ವಕ್ಫ್ ಆಸ್ತಿ ಅಕ್ರಮ: ಸೆ. 6ರಂದು ಧರಣಿ
Team Udayavani, Aug 14, 2018, 6:45 AM IST
ಬೆಂಗಳೂರು: ಬಹುಕೋಟಿ ವಕ್ಫ್ ಆಸ್ತಿ ಹಗರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಬೇಕು ಮತ್ತು ಈ ಕುರಿತಂತೆ ಅನ್ವರ್ ಮಾಣಿಪ್ಪಾಡಿ ನೀಡಿದ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಆಗ್ರಹಿಸಿ ಸೆ. 6ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ. 6ರಂದು ಬೆಳಗ್ಗೆ 11 ಗಂಟೆಗೆ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಾಗುವುದು. ಇದರಲ್ಲಿ ಬಿಜೆಪಿಯ ಎಲ್ಲಾ ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಕ್ಫ್ ಆಸ್ತಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸದಿದ್ದರೆ ಅಲ್ಪಸಂಖ್ಯಾತರ ಖಾತೆ ಸಚಿವ ಜಮೀರ್ ಅಹಮದ್ ಅವರ ರಾಜಿನಾಮೆಗೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಹುಕೋಟಿ ಮೊತ್ತದ ಅವ್ಯವಹಾರ ನಡೆದಿದೆ. ಇದರಲ್ಲಿ ಕಾಂಗ್ರೆಸ್ನ ನಾಯಕರು ಶಾಮೀಲಾಗಿದ್ದಾರೆ ಎಂದು ಅನ್ವರ್ ಮಾಣಿಪ್ಪಾಡಿ ಅವರು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದಾಗ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ಸದನದಲ್ಲಿ ಮಂಡಿಸಲು ಹಿಂದೇಟು ಹಾಕಿತ್ತು. ಆದರೆ, ಬಿಜೆಪಿ ವರದಿ ಮಂಡನೆಗೆ ಆಗ್ರಹಿಸಿ ಮೇಲ್ಮನೆಯಲ್ಲಿ ಹೋರಾಟ ನಡೆಸಿದಾಗ ಸಭಾಪತಿಗಳು ವರದಿ ಮಂಡಿಸಲು ಆದೇಶಿದ್ದರು. ಆದರೆ, ಇದುವರೆಗೂ ಸರ್ಕಾರ ವರದಿಯನ್ನು ಸದನದಲ್ಲಿ ಮಂಡಿಸಿಲ್ಲ ಎಂದು ಆರೋಪಿಸಿದರು.
ಅಲ್ಲದೆ, ಜುಲೈನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ವೇಳೆ ಮೇಲ್ಮನೆ ಸದಸ್ಯ ಅರುಣ್ ಶಹಾಪುರ ಪ್ರಶ್ನೆಗೆ ಉತ್ತರಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್, ವಕ್ಫ್ ಆಸ್ತಿ ಹಗರಣವನ್ನು ಸಿಬಿಐಗೆ ವಹಿಸುವುದಾಗಿ ಭರವಸೆ ನೀಡಿದ್ದರು. ಆದರೆ, ನಂತರದಲ್ಲಿ ಸದನದಲ್ಲಿ ನೀಡಿದ ಭರವಸೆಯಿಂದ ಹಿಂದೆ ಸರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೆ. 6ರಂದು ಧರಣಿ ನಡೆಸುವ ಮೂಲಕ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್