ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಳ ಸಾಧ್ಯವೇ: ಹೈಕೋರ್ಟ್
Team Udayavani, Jun 19, 2018, 6:15 AM IST
ಬೆಂಗಳೂರು: ಬಿಸಿಯೂಟ ಯೋಜನೆಯ ಅಡುಗೆ ತಯಾರಕರಿಗೆ ಸದ್ಯ ನೀಡಲಾಗುತ್ತಿರುವ ಮಾಸಿಕ ವೇತನವನ್ನು
ಹೆಚ್ಚಿಸಲು ಸಾಧ್ಯವೇ ಎಂಬ ಬಗ್ಗೆ ಆರು ವಾರಗಳಲ್ಲಿ ನಿಲುವು ಸ್ಪಷ್ಟಪಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ
ಸೋಮವಾರ ಸೂಚನೆ ನೀಡಿದೆ.
ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ನಿಗದಿ ಸೇರಿ ಇತರ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರಕ್ಕೆ
ನಿರ್ದೇಶಿಸುವಂತೆ ಕೋರಿ ಆಲ… ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರ ನೇತೃತ್ವದ ಪೀಠ, ಬಿಸಿಯೂಟ ಯೋಜನೆಯ ಅಡುಗೆ ತಯಾರಕರಿಗೆ ಸದ್ಯ ನೀಡಲಾಗುತ್ತಿರುವ ಮಾಸಿಕ 2,700 ರೂ.ಗಳನ್ನು ಹೆಚ್ಚಿಸಲು ಸಾಧ್ಯವೇ ಎಂಬ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ, ಬಿಸಿಯೂಟ ನೌಕರರ ಊಟಕ್ಕೆ ಅಗತ್ಯವಿರುವ ವೇತನವನ್ನು ನೀಡದಿದ್ದರೆ ಹೇಗೆ ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸರ್ಕಾರಿ ವಕೀಲರು ಬಿಸಿಯೂಟ ತಯಾರಿಕರಿಗೆ ಮಾಸಿಕ 2,700 ರೂ. ಹಾಗೂ ಸಹಾಯಕರಿಗೆ 2,600 ರೂ.ನೀಡಲಾಗುತ್ತಿದೆ ಎಂದರು.
ಇದರಿಂದ ಅಸಮಾಧಾನಗೊಂಡ ಮುಖ್ಯ ನ್ಯಾಯಮೂರ್ತಿಗಳು,ಈಗಿನ ಕಾಲದಲ್ಲಿ 2,700 ರೂ. ಗಳಲ್ಲಿ ಜೀವನ ನಡೆಸಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