3 ಕ್ಷೇತ್ರಗಳಲ್ಲಿ 9.80 ಲಕ್ಷ ಮತದಾರರು


Team Udayavani, Jan 16, 2023, 10:07 AM IST

tdy-3

ಬೆಂಗಳೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಡೆಸಲಾಗಿರುವ ಮತದಾರರ ಪಟ್ಟಿ ವಿಶೇಷ ಸಂಸ್ಕರಣೆ ಅಂತಿಮಗೊಂಡಿದ್ದು, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಬಾಕಿ ಇದ್ದ 3 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಭಾನುವಾರ ಪ್ರಕಟಿಸಲಾಗಿದೆ.

ಅದರಂತೆ ಚಿಕ್ಕಪೇಟೆ, ಶಿವಾಜಿನಗರ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮವಾಗಿ 9,80,542 ಮತದಾರರಿದ್ದಾರೆ. 2020ರ ಡಿಸೆಂಬರ್‌ ತಿಂಗಳಲ್ಲೇ ಪ್ರಕಟವಾಗ ಬೇಕಿದ್ದ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿ ಒಂದು ತಿಂಗಳ ನಂತರ ಪ್ರಕಟಗೊಂಡಿದೆ.

ಮತದಾರರ ಮಾಹಿತಿ ಸೋರಿಕೆ ಸೇರಿ ಇನ್ನಿತರ ಕಾರಣಗಳಿಂದಾಗಿ ಮತದಾರರ ಪಟ್ಟಿಯನ್ನು ಕೂಲಂಕುಷವಾಗಿ ಪರಿಶೀಲನೆಗೆ ಚುನಾವಣಾ ಆಯೋಗ ಕ್ರಮ ಕೈಗೊಂಡಿತ್ತು. ನಗರ ಜಿಲ್ಲೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಕಳೆದ ಜ. 5ರಂದೇ ಪ್ರಕಟಿಸಲಾಗಿತ್ತು. ಇದೀಗ ಭಾನುವಾರ ಉಳಿದ ಮೂರು ಕ್ಷೇತ್ರಗಳಾದ ಚಿಕ್ಕಪೇಟೆ, ಶಿವಾಜಿನಗರ ಮತ್ತು ಮಹದೇವಪುರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ.

ನೂತನ ಪಟ್ಟಿಯಂತೆ ಕರಡು ಪಟ್ಟಿಗಿಂತ 13,726 ಮತದಾರರು ಹೆಚ್ಚಾಗುವಂತಾಗಿದೆ. ಅಲ್ಲದೆ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟಾರೆ ಮತದಾರರ ಸಂಖ್ಯೆ 92,09,917ಕ್ಕೇರಿದೆ.

ಕಳೆದ ನವೆಂಬರ್‌ನಲ್ಲಿ ಪ್ರಕಟಿಸಲಾಗಿದ್ದ ಚಿಕ್ಕ ಪೇಟೆ, ಶಿವಾಜಿನಗರ ಮತ್ತು ಮಹದೇವಪುರ ವಿಧಾ ನಸಭಾ ಕ್ಷೇತ್ರಗಳ ಕರಡು ಪಟ್ಟಿಯಲ್ಲಿ 9,66,816 ಮತದಾರರಿದ್ದರು. ಇದೀಗ ಆ ಸಂಖ್ಯೆ 9,80,542ಕ್ಕೆ ಹೆಚ್ಚಳವಾಗಿದೆ. ಅದರಲ್ಲಿ 5,15,983 ಪುರುಷ, 4,64,415 ಮಹಿಳಾ ಮತದಾರರಿದ್ದಾತೆ. ಉಳಿದಂತೆ 144 ಇತರೆ ಮತದಾರರಿದ್ದಾರೆ. 2022ರ ಜ. 13ರ ವೇಳೆಗೆ ಈ ಮೂರು ಕ್ಷೇತ್ರಗಳಲ್ಲಿ 9,98,078 ಮತದಾರರಿದ್ದರು. ಅದನ್ನು ಗಮನಿಸಿದರೆ ಒಂದೇ ವರ್ಷದಲ್ಲಿ ಈ ಮೂರು ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ 17,536 ಕಡಿಮೆಯಾಗುವಂತಾಗಿದೆ.

