಿ ನಡೆಯವುದು ಅನುಮಾನ ಎನ್ನಲಾಗುತ್ತಿದೆ.

ಬೂತ್‌ಮಟ್ಟದ ಅಧಿಕಾರಿಗಳು ಪ್ರತಿಯೊಬ್ಬ ಮತದಾರನಿಗೆ ವೋಟರ್‌ ಸ್ಲಿಪ್‌ ಜತೆಗೆ ಮೂರು ಪುಟಗಳ ಮಾರ್ಗದರ್ಶಿ ಕಿರುಹೊತ್ತಿಗೆ ವಿತರಿಸಬೇಕು. ನಂತರ ಆಯಾ ಮತದಾರರ ಮೊಬೈಲ್‌ ನಂಬರ್‌ ಮತ್ತು ಸಹಿ ಸಂಗ್ರಹಿಸಬೇಕು. ಇದಲ್ಲದೆ, ಹೊಸದಾಗಿ ಸೇರ್ಪಡೆಗೊಂಡ ಮತದಾರರಿಗೆ “ಮತದಾರರ ಗುರುತಿನ ಚೀಟಿ’ (ಎಪಿಕ್‌ ಕಾರ್ಡ್‌) ತಲುಪಿಸುವ ಹೊಣೆಯೂ ಈ ಬೂತ್‌ಮಟ್ಟದ ಅಧಿಕಾರಿಗಳ ಮೇಲಿದೆ.

ವೋಟರ್‌ ಸ್ಲಿಪ್‌; ಏನು ಉಪಯೋಗ?: ಮತದಾನದಂದು ಮತದಾರರು ತಮ್ಮ ಹಕ್ಕು ಚಲಾಯಿಸಲು ಈ ವೋಟರ್‌ ಸ್ಲಿಪ್‌ ತೋರಿಸಿಯೇ ಮತಗಟ್ಟೆ ಒಳಗೆ ಪ್ರವೇಶ ಪಡೆಯಬೇಕಾಗುತ್ತದೆ. ಈ ಸ್ಲಿಪ್‌ ಇದ್ದರೆ ಸಾಕು, ಮತದಾರರ ಗುರುತಿನಚೀಟಿ ಇಲ್ಲದಿದ್ದರೂ ನಡೆಯುತ್ತದೆ. ಇದರಲ್ಲಿ ಮತದಾರರ ಫೋಟೋ, ಎಪಿಕ್‌ ನಂಬರ್‌ ಸಹಿತ ಸಂಪೂರ್ಣ ಮಾಹಿತಿ ಇದ್ದು, ಮಹತ್ವ ಪಡೆದಿದೆ.

ಸಮಸ್ಯೆ ಏನು?: ಬೆಂಗಳೂರಿನಂತಹ ಮಹಾನಗರದಲ್ಲಿ ನಿತ್ಯ ಅಬ್ಬಬ್ಟಾ ಎಂದರೆ 80ರಿಂದ 100 ಮತದಾರರನ್ನು ಸಂಪರ್ಕಿಸಲು ಮಾತ್ರ ಸಾಧ್ಯವಾಗುತ್ತದೆ. ಏಕೆಂದರೆ, ಬಹುತೇಕರು ಹಗಲು ಮನೆಯಲ್ಲಿ ಇರುವುದಿಲ್ಲ. ಬೆಳಗ್ಗೆ ಮತ್ತು ಸಂಜೆ ಮಾತ್ರ ಲಭ್ಯ ಇರುತ್ತಾರೆ. ಈ ಅವಧಿಯಲ್ಲೇ ಸಂಪರ್ಕಿಸಬೇಕು. ಹಲವು ಮನೆಗಳಲ್ಲಿ ನಾಯಿಗಳ ಹಾವಳಿ, ಇನ್ನು ಕೆಲವರು ಮನೆಯಲ್ಲಿದ್ದರೂ ಬಾಗಿಲು ತೆಗೆಯುವುದಿಲ್ಲ,

ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ಗಳಲ್ಲಂತೂ ಬೂತ್‌ಮಟ್ಟದ ಅಧಿಕಾರಿಗಳನ್ನು ಒಳಗೆ ಕೂಡ ಬಿಟ್ಟುಕೊಳ್ಳುವುದಿಲ್ಲ. ಇಂತಹ ವಾಸ್ತವ ಸಮಸ್ಯೆಗಳು ಕಾಡುತ್ತಿವೆ. ಸ್ಲಿàಪ್‌ ನೀಡಲು ಮತದಾರರು ಅವರೇ ಎಂದು ಖಾತ್ರಿ ಮಾಡಿಕೊಳ್ಳಬೇಕು ಹೀಗಾಗಿ, ಮನೆಯಲ್ಲಿ ಹಾಕಿ ಬರುವುದೂ ಕಷ್ಟಸಾಧ್ಯ. ಆದ್ದರಿಂದ ಇದೊಂದು ಸವಾಲಿನ ಕೆಲಸ ಎಂದು ಹೆಸರು ಹೇಳಲಿಚ್ಛಿಸದ ಬಿಬಿಎಂಪಿ ಚುನಾವಣಾ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು. 

ಸಮಸ್ಯೆಯೇ ಅಲ್ಲ; ಚುನಾವಣಾಧಿಕಾರಿ: ತಲಾ ಒಬ್ಬ ಬೂತ್‌ಮಟ್ಟದ ಅಧಿಕಾರಿಗೆ (ಬಿಎಲ್‌ಒ) ಸರಾಸರಿ 1,100 ಮತದಾರರು ಬರುತ್ತಾರೆ. ನಿತ್ಯ 200ರಿಂದ 300 ಜನರನ್ನು ಅನಾಯಾಸವಾಗಿ ತಲುಪುತ್ತಾರೆ. ಇದೊಂದು ಸಮಸ್ಯೆಯೇ ಅಲ್ಲ. ಅಷ್ಟಕ್ಕೂ ಈ ಬಿಎಲ್‌ಒಗಳು ಸ್ಥಳೀಯರು ಹಾಗೂ ಈ ಮೊದಲೇ ಮತದಾರರ ನೋಂದಣಿ ಮಾಡಿಸಲು ಮನೆ-ಮನೆಗೆ ತೆರಳಿದ್ದರಿಂದ ಮನೆಗಳು ಪರಿಚಿತವಾಗಿರುತ್ತವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್‌. ಮಂಜುನಾಥ ಪ್ರಸಾದ್‌ ಹೇಳುತ್ತಾರೆ.

ಬಿಎಲ್‌ಒಗಳೇ ಅಲಭ್ಯ?: ಈ ಮೊದಲು ಇದೇ ಬಿಎಲ್‌ಒಗಳಿಂದ ಮನೆ-ಮನೆಗೆ ತೆರಳಿ ಮತದಾರರ ನೋಂದಣಿ ಮಾಡಿಸುವುದಾಗಿ ಬಿಬಿಎಂಪಿ ಹೇಳಿತ್ತು. ಆದರೆ, ಬಹುತೇಕ ಕಡೆ ಈ ಬಿಎಲ್‌ಒಗಳು ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ ಎಂದು ಯುವ ಮತದಾರ ನೋಂದಣಿ ಮತ್ತು ಜಾಗೃತಿ ಅಭಿಯಾನ ಕಾರ್ಯಕರ್ತ ಆನಂದ್‌ ತೀರ್ಥ ಆರೋಪಿಸುತ್ತಾರೆ.

