ಸಾ.ರಾ.ಗೋವಿಂದುಗೆ ಚುನಾವಣೆಗೆ ಸ್ಪರ್ಧಿಸುವ ಆಸೆ
Team Udayavani, Mar 30, 2018, 6:25 AM IST
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಹಾಗೂ ಕನ್ನಡ ಪರ ಹೋರಾಟಗಾರ ಸಾ.ರಾ.ಗೋವಿಂದು ಅವರು ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದಲೂ ಸಾ.ರಾ.ಗೋವಿಂದು ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿತ್ತಾದರೂ ಗುರುವಾರ ಖುದ್ದು ಸಾ.ರಾ.ಗೋವಿಂದು ಅವರೇ ಚುನಾವಣಾ ಕಣಕ್ಕೆ ಇಳಿಯುವ ಬಗ್ಗೆ ಸ್ಪಷ್ಟಪಡಿಸಿದ್ದು, ರಾಜಾಜಿನಗರದಿಂದ ಸ್ಪರ್ಧೆಗಿಳಿಯುವುದಾಗಿ ತಿಳಿಸಿದ್ದಾರೆ.
ಆದರೆ, ರಾಜಾಜಿನಗರ ಕ್ಷೇತ್ರದಿಂದ ಜೆಡಿಎಸ್ ಆಕಾಂಕ್ಷಿಗಳು ಹೆಚ್ಚಾಗಿದ್ದು, ಈಗಾಗಲೇ ಕೆಲವರು ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಹೀಗಾಗಿ, ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ಸಾ.ರಾ.ಗೋವಿಂದು, “ನಾನು ಯಾವ ಪಕ್ಷ ಹಾಗೂ ಯಾವ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ವಿಷಯ ಬಹುತೇಕ ಅಂತಿಮವಾಗಿದೆ. ಆದರೆ, ಸಣ್ಣಪುಟ್ಟ ಸಮಸ್ಯೆಗಳಿರುವುದರಿಂದ ಈಗಲೇ ಆ ಬಗ್ಗೆ ಏನನ್ನೂ ಹೇಳಲಾರೆ. ಶುಕ್ರವಾರ ಎಲ್ಲವೂ ಅಂತಿಮವಾಗಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