ವಕ್ಫ್ ಆಸ್ತಿ ಕಬಳಿಕೆ: ಸರ್ಕಾರದ ಅರ್ಜಿ ವಜಾ


Team Udayavani, Dec 13, 2018, 2:56 PM IST

blore-9.jpg

ಬೆಂಗಳೂರು: ರಾಜ್ಯದಲ್ಲಿ ಕೋಟ್ಯಂತರ ರೂ. ಮೌಲ್ಯದ ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಸಲ್ಲಿಸಿದ್ದ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಹೈಕೋರ್ಟ್‌ ಆದೇಶಿಸಿದೆ. ಈ ಕರಿತಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಬಿ.ವಿ. ನಾಗರತ್ನ ಹಾಗೂ ನ್ಯಾ. ಬಿ.ಎ ಪಾಟೀಲ್‌ ಅವರಿದ್ದ ನ್ಯಾಯಪೀಠ, ಪ್ರಸಕ್ತ ವಿಧಾನಮಂಡಲ ಅಧಿವೇಶನ ಅಥವಾ 2019ರ ಅಧಿವೇಶನದಲ್ಲಿ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸುವಂತೆ ಹೇಳಿದೆ. 

ವರದಿಯನ್ನು ಸದನದಲ್ಲಿ ಮಂಡಿಸುವಂತೆ ಈ ಹಿಂದೆ ಹೈಕೋರ್ಟ್‌ ಆದೇಶ ಮಾಡಿತ್ತು. ಈ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಪೀಠ, ಈಗ ತೀರ್ಪು ಪ್ರಕಟಿಸಿದೆ.

ವರದಿಯನ್ನು 2016ರ ಫೆಬ್ರವರಿ ಅಧಿವೇಶನದಲ್ಲಿ ಸದನದಲ್ಲಿ ಮಂಡಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಇನ್ನೂ ಮಂಡಿಸಿಲ್ಲ ಎಂದು ಮಾಜಿ ಸಚಿವ ಎಸ್‌.ಕೆ. ಕಾಂತಾ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. 

ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವೇಳೆ, ಅಲ್ಪಸಂಖ್ಯಾತರ ಆಯೋಗದ ಕಾಯ್ದೆ-1994ರ ಸೆಕ್ಷನ್‌ 10(2) ಪ್ರಕಾರ ಆಯೋಗದ ವರದಿಯಲ್ಲ, ಅದರ ಶಿಫಾರಸುಗಳನ್ನು ಮತ್ತು ಕ್ರಮ ಜಾರಿ ವರದಿಯನ್ನು ಸದನಕ್ಕೆ ಮಂಡಿಸಬೇಕು. ಅದರಂತೆ, ಶಿಫಾರಸುಗಳನ್ನು ಸದನದಲ್ಲಿ ಮಂಡಿಸಿದ್ದು, ಅವುಗಳನ್ನು ಸರ್ಕಾರ ತಿರಸ್ಕರಿಸಿದೆ. ಹಾಗಾಗಿ, ವರದಿಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ, ಮೂಲ ತಕಾರು ಅರ್ಜಿಯಲ್ಲಿ ಅರ್ಜಿದಾರರು ವರದಿ ಮಂಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಮನವಿ ಮಾಡಿದ್ದರು. ಆ ಕಾರಣದಿಂದ ಹೈಕೋರ್ಟ್‌ ಆದೇಶದಲ್ಲೂ ವರದಿ ಮಂಡಿಸುವಂತೆಯೇ ಉಲ್ಲೇಖೀಸಲಾಗಿದೆ. ಆದ್ದರಿಂದ ಆದೇಶ ಮರುಪರಿಶೀಲಿಸಬೇಕು ಎಂದು ಸರ್ಕಾರ ಪುನರ್‌ಪರಿಶೀಲನಾ ಅರ್ಜಿಯಲ್ಲಿ ಕೇಳಿಕೊಂಡಿತ್ತು.

ಇದೀಗ ಸರ್ಕಾರದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿರುವ ನ್ಯಾಯಪೀಠ, ಪ್ರಕರಣದ ಮೆರಿಟ್‌ ಆಧಾರದ ಮೇಲೆ ಈ ಅರ್ಜಿಯ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. 