ಆಶಾ ಕಾರ್ಯಕರ್ತರು ಅಥವಾ ವಿವಿಧ ಬಡಾವಣೆಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಸದಸ್ಯರ ನೆರವು ಪಡೆಯುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಬೇಕು. ಇದರಿಂದ ವೋಟರ್‌ ಸ್ಲಿಪ್‌ ಸಮರ್ಪಕ ವಿತರಣೆ ಸಾಧ್ಯವಾಗುತ್ತದೆ ಎಂದು ತಜ್ಞರೊಬ್ಬರು ತಿಳಿಸಿದರು. ಆದರೆ, ಈ ಕಾರ್ಯವನ್ನು ಬೂತ್‌ಮಟ್ಟದ ಅಧಿಕಾರಿಗಳಿಂದಲೇ ನಡೆಸಬೇಕಾಗುತ್ತದೆ. ಹಾಗೂ ಆ ಅಧಿಕಾರಿಗಳು ಶೇ. 100ರಷ್ಟು ಈ ಪ್ರಕ್ರಿಯೆ ಪೂರ್ಣಗೊಳಿಸಲಿದ್ದಾರೆ ಎಂದು ಎನ್‌. ಮಂಜುನಾಥ ಪ್ರಸಾದ್‌ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಲಕ್ಷ ಮತದಾರರಿಗೆ ಇನ್ನೂ ಎಪಿಕ್‌ ಕಾರ್ಡ್‌ ಸಿಕ್ಕಿಲ್ಲ!: ಮತದಾನಕ್ಕೆ ಇನ್ನು ಹತ್ತು ದಿನ ಮಾತ್ರ ಬಾಕಿ ಇದೆ. ಆದರೂ ನಗರದಲ್ಲಿ ಸುಮಾರು ಒಂದು ಲಕ್ಷ ಮತದಾರರಿಗೆ ಇನ್ನೂ ಮತದಾರರ ಗುರುತಿನ ಚೀಟಿ ಸಿಕ್ಕಿಲ್ಲ. ನಗರದಲ್ಲಿ 91.13 ಲಕ್ಷ ಪೈಕಿ ಈ ಬಾರಿ ಹೊಸದಾಗಿ 4.40 ಲಕ್ಷ ಮತದಾರರು ಸೇರ್ಪಡೆಗೊಂಡಿದ್ದಾರೆ. ಇದರಲ್ಲಿ ಶೇ. 75ರಿಂದ 80ರಷ್ಟು ಜನರಿಗೆ “ಎಪಿಕ್‌ ಕಾರ್ಡ್‌’ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್‌. ಮಂಜುನಾಥ ಪ್ರಸಾದ್‌ ಹೇಳುತ್ತಾರೆ.

ಚುನಾವಣಾಧಿಕಾರಿಗಳ ಪ್ರಕಾರವೇ ಲೆಕ್ಕಹಾಕಿದರೂ 90 ಸಾವಿರಕ್ಕೂ ಅಧಿಕ ಜನರಿಗೆ ಮತದಾರರ ಗುರುತಿನ ಚೀಟಿ ಈಗಲೂ ಮರೀಚಿಕೆಯಾಗಿದೆ. ಅದರಲ್ಲೂ ಎಪಿಕ್‌ ಕಾರ್ಡ್‌ ವಂಚಿತರ ಪೈಕಿ ಬಹುತೇಕರು 2017ರ ಆಗಸ್ಟ್‌, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ನೋಂದಣಿ ಆಗಿದ್ದಾರೆ.

ವಾರ್ಡ್‌ ಕಚೇರಿಗಳಲ್ಲಿ ಮತದಾರರ ಗುರುತಿನ ಚೀಟಿ ಕೇಳಿದರೆ, ಕಂದಾಯ ಅಧಿಕಾರಿಗಳ ಬಳಿ ಕಳುಹಿಸುತ್ತಾರೆ. ಅಲ್ಲಿಗೆ ಹೋದರೆ, ಈಗಾಗಲೇ ವಾರ್ಡ್‌ ಕಚೇರಿಗೆ ಕೊಟ್ಟಾಗಿದೆ ಎಂಬ ಉತ್ತರ ಬರುತ್ತದೆ. ಇನ್ನು “ಬೆಂಗಳೂರು ಒನ್‌’ನಲ್ಲಿ ಕೂಡ ಇದೇ ಉತ್ತರ ಬರುತ್ತದೆ ಎಂದು ಅಕ್ಟೋಬರ್‌ನಲ್ಲಿ ನೋಂದಣಿಯಾದ ಬಸವನಗುಡಿಯ ಮೋಹನ್‌ ಕೇಳುತ್ತಾರೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.