ಪ್ರಗತಿ ಆಧಾರದಲ್ಲಿ ಮತ ಯಾಚನೆ


Team Udayavani, May 8, 2018, 12:32 PM IST

pragati.jpg

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿರುವ ಮಾಜಿ ಉಪಮುಖ್ಯಮಂತ್ರಿ, ಹಾಲಿ ಬಿಜೆಪಿ ಶಾಸಕ ಆರ್‌.ಅಶೋಕ್‌ ಚುನಾವಣಾ ಪ್ರಚಾರ ಚುರುಕುಗೊಳಿಸಿದ್ದಾರೆ.

ನೂರಾರು ಬೆಂಬಲಿಗರು ಹಾಗೂ ಕಾರ್ಯಕರ್ತರ ಜತೆಗೂಡಿ ಕ್ಷೇತ್ರದಾದ್ಯಂತ ಪಾದಯಾತ್ರೆ, ಮನೆ ಮನೆ ಪ್ರಚಾರ ನಡೆಸುತ್ತಿದ್ದು, ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮತ್ತೂಮ್ಮೆ ಶಾಸಕನಾಗಿ ಆರಿಸುವಂತೆ ಮತದಾರರ ಬಳಿ ಸೋಮವಾರ ಕೋರಿದರು.

ಕರಿಸಂದ್ರ ವಾರ್ಡ್‌ನಲ್ಲಿ ಕಾರ್ಯಕರ್ತರ ಜತೆಗೂಡಿ ಪಾದಯಾತ್ರೆ ಮೂಲಕ ಪ್ರಚಾರಕ್ಕ ಆಗಮಿಸಿದ ಅಶೋಕ್‌ಗೆ, ಮಹಿಳೆಯರು ಆರತಿ ಎತ್ತುವ ಮೂಲಕ ಗೆಲುವು ಸಾಧಿಸುವಂತೆ ಹಾರೈಸಿದರು. ಕೇಂದ್ರಸರ್ಕಾರ ಹಾಗೂ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಯೋಜನೆಗಳನ್ನು ಮತದಾರರ  ಮುಂದಿಟ್ಟ ಅಶೋಕ್‌, ಈ ಬಾರಿಯೂ  ತಮ್ಮ ಪರ ಮತಚಲಾಯಿಸುವಂತೆ ಜನರಲ್ಲಿ ಮನವಿ ಮಾಡಿದರು.

ಕರಿಸಂದ್ರ ಸುತ್ತಮುತ್ತಲ ಭಾಗಗಳಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಅಶೋಕ್‌, ಕಳೆದ ಐದು ವರ್ಷಗಳಲ್ಲಿ ರಾಜ್ಯಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫ‌ಲವಾಗಿದೆ. ಜತೆಗೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ. ಮೂಲಭೂತ ಸೌಕರ್ಯಗಳು, ರಸ್ತೆಗಳ ಕಾಮಗಾರಿ ನಡೆಸದೆ ವಿಳಂಬ ಮಾಡಿದೆ ಎಂದು ಆರೋಪಿಸಿದರು. ಹೀಗಾಗಿ ಈ ಬಾರಿ ರಾಜ್ಯದ ಜನತೆ ಬದಲಾವಣೆ ಬಯಸಿದ್ದು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು  ಭರವಸೆ ವ್ಯಕ್ತಪಡಿಸಿದರು.

ಈ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕನಾಗಿ, ಸಾರಿಗೆ, ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಈ ಹಿಂದಿನ ಬಿಜೆಪಿ ಸರ್ಕಾರ ಬಡವರ, ಶೋಷಿತರ, ಹಿಂದುಳಿದವರ ಎಲ್ಲ ಸಮುದಾಯದವರಿಗೆ ಸಮಾನ ಆದ್ಯತೆ ನೀಡಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿತ್ತು. ಮತ್ತದೆ ಅಭಿವೃದ್ಧಿ ಆಡಳಿತ ನೀಡುವ  ಭರವಸೆಯೊಂದಿಗೆ ಈ ಬಾರಿ ಸರ್ಕಾರ ಬದಲಿಸಿ ಬಿಜೆಪಿ ಬೆಂಬಲಿಸಿ ಎಂದು ಕೋರಿದರು.

ಶಾಸಕನಾಗಿ ಕ್ಷೇತ್ರದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ ಕಾಮಗಾರಿ, ಉದ್ಯಾನವನಗಳ ನಿರ್ಮಾಣ ಸೇರಿ ಸರ್ಕಾರಿ ಯೋಜನೆಗಳು ಬಡವರಿಗೆ, ಅರ್ಹರಿಗೆ ತಲುಪುವಂತೆ ಮಾಡಿದ್ದೇನೆ. ಕ್ಷೇತ್ರದ ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಮತ್ತೂಮ್ಮೆ ಶಾಸಕನಾಗಿ ಗೆದ್ದೇ ಗೆಲ್ಲುವು ವಿಶ್ವಾಸವಿದೆ ಎಂದರು. ಅಲ್ಲದೆ, ಶಾಸಕನಾಗಿ ಮಾಡಿದ ಹಲವು ಜನಪರ ಕಾರ್ಯಗಳೇ ತಮಗೆ ಈ ಬಾರಿಯೂ ಶ್ರೀ ರಕ್ಷೆಯಾಗಲಿವೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.