ತಪ್ಪದೇ ಮಾಡಿ ಮತದಾನ: ಇಂದು ಮತದಾನ ಹಬ್ಬ

"ಉದಯವಾಣಿ' ಮತ ಜಾಗೃತಿ ಪ್ರಯತ್ನಕ್ಕೀಗ ಸಾರ್ಥಕತೆ ಕಾಲ

Team Udayavani, Apr 18, 2019, 3:00 AM IST

tappade

ಬೆಂಗಳೂರು: ಪ್ರಜಾತಂತ್ರ ಹಬ್ಬಕ್ಕೆ ಈಗ ಕ್ಷಣಗಣನೆ. ಈ ಹಬ್ಬದಲ್ಲಿ ನಗರದ ಎಲ್ಲ ವರ್ಗದ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿಸುವ ಕೆಲಸ “ಉದಯವಾಣಿ’ಯಿಂದ ಕಳೆದ ಒಂದು ತಿಂಗಳು ನಡೆಯಿತು. ಗುರುವಾರ ಆ ಪ್ರಯತ್ನದ ಸಾರ್ಥಕತೆಗೆ ಸಕಾಲ.

ಈ ಹಬ್ಬದಿಂದ ದೂರ ಉಳಿಯಲು ನಿರ್ಧರಿಸಿದ್ದ ಮತದಾರರನ್ನು ಹತ್ತಿರಕ್ಕೆ ಕರೆತರುವ ವೇದಿಕೆಯಾಗಿ, ಮತದಾರ ಎದುರಿಸುತ್ತಿರುವ ಸಮಸ್ಯೆಗಳಿಗೆ ದನಿಯಾಗಿ, ಈ ಕ್ರಿಯೆಯಲ್ಲಿ ಸಕ್ರಿಯವಾಗಿರುವ ಸಂಘ-ಸಂಸ್ಥೆಗಳು, ವ್ಯಕ್ತಿಗಳ ಪರವಾಗಿ ತಿಂಗಳಿಂದ ನಿರಂತರವಾಗಿ ಪತ್ರಿಕೆ ಕೆಲಸ ಮಾಡಿದೆ.

ಇದಕ್ಕಾಗಿಯೇ ಪುಟ ಮೀಸಲಿಟ್ಟು, ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿತು. ಕಾರ್ಮಿಕರು, ಯುವಕರು, ಪ್ರತಿಷ್ಠಿತರು, ಮಹಿಳೆಯರು, ಅಂಗವಿಕಲರು ಸೇರಿದಂತೆ ವಿವಿಧ ವರ್ಗಗಳ ಮತದಾರರನ್ನು ಸೇರಿಸುವ ಪ್ರಯತ್ನ ಈ ಮೂಲಕ ನಡೆಯಿತು.

ನಗರದಲ್ಲಿ ಸಾಕ್ಷರರ ಸಂಖ್ಯೆ ಗಣ್ಯವಾಗಿದ್ದರೂ, ಮತದಾನ ಮಾತ್ರ ನಗಣ್ಯವಾಗಿದೆ. ಇದರಲ್ಲಿ ಅಪಾರ್ಟ್‌ಮೆಂಟ್‌ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಲಾಯಿತು. “ಕಡ್ಡಾಯ ಮತದಾನ ನಾವೆಲ್ಲ ಕೈಜೋಡಿಸೋಣ’ ಅಭಿಯಾನದಡಿ ವಾಸ್ತವವಾಗಿ ಒಂದು ಮತದ ಮೌಲ್ಯ,

ಮಕ್ಕಳಿಗೂ ಒಂದು ಪ್ರಣಾಳಿಕೆ ಆಗಲಿ ಎಂಬ ಬೇಡಿಕೆ, ಮತದಾನ ಜಾಗೃತಿಗೆ ಆಯೋಗ ರಚಿಸಿದ ಒಂದು ನಿಮಿಷದ ಸಿನಿಮಾ, ವೋಟಿಂಗ್‌ಗೆ ಚಕ್ಕರ್‌ ಹಾಕಿ ಔಟಿಂಗ್‌ಗೆ ಹೊರಟವರಿಗೆ ವಸತಿ ಸೌಲಭ್ಯ ನೀಡವುದಿಲ್ಲ ಎಂಬ ದಿಟ್ಟ ನಿರ್ಧಾರ ಕೈಗೊಂಡ ಅಧಿಕಾರಿಗಳು, ಮದ್ಯ ನಿಷೇಧ ಮಾಡದಿರುವ ಜನಪ್ರತಿನಿಧಿಗಳ ವಿರುದ್ಧ “ನೋಟಾ’ ಅಸ್ತ್ರಕ್ಕೆ ಮುಂದಾದ ಮಹಿಳೆಯರ ಬಗ್ಗೆ,

ಯುವಜನ ಆಯೋಗದ ಒತ್ತಾಯ ಮುಂದಿಟ್ಟ ಯುವಪಡೆ, ರೈತ ಮಹಿಳೆಯರಿಗೆ ಮತದಾನದ ಪಾಠ ಹೀಗೆ ಹತ್ತುಹಲವು ರೀತಿಯಲ್ಲಿ ಮತದಾರರ ಜಾಗೃತಿ ಮೂಡಿಸಲಾಯಿತು. ಮತದಾರರನ್ನು ಪ್ರೋತ್ಸಾಯಿಸಲು ಹಲವು ರೀತಿಯ ಆಫ‌ರ್‌ಗಳು, ರಿಯಾಯ್ತಿಗಳ ಬಗ್ಗೆಯೂ ಗಮನಸೆಳೆಯಲಾಯಿತು.

ಅಲ್ಲದೆ, ಶಾಂತಿಯುತ ಮತದಾನದಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯೊಂದಿಗೆ ಕೈಜೋಡಿಸಿ, ನಗರದ ಪ್ರಮುಖ ಭಾಗಗಳಲ್ಲಿ ಸೈಕಲ್‌ ಜಾಥಾ ಮೂಲಕ ಅರಿವು ಕಾರ್ಯಕ್ರಮ ನಡೆಸಲಾಯಿತು. 50ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಇದರಲ್ಲಿ ಭಾಗವಹಿಸಿದ್ದರು. ಅಲ್ಲದೆ, ಸ್ವತಃ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ವಿಶೇಷ ಅತಿಥಿಯಾಗಿ ಉದಯವಾಣಿ ಪತ್ರಿಕೆ ಕಚೇರಿಗೆ ಆಹ್ವಾನಿಸಲಾಗಿತ್ತು.

ಐಪಿಎಲ್‌ ಕ್ರಿಕೆಟ್‌ ಪಂದ್ಯದಲ್ಲಿ ಒಂದೊಂದು ರನ್‌ ಕೂಡ ನಿರ್ಣಾಯಕ. ಅದೇ ರೀತಿ, ಚುನಾವಣೆಯಲ್ಲಿ ಕೂಡ ಒಂದೊಂದು ಮತವೂ ನಿರ್ಣಾಯಕವಾದುದು. ಆದ್ದರಿಂದ ತಪ್ಪದೇ ಮತ ಚಲಾಯಿಸಿ.
-ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.