 ಏನಿದು ಪ್ರಕರಣ?: ರಾಜ್ಯದಲ್ಲಿ ವಕ್ಫ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ 2012ರ ಮಾ.26ಕ್ಕೆ ಅಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‌ ಮಾಣಿಪ್ಪಾಡಿಯವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಸದನದಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ 2015ರಲ್ಲಿ ಎಸ್‌.ಕೆ. ಕಾಂತಾ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸದನದಲ್ಲಿ ವರದಿ ಮಂಡಿಸುವಂತೆ ಹೈಕೋರ್ಟ್‌ ನಿರ್ದೇಶನ ಕೊಟ್ಟಿತ್ತು. ವರದಿ ಮಂಡಿಸುವುದಾಗಿ 2016ರಲ್ಲಿ ಸರ್ಕಾರ ಮುಚ್ಚಳಿಕೆ ಸಹ ಬರೆದುಕೊಟ್ಟಿತ್ತು. ಆದರೆ, ವರದಿಯ ಶಿಫಾರಸುಗಳನ್ನು
ಮಾತ್ರ ಮಂಡಿಸಿತ್ತು.

ಇದನ್ನು ಆಕ್ಷೇಪಿಸಿ ಎಸ್‌.ಕೆ. ಕಾಂತಾ ಅವರು 2016ರ ಮಾರ್ಚ್‌ನಲ್ಲಿ ಸರ್ಕಾರದ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ವರದಿ ಮಂಡಿಸುವಂತೆ ಹೈಕೋರ್ಟ್‌ ನಿರ್ದೇಶನ ಕೊಟ್ಟಿದೆ. ಅಲ್ಲದೇ ವರದಿ ಮಂಡಿಸುವುದಾಗಿ ಸರ್ಕಾರ ಒಪ್ಪಿಕೊಂಡಿತ್ತು. ಆದರೆ, ಸಂಪೂರ್ಣ ವರದಿ ಮಂಡಿಸುವ ಬದಲು ಕೇವಲ ಶಿಫಾರಸುಗಳನ್ನು ಮಂಡಿಸಲಾಗಿದೆ. ಸರ್ಕಾರದ ಈ ಕ್ರಮ ನ್ಯಾಯಾಲಯದ ಘನತೆಗೆ ಧಕ್ಕೆ ತರುವಂತಹದ್ದು ಮತ್ತು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ದೂರಿದ್ದರು.

ಕಾಂಗೆ‹ಸ್‌-ಬಿಜೆಪಿ ನಡುವೆ ನಡೆದಿತ್ತು ಸಂಘರ್ಷ ವರದಿಯಲ್ಲಿ ಕಾಂಗ್ರೆಸ್‌ ಪಕ್ಷದ ಘಟಾನುಘಟಿ ನಾಯಕರ ಹೆಸರನ್ನು ಪ್ರಸ್ತಾಪಿಸಲಾಗಿತ್ತು. ಈ ವರದಿಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಸದನದಲ್ಲಿ ಸಾಕಷ್ಟು ಸಂಘರ್ಷ ನಡೆದಿತ್ತು. ವರದಿಯ ಶಿಫಾರಸುಗಳು ಹಾಗೂ ಕ್ರಮ ಜಾರಿ ವರದಿ (ಎಟಿಆರ್‌) ಮಾತ್ರ ಸರ್ಕಾರ ಸದನದಲ್ಲಿ ಮಂಡಿಸಿತ್ತು. ಈ ನಡುವೆ ವರದಿಯ ಬಗ್ಗೆ ಹಾಗೂ ಅದನ್ನು ಸದನದಲ್ಲಿ ಮಂಡಿಸುವ ಕುರಿತಂತೆ ಆಗ ವಕ್ಫ್ಸ ಚಿವರಾಗಿದ್ದ ದಿವಂಗತ ಖಮರುಲ್‌ ಇಸ್ಲಾಂ ಆವರು ಸದನದಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ಮಂಡಿಸಿತ್ತು. ಈ ನಡುವೆ ಸದನಕ್ಕೆ ಕೊಟ್ಟ ಭರವಸೆಯಂತೆ ವರದಿ ಮಂಡಿಸುವಂತೆ ಆಗಿನ ಸಭಾಪತಿ ಡಿ.ಎಚ್‌. ಶಂಕರಮೂರ್ತಿ “ರೂಲಿಂಗ್‌’ ಸಹ ಕೊಟ್ಟಿದ್ದರು. ಆದರೆ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆಯ ಆಧಾರ ಕೊಟ್ಟು ಸರ್ಕಾರ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿತ್ತು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.