ಟಿಕೆಟ್‌ ಮೇಲೆ ಮತದಾನ ಜಾಗೃತಿ ಸಂದೇಶ


Team Udayavani, Apr 22, 2018, 12:21 PM IST

ticket-mela.jpg

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಶನಿವಾರ ಪ್ರಯಾಣಿಕರಿಗೆ ಅಚ್ಚರಿ ಕಾದಿತ್ತು. ಬಸ್‌ ಏರಿದ ತಕ್ಷಣ ನಿರ್ವಾಹಕರು ಟಿಕೆಟ್‌ ಕೈಗಿಟ್ಟರು. ಅದರಲ್ಲಿ ಎಲ್ಲಿಂದ ಎಲ್ಲಿಗೆ ಪ್ರಯಾಣ ಮತ್ತು ಪ್ರಯಾಣ ದರ ಎಷ್ಟು ಎಂಬುದರ ಜತೆಗೆ ಮತದಾನದ ಹಕ್ಕು ನೆನಪಿಸುವ ಸಂದೇಶವೂ ಇತ್ತು.

ಹೌದು, ಸಾಮಾಜಿಕ ಜಾಲತಾಣ, ಮೊಬೈಲ್‌ ಸಂದೇಶ, ಜಾಹಿರಾತುಗಳ ನಡುವೆ ಕೆಎಸ್‌ಆರ್‌ಟಿಸಿ ಕೂಡ ಸದ್ದಿಲ್ಲದೆ ಮತದಾನ ಜಾಗೃತಿ ಅಭಿಯಾನ ಆರಂಭಿಸಿದೆ. ಶನಿವಾರದಿಂದ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರ ಟಿಕೆಟ್‌ನ ಕೆಳಭಾಗದಲ್ಲಿ “ಮೇ 12ರಂದು ಮತದಾನ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ’ ಎಂದು ಸೂಚಿಸಲಾಗಿದೆ.

ನಿತ್ಯ ಕೆಎಸ್‌ಆರ್‌ಟಿಸಿ 8,800 ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದು, ಅದರಲ್ಲಿ 28 ಲಕ್ಷ ಜನ ಪ್ರಯಾಣಿಸುತ್ತಾರೆ. ಈ ಪೈಕಿ ಶೇ. 20ರಷ್ಟು ಇ-ಬುಕಿಂಗ್‌ ಮೂಲಕ ಟಿಕೆಟ್‌ ಕಾಯ್ದಿರಿಸಲಾಗುತ್ತದೆ. ಉಳಿದ 22 ಲಕ್ಷ ಪ್ರಯಾಣಿಕರು ನೇರವಾಗಿ ನಿರ್ವಾಹಕರಿಂದ ಟಿಕೆಟ್‌ ಪಡೆದು ಪ್ರಯಾಣಿಸುತ್ತಾರೆ. ಅವರೆಲ್ಲರಿಗೂ ಈ ಜಾಗೃತಿ ಸಂದೇಶ ಮುದ್ರಿತ ರೂಪದಲ್ಲಿ ತಲುಪಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. 

ಬಿಎಂಟಿಸಿ ಬಸ್‌ಗಳಲ್ಲೂ ಅಭಿಯಾನ?: ಕೆಎಸ್‌ಆರ್‌ಟಿಸಿ ಜಾಗೃತಿ ಅಭಿಯಾನದ ಬೆನ್ನಲ್ಲೇ ಬಿಎಂಟಿಸಿ ಕೂಡ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಬಸ್‌ಗಳಲ್ಲಿ ಮತದಾನದ ಅರಿವು ಮೂಡಿಸುವ ಸಂದೇಶಗಳನ್ನು ಬಿತ್ತರಿಸಲು ಉದ್ದೇಶಿಸಿದೆ. ಬಹುತೇಕ ಬಸ್‌ಗಳ ಒಳಭಾಗದಲ್ಲಿ ಎಲೆಕ್ಟ್ರಾನಿಕ್‌ ಫ‌ಲಕಗಳು ಇವೆ.

