ವಿ.ವಿ.ಪುರ ಸರ್ಕಾರಿ ಆಸ್ಪತ್ರೆಗೆ ಬೀಗ: ಪ್ರತಿಭಟನೆ
Team Udayavani, May 9, 2019, 3:05 AM IST
ಬೆಂಗಳೂರು: ವಿಶ್ವೇಶ್ವರಪುರದ ಸಜ್ಜನರಾವ್ ಸರ್ಕಲ್ ಸಮೀಪದ ಸರ್ಕಾರಿ ಆಸ್ಪತ್ರೆಯನ್ನು ರಾತ್ರೋರಾತ್ರಿ ಮುಚ್ಚಿರುವುದನ್ನು ವಿರೋಧಿಸಿ ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸ್ಥಳೀಯ ನಿವಾಸಿ ರಮೇಶ್, ಆಸ್ಪತ್ರೆ ಸ್ಥಳವನ್ನು ಕಳೆದ 60 ವವರ್ಷಗಳ ಹಿಂದೆ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಸಜ್ಜನರಾವ್ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ದಾನ ಮಾಡಿದ್ದರು.
ಮೇ 4ರಂದು ರಾತ್ರೋರಾತ್ರಿ ಯಾವುದೇ ಸೂಚನೆ ನೀಡದೆ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳೇ ಹೆಚ್ಚಾಗಿದ್ದು, ಇದ್ದ ಒಂದೇ ಒಂದು ಸರ್ಕಾರಿ ಆಸ್ಪತ್ರೆಯನ್ನು ಮುಚ್ಚಿರುವುದರಿಂದ ಬಡವರು ಪರದಾಡುವಂತಾಗಿದೆ ಎಂದು ಹೇಳಿದರು.
ಕಾರ್ಪೊರೇಟರ್ ವಾಣಿ ವಿ. ರಾವ್ ಅವರು ಉದ್ದೇಶಪೂರ್ವಕವಾಗಿ ಆಸ್ಪತ್ರೆ ಮುಚ್ಚಿಸಿದ್ದಾರೆ. ಈ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳೇ ಹೆಚ್ಚಾಗಿರುವುದರಿಂದ ಅವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಈ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಇದರ ಹಿಂದೆ ಈ ಜಾಗವನ್ನು ಕಬಳಿಸುವ ಹುನ್ನಾರವೂ ಇದೆ ಎಂದು ವೆಂಕಟ್ ಎಂಬವರು ಆಕ್ರೋಶ ವ್ಯಕ್ತಪಡಿಸಿದರು.
ಬೀಗ ಹಾಕುವ ಮುನ್ನ ಯಾರೂ ನನ್ನೊಂದಿಗೆ ಚರ್ಚಿಸಿಲ್ಲ. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಸಮಸ್ಯೆ ಕುರಿತು ಪ್ರಸ್ತಾಪಿಸಿದ್ದೇನೆ. ಸರ್ಕಾರಿ ಆಸ್ಪತ್ರೆ ಮುಚ್ಚಿಸುವಷ್ಟು ಕೀಳು ಮಟ್ಟಕ್ಕೆ ನಾನು ಇಳಿದಿಲ್ಲ.
-ವಾಣಿ ವಿ. ರಾವ್, ಬಿಬಿಎಂಪಿ ಸದಸ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