ಟಿಕೆಟ್‌ ಮೇಲೆ ಮತದಾನ ಜಾಗೃತಿ ಸಂದೇಶ


Team Udayavani, Apr 22, 2018, 12:21 PM IST

ticket-mela.jpg

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಶನಿವಾರ ಪ್ರಯಾಣಿಕರಿಗೆ ಅಚ್ಚರಿ ಕಾದಿತ್ತು. ಬಸ್‌ ಏರಿದ ತಕ್ಷಣ ನಿರ್ವಾಹಕರು ಟಿಕೆಟ್‌ ಕೈಗಿಟ್ಟರು. ಅದರಲ್ಲಿ ಎಲ್ಲಿಂದ ಎಲ್ಲಿಗೆ ಪ್ರಯಾಣ ಮತ್ತು ಪ್ರಯಾಣ ದರ ಎಷ್ಟು ಎಂಬುದರ ಜತೆಗೆ ಮತದಾನದ ಹಕ್ಕು ನೆನಪಿಸುವ ಸಂದೇಶವೂ ಇತ್ತು.

ಹೌದು, ಸಾಮಾಜಿಕ ಜಾಲತಾಣ, ಮೊಬೈಲ್‌ ಸಂದೇಶ, ಜಾಹಿರಾತುಗಳ ನಡುವೆ ಕೆಎಸ್‌ಆರ್‌ಟಿಸಿ ಕೂಡ ಸದ್ದಿಲ್ಲದೆ ಮತದಾನ ಜಾಗೃತಿ ಅಭಿಯಾನ ಆರಂಭಿಸಿದೆ. ಶನಿವಾರದಿಂದ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರ ಟಿಕೆಟ್‌ನ ಕೆಳಭಾಗದಲ್ಲಿ “ಮೇ 12ರಂದು ಮತದಾನ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ’ ಎಂದು ಸೂಚಿಸಲಾಗಿದೆ.

ನಿತ್ಯ ಕೆಎಸ್‌ಆರ್‌ಟಿಸಿ 8,800 ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದು, ಅದರಲ್ಲಿ 28 ಲಕ್ಷ ಜನ ಪ್ರಯಾಣಿಸುತ್ತಾರೆ. ಈ ಪೈಕಿ ಶೇ. 20ರಷ್ಟು ಇ-ಬುಕಿಂಗ್‌ ಮೂಲಕ ಟಿಕೆಟ್‌ ಕಾಯ್ದಿರಿಸಲಾಗುತ್ತದೆ. ಉಳಿದ 22 ಲಕ್ಷ ಪ್ರಯಾಣಿಕರು ನೇರವಾಗಿ ನಿರ್ವಾಹಕರಿಂದ ಟಿಕೆಟ್‌ ಪಡೆದು ಪ್ರಯಾಣಿಸುತ್ತಾರೆ. ಅವರೆಲ್ಲರಿಗೂ ಈ ಜಾಗೃತಿ ಸಂದೇಶ ಮುದ್ರಿತ ರೂಪದಲ್ಲಿ ತಲುಪಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. 

ಬಿಎಂಟಿಸಿ ಬಸ್‌ಗಳಲ್ಲೂ ಅಭಿಯಾನ?: ಕೆಎಸ್‌ಆರ್‌ಟಿಸಿ ಜಾಗೃತಿ ಅಭಿಯಾನದ ಬೆನ್ನಲ್ಲೇ ಬಿಎಂಟಿಸಿ ಕೂಡ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಬಸ್‌ಗಳಲ್ಲಿ ಮತದಾನದ ಅರಿವು ಮೂಡಿಸುವ ಸಂದೇಶಗಳನ್ನು ಬಿತ್ತರಿಸಲು ಉದ್ದೇಶಿಸಿದೆ. ಬಹುತೇಕ ಬಸ್‌ಗಳ ಒಳಭಾಗದಲ್ಲಿ ಎಲೆಕ್ಟ್ರಾನಿಕ್‌ ಫ‌ಲಕಗಳು ಇವೆ.

ಅವುಗಳಲ್ಲಿ ಪ್ರಯಾಣಿಕರಿಗೆ ಮತದಾನದ ಮಹತ್ವ, ಚುನಾವಣೆ ದಿನ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುವಂತೆ ಮನವಿ ಮಾಡುವ ಸಂದೇಶಗಳನ್ನು ನಿರಂತರವಾಗಿ ಬಿತ್ತರಿಸಲು ಉದ್ದೇಶಿಸಿದೆ. ಬಿಎಂಟಿಸಿ ವ್ಯಾಪ್ತಿಯಲ್ಲಿ ಸುಮಾರು 6 ಸಾವಿರ ಬಸ್‌ಗಳಿದ್ದು, ಆ ಪೈಕಿ ಗುತ್ತಿಗೆ ನೀಡಿರುವುದನ್ನು ಹೊರತುಪಡಿಸಿ ಉಳಿದ ಬಸ್‌ಗಳಲ್ಲಿ ಅಳವಡಿಕೆಗೆ ಚಿಂತನೆ ನಡೆದಿದೆ.

ನಗರದ ಬಸ್‌ಗಳಲ್ಲಿ ಪ್ರಯಾಣಿಕರು ತುಂಬಾ ಸಮಯ ಕಳೆಯುವುದರಿಂದ ಇದು ಪರಿಣಾಮಕಾರಿಯೂ ಆಗಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್‌ ಮಾಹಿತಿ ನೀಡಿದರು. ಟಿಕೆಟ್‌ಗಳಲ್ಲಿ ಈ ರೀತಿ ಮುದ್ರಿಸುವುದು ಕಷ್ಟ. ಯಾಕೆಂದರೆ, ಬಿಎಂಟಿಸಿ ಟಿಕೆಟ್‌ ವಿತರಣಾ ಯಂತ್ರ ಮತ್ತು ಸ್ಮಾರ್ಟ್‌ಕಾರ್ಡ್‌ ಹಾಗೂ ಪೂರ್ವಮುದ್ರಿತ ದಿನದ ಪಾಸುಗಳು ಸೇರಿದಂತೆ ಎಲ್ಲ ಕಡೆಗೂ ಬದಲಾವಣೆ ಮಾಡಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸಮಯ ಹಿಡಿಯುತ್ತದೆ. ಆದ್ದರಿಂದ ಈ ಆಲೋಚನೆ ಕೈಬಿಡಲಾಗಿದೆ ಎಂದೂ ಅವರು ಸ್ಪಷ್ಟಪಡಿಸಿದರು. 

ಸೂಚನೆ ಬಂದರೆ ಪರಿಶೀಲನೆ: ನಗರದಲ್ಲಿ ಸಂಚರಿಸುವ ಉಪನಗರ ರೈಲುಗಳಲ್ಲಿ ಸದ್ಯಕ್ಕೆ ಮತದಾನ ಜಾಗೃತಿ ಮೂಡಿಸುವ ಅಭಿಯಾನದ ಬಗ್ಗೆ ಯಾವುದೇ ಆಲೋಚನೆಗಳಿಲ್ಲ. ಆದರೆ ಚುನಾವಣಾ ಆಯೋಗದಿಂದ ಸೂಚನೆ ಬಂದರೆ, ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನೈರುತ್ಯ ರೈಲ್ವೆ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಎನ್‌.ಎಸ್‌. ಶ್ರೀಧರಮೂರ್ತಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.