ಅವುಗಳಲ್ಲಿ ಪ್ರಯಾಣಿಕರಿಗೆ ಮತದಾನದ ಮಹತ್ವ, ಚುನಾವಣೆ ದಿನ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುವಂತೆ ಮನವಿ ಮಾಡುವ ಸಂದೇಶಗಳನ್ನು ನಿರಂತರವಾಗಿ ಬಿತ್ತರಿಸಲು ಉದ್ದೇಶಿಸಿದೆ. ಬಿಎಂಟಿಸಿ ವ್ಯಾಪ್ತಿಯಲ್ಲಿ ಸುಮಾರು 6 ಸಾವಿರ ಬಸ್‌ಗಳಿದ್ದು, ಆ ಪೈಕಿ ಗುತ್ತಿಗೆ ನೀಡಿರುವುದನ್ನು ಹೊರತುಪಡಿಸಿ ಉಳಿದ ಬಸ್‌ಗಳಲ್ಲಿ ಅಳವಡಿಕೆಗೆ ಚಿಂತನೆ ನಡೆದಿದೆ.

ನಗರದ ಬಸ್‌ಗಳಲ್ಲಿ ಪ್ರಯಾಣಿಕರು ತುಂಬಾ ಸಮಯ ಕಳೆಯುವುದರಿಂದ ಇದು ಪರಿಣಾಮಕಾರಿಯೂ ಆಗಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್‌ ಮಾಹಿತಿ ನೀಡಿದರು. ಟಿಕೆಟ್‌ಗಳಲ್ಲಿ ಈ ರೀತಿ ಮುದ್ರಿಸುವುದು ಕಷ್ಟ. ಯಾಕೆಂದರೆ, ಬಿಎಂಟಿಸಿ ಟಿಕೆಟ್‌ ವಿತರಣಾ ಯಂತ್ರ ಮತ್ತು ಸ್ಮಾರ್ಟ್‌ಕಾರ್ಡ್‌ ಹಾಗೂ ಪೂರ್ವಮುದ್ರಿತ ದಿನದ ಪಾಸುಗಳು ಸೇರಿದಂತೆ ಎಲ್ಲ ಕಡೆಗೂ ಬದಲಾವಣೆ ಮಾಡಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸಮಯ ಹಿಡಿಯುತ್ತದೆ. ಆದ್ದರಿಂದ ಈ ಆಲೋಚನೆ ಕೈಬಿಡಲಾಗಿದೆ ಎಂದೂ ಅವರು ಸ್ಪಷ್ಟಪಡಿಸಿದರು. 

ಸೂಚನೆ ಬಂದರೆ ಪರಿಶೀಲನೆ: ನಗರದಲ್ಲಿ ಸಂಚರಿಸುವ ಉಪನಗರ ರೈಲುಗಳಲ್ಲಿ ಸದ್ಯಕ್ಕೆ ಮತದಾನ ಜಾಗೃತಿ ಮೂಡಿಸುವ ಅಭಿಯಾನದ ಬಗ್ಗೆ ಯಾವುದೇ ಆಲೋಚನೆಗಳಿಲ್ಲ. ಆದರೆ ಚುನಾವಣಾ ಆಯೋಗದಿಂದ ಸೂಚನೆ ಬಂದರೆ, ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನೈರುತ್ಯ ರೈಲ್ವೆ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಎನ್‌.ಎಸ್‌. ಶ್ರೀಧರಮೂರ್ತಿ ತಿಳಿಸಿದ್ದಾರೆ. 

Ad

ಟಾಪ್ ನ್ಯೂಸ್

2

Ravi Teja: ಟಾಲಿವುಡ್‌ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್‌ ನಿಧನ  

1-aa-fouja

ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ

Kodimatha Swamij

Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ

1

Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

Shivakumar-DK

Greater Bengaluru; ಐದು ನಗರ ಪಾಲಿಕೆ ರಚನೆ ಶತಸಿದ್ಧ: ಡಿ.ಕೆ.ಶಿವಕುಮಾರ್‌ 

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

ಕಲಾವಿದನಿಗೆ ನಿಂದನೆ: ಕನ್ನಡ, ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿರುದ್ಧ ಪ್ರಕರಣ

ಕಲಾವಿದನಿಗೆ ನಿಂದನೆ: ಕನ್ನಡ, ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿರುದ್ಧ ಪ್ರಕರಣ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

2

Ravi Teja: ಟಾಲಿವುಡ್‌ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್‌ ನಿಧನ  

1-aa-fouja

ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ

Kodimatha Swamij

Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ

1

Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.