94 ಸಾವಿರ ಮತದಾರರ ಹೆಚ್ಚಳ: ಮೂರು ಕ್ಷೇತ್ರಗಳ ಅಂತಿಮ ಪಟ್ಟಿ ಪ್ರಕಟದ ನಂತರ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕರಡು ಮತದಾರರ ಪಟ್ಟಿಗಿಂತ 94,112 ಮತದಾರರು ಹೆಚ್ಚಾಗುವಂತಾಗಿದೆ.

ಕರಡು ಪಟ್ಟಿಯಲ್ಲಿ 91,15,805 ಮತ ದಾರರಿದ್ದರು. ಅದೇ ಅಂತಿಮ ಪಟ್ಟಿಯಲ್ಲಿ ಒಟ್ಟಾರೆ 92,09,917 ಮತದಾರರಿದ್ದಾರೆ. ಅದನ್ನು ಗಮನಿಸಿ ದರೆ ಮತದಾರರ ಸಂಖ್ಯೆ ಎರಡು ತಿಂಗಳಲ್ಲಿ ಗಣ ನೀಯ ಪ್ರಮಾಣದಲ್ಲಿ ಹೆಚ್ಚಳವಾಗುವಂತಾಗಿದೆ.

ತಪ್ಪುಗಳು ಇದ್ದರೆ ಸರಿಪಡಿಸಿಕೊಳ್ಳಿ : ಅಂತಿಮ ಪಟ್ಟಿಯನ್ನು ವಿಎಚ್‌ಎ ಮೊಬೈಲ್‌ ಆ್ಯಪ್‌ ಮತ್ತು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್‌ (ಎನ್‌ವಿಎಸ್‌ಪಿ)ನಲ್ಲಿ ಮತದಾರರು ಮಾಹಿತಿಯನ್ನು ಪರೀಕ್ಷಿಸಿಕೊಳ್ಳಬಹುದು. ಅದರಲ್ಲಿ ತಪ್ಪುಗಳಿದ್ದರೆ ಚುನಾವಣಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ನೋಂದಣಾಧಿಕಾರಿಗಳ ಕಚೇರಿ, ವಾರ್ಡ್‌ ಕಚೇರಿ ಹಾಗೂ ಬೂತ್‌ ಮಟ್ಟದ ಅಧಿಕಾರಿಗಳ ಬಳಿ ನಮೂನೆ 6, 7 ಮತ್ತು 8ರಲ್ಲಿ ಆಕ್ಷೇಪಣೆ ಸಲ್ಲಿಸಿ ಸರಿಪಡಿಸಿಕೊಳ್ಳಬಹುದಾಗಿದೆ.

2.82 ಲಕ್ಷ ಇಳಿಕೆ : ಕಳೆದ 2022ರ ಜನವರಿಯಲ್ಲಿ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಅಂತಿಮ ಮತ ದಾರ ಪಟ್ಟಿಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 94,92,539 ಮತದಾರರಿದ್ದರು. ಈ ಬಾರಿಯ ಅಂತಿಮ ಮತದಾರ ಪಟ್ಟಿಯಲ್ಲಿ 92,09,917 ಮತದಾರರಿ ದ್ದಾರೆ. ಇದನ್ನು ಗಮನಿಸಿದರೆ ಕಳೆದ ಒಂದು ವರ್ಷದಲ್ಲಿ ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,82,622 ಮತದಾರರು ಕಡಿಮೆ ಆಗಿದ್ದಾರೆ. ಈ ಪೈಕಿ 1,53,646 ಪುರುಷರು, 1,30,643 ಮಹಿಳಾ ಮತದಾರರ ಸಂಖ್ಯೆ ಕಡಿಮೆಯಾದರೆ, ಲೈಂಗಿಕ ಅಲ್ಪಸಂಖ್ಯಾತ ಮತದಾರರ ಸಂಖ್ಯೆಯಲ್ಲಿ 743 ಏರಿಕೆಯಾಗಿದೆ.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.