ಸೋಂಕಿತರಿಗೂ ಮತದಾನದ ಅವಕಾಶ

ಮತದಾನ ಕೊನೆ ಒಂದು ಗಂಟೆ ಕೋವಿಡ್ ದೃಢಪಟ್ಟವರಿಗೆ ಮೀಸಲು

Team Udayavani, Oct 30, 2020, 11:54 AM IST

ಸೋಂಕಿತರಿಗೂ ಮತದಾನದ ಅವಕಾಶ

ಬೆಂಗಳೂರು/ಕೆಂಗೇರಿ: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಕೋವಿಡ್ ದೃಢಪಟ್ಟವರಿಗೂ ನ.3ರ ಚುನಾವಣೆ ದಿನದ ಸಂಜೆ 5 ರಿಂದ 6 ಗಂಟೆಯ ವರೆಗಿನ ಕೊನೆಯ ಒಂದು ಗಂಟೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.3ಕ್ಕೆ ಆರ್‌.ಆರ್‌.ನಗರ ಉಪಚುನಾವಣೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಂಕಿತರಿಗೂ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ 17 ದಿನದಲ್ಲಿ 1177 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಎಲ್ಲರಿಗೂ

ಮಾಸ್ಕ್, ಫೇಸ್‌ ಶೀಲ್ಡ್, ಗ್ಲೌಸ್‌, ಪಿಪಿಇ ಕಿಟ್‌ ನೀಡುತ್ತೇವೆ. ಸೋಂಕು ದೃಢಪಟ್ಟು ಮತದಾನ ಮಾಡಲುಇಚ್ಚಿಸು ವವರಿಗೆ ಕಂಟ್ರೋಲ್‌ ರೂಂ ಸಿಬ್ಬಂದಿ ಕರೆ ಮಾಡಲಿದ್ದಾರೆ. ಸೋಂಕಿತರಿಗೆ ಮತದಾನದ ವ್ಯವಸ್ಥೆಗಾಗಿ ಆರ್‌.ಆರ್‌.ನಗರ 9 ವಾರ್ಡ್‌ಗೂ ತಲಾ ಹತ್ತು ಆ್ಯಂಬುಲೆನ್ಸ್‌ನಂತೆ ಒಟ್ಟು 90 ಆಂಬುಲೆನ್ಸ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 4.30ಕ್ಕೆ ಕೋವಿಡ್ ಸೋಂಕು ದೃಢಪಟ್ಟವರ ಮನೆಯ ಮುಂದೆ ಆ್ಯಂಬುಲೆನ್ಸ್‌ ಹೋಗಲಿದೆ. ಪಿಪಿಇ ಕಿಟ್‌ ಧರಿಸಿದ ಸಿಬ್ಬಂದಿ ಮತದಾನದ ಕಡೇ ಒಂದು ಗಂಟೆ 5 ರಿಂದ 6 ಗಂಟೆಯವರೆಗೆ ಮತದಾನ ಮಾಡಿಸಿ, ವಾಪಸ್‌ ಮನೆಗೆ ಬಿಡಲಾಗುತ್ತದೆ ಎಂದರು.

ಅ.28ರ ವರೆಗೆ ಆರ್‌.ಆರ್‌. ನಗರದಲ್ಲಿ ಕೋವಿಡ್ ದೃಢಪಟ್ಟವರಲ್ಲಿ ಆಸ್ಪತ್ರೆಯಲ್ಲಿ 317 ಜನ, ಮನೆಯಲ್ಲಿ 842 ಹಾಗೂ ಕೋವಿಡ್‌ ಆರೈಕೆ ಕೇಂದ್ರದಲ್ಲಿ 17ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ದೃಢಪಟ್ಟವರು ಮತದಾನ ಮಾಡಲು ಬರುವ ಸಂದರ್ಭದಲ್ಲಿ ಕೊರೊನೇತರರು ಮತದಾನಕ್ಕೆ ಬಂದರೂ, ಮತಗಟ್ಟೆ ಪೂರ್ಣ ಸ್ಯಾನಿಟೈಸ್‌ ಮಾಡಿ, ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ವೃದ್ಧರಿಗೆ, ದಿವ್ಯಾಂಗರಿಗೆ ಪೋಸ್ಟಲ್‌ ಬ್ಯಾಲೆಟ್‌: ಆರ್‌.ಆರ್‌. ನಗರಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ 5,560 ಹಿರಿಯ ನಾಗರಿಕರು ಹಾಗೂ 695 ಜನ ವಿಕಲಚೇತರು ಇದ್ದಾರೆ. ಇವರಲ್ಲಿ 489 ಹಿರಿಯ ಮತದಾರರು ಹಾಗೂ 23 ವಿಕಲಚೇತನರು ಪೋಸ್ಟಲ್‌ ಬ್ಯಾಲೆಟ್‌ನ ಮೂಲಕ ಮತದಾನ ಮಾಡಲು ಇಚ್ಛಿಸಿದ್ದಾರೆ. ಪಾಲಿಕೆ ಸಿಬ್ಬಂದಿ ಇವರ ಮನೆಗೇ ಭೇಟಿ ನೀಡಿ, ಮತದಾನ ಮಾಡಲು ಅವಕಾಶ ಕಲ್ಪಿಸಲಿದ್ದಾರೆ. ಈ ಪ್ರಕ್ರಿಯೆ ಸಂಪೂರ್ಣ ವಿಡಿಯೋ ಚಿತ್ರಣ ನಡೆಯಲಿದೆ ಎಂದರು.

ನೋಟಾಗಾಗಿ ಪ್ರತ್ಯೇಕ ಬ್ಯಾಲೆಟ್‌ ಯೂನಿಟ್‌: ಸಾಮಾನ್ಯವಾಗಿ ಬ್ಯಾಲೆಟ್‌ ಯೂನಿಟ್‌ನಲ್ಲಿ ಕೊನೆಯ ಆಯ್ಕೆಯಲ್ಲಿ ನೋಟಾ ಚಲಾವಣೆಗೆ ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಆರ್‌.ಆರ್‌ ನಗರದಲ್ಲಿ 16 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹೀಗಾಗಿ, ನೋಟಾ ಚಲಾವಣೆಗೆ ಪ್ರತ್ಯೇಕ ಬ್ಯಾಲೆಟ್‌ ಯೂನಿಟ್‌ ವ್ಯವಸ್ಥೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.