ಮತದಾನ ಶಾಂತಿಯುತ, ಫ‌ಲಿತಾಂಶದತ್ತ ಎಲ್ಲರ ಚಿತ್ತ


Team Udayavani, Nov 4, 2018, 6:00 AM IST

181103kpn33.jpg

ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸೇರಿ ಐದು ಕ್ಷೇತ್ರಗಳ ಉಪ ಚುನಾವಣೆಗೆ ಶನಿವಾರ ನಡೆದ ಮತದಾನ ಶಾಂತಿಯುತವಾಗಿ ನಡೆದಿದ್ದು, ಶೇ.65.56ರಷ್ಟು ಮತದಾನವಾಗಿದೆ.

ಲೋಕಸಭಾ ಕ್ಷೇತ್ರಗಳ ಪೈಕಿ ಶಿವಮೊಗ್ಗ ಕ್ಷೇತ್ರದಲ್ಲಿ ಅತಿ ಹೆಚ್ಚು, ಶೇ.61.05ರಷ್ಟು ಮತದಾನವಾಗಿದ್ದರೆ, ಮಂಡ್ಯ ಕ್ಷೇತ್ರದಲ್ಲಿ ಅತಿ ಕಡಿಮೆ, ಶೇ.53.93 ರಷ್ಟು ಮತದಾನವಾಗಿದೆ. ಉಳಿದಂತೆ ಬಳ್ಳಾರಿ ಕ್ಷೇತ್ರದಲ್ಲಿ ಶೇ.63.85 ರಷ್ಟು ಮತದಾನವಾಗಿದೆ. ವಿಧಾನಸಭಾ ಕ್ಷೇತ್ರಗಳ ಪೈಕಿ ರಾಮನಗರ ಕ್ಷೇತ್ರದಲ್ಲಿ ಅತಿ ಹೆಚ್ಚು, ಶೇ.71.88 ರಷ್ಟು ಮತದಾನವಾಗಿದ್ದರೆ, ಜಮಖಂಡಿ ಕ್ಷೇತ್ರದಲ್ಲಿ ಶೇ.77.17 ರಷ್ಟು ಮತದಾನವಾಗಿದೆ.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ಕ್ಕೆ ಮುಕ್ತಾಯವಾಯಿತು. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ದಿ.ಎಸ್‌.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ, ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಎಸ್‌.ಉಗ್ರಪ್ಪ, ಶಾಸಕ ಶ್ರೀರಾಮುಲು ಸಹೋದರಿ ಶಾಂತಾ, ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿಯವರ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ನ.6ರಂದು ಮತಗಳ ಎಣಿಕೆ ನಡೆಯಲಿದೆ.

ಮತದಾನ ಆರಂಭದಲ್ಲಿ ನೀರಸವಾಗಿತ್ತು. 9 ಗಂಟೆ ಹೊತ್ತಿಗೆ ಗ್ರಾಮೀಣ ಪ್ರದೇಶಗಳಲ್ಲಿ ಒಂದಷ್ಟು ಬಿರುಸು ಕಂಡಿತ್ತಾದರೂ ನಗರ ಪ್ರದೇಶಗಳಲ್ಲಿ ಮಾತ್ರ ಮತದಾನ ಮಂದಗತಿಯಲ್ಲಿತ್ತು. ಮಹಿಳೆಯರಿಗಾಗಿ ಸ್ಥಾಪಿಸಿದ್ದ ಸಖೀ ಪಿಂಕ್‌ ಮತಗಟ್ಟೆಗಳಲ್ಲೂ ವನಿತೆಯರು ಇರಲಿಲ್ಲ. ಸಂಜೆ ಮುಕ್ತಾಯದ ವೇಳೆಗೆ ಕೆಲವೆಡೆ ಉತ್ತಮ ಪ್ರತಿಕ್ರಿಯೆ ಕಂಡು ಬಂತು. ಎಂದಿನಂತೆ ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದ ಮತದಾರರು ತಮ್ಮ ಹಕ್ಕು ಚಲಾಯಿಸುವಲ್ಲಿ ಉತ್ಸಾಹ ತೋರಿದರು.

ಈ ಮಧ್ಯೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಅರೆ ಸೇನಾಪಡೆಯ ಯೋಧರನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಹರಿಶ್ಚಂದ್ರನಗರ, ಮಂಡ್ಯ ಜಿಲ್ಲೆ ಭಾರತೀನಗರದ 182ನೇ ಮತಗಟ್ಟೆ, ಕರಡಕೆರೆ ಸೇರಿ ಕೆಲವೆಡೆ ಮತಯಂತ್ರಗಳಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತದಾನ ವಿಳಂಬವಾಗಿ ಆರಂಭವಾದರೆ, ಮೂಲಭೂತ ಸೌಕರ್ಯಗಳಿಗಾಗಿ ಒತ್ತಾಯಿಸಿ ಬಳ್ಳಾರಿ ತಾಲೂಕಿನ ಹರಗಿನಡೋಣಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಮುತೂRರ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಸೇರಿ ಕೆಲವೆಡೆ ಮತದಾನ ಬಹಿಷ್ಕರಿಸಿದ ಘಟನೆ ವರದಿಯಾಗಿದೆ.

ಲೋಕಸಭಾ ಕ್ಷೇತ್ರ    
ಶಿವಮೊಗ್ಗ    ಶೇ.61.05
ಮಂಡ್ಯ        ಶೇ.53.93
ಬಳ್ಳಾರಿ        ಶೇ.63.85
ವಿಧಾನಸಭಾ ಕ್ಷೇತ್ರ    
ರಾಮನಗರ        ಶೇ.71.88
ಜಮಖಂಡಿ        ಶೇ.77.17

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.