ಬೆಳ್ಳಳ್ಳಿ ಬದಲು ಮಿಟಗಾನಹಳ್ಳಿಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿ

ತ್ಯಾಜ್ಯ ವಿಲೇವಾರಿ ಸಮಸ್ಯೆ | ಮೇಯರ್‌ ಅಧ್ಯಕ್ಷತೆಯಲ್ಲಿ ಸಭೆ

Team Udayavani, Jul 27, 2019, 7:49 AM IST

bng-tdy-5

ನಗರದ ತ್ಯಾಜ್ಯ ಸಮಸ್ಯಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಬೆಂಗಳೂರು: ನಗರದ ತ್ಯಾಜ್ಯ ಸಮಸ್ಯಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಸಭೆ ಉದ್ದೇಶಿಸಿ ಮಾತನಾಡಿದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ‘ಮಿಶ್ರ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಬೆಳ್ಳಳ್ಳಿ ಕ್ವಾರಿ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವೆಂತೆ’ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ತ್ಯಾಜ್ಯ ವಿಲೇವಾರಿಯಲ್ಲಿ ಲೋಪವಾದರೆ, ಸಾರ್ವಜನಿಕರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ ಮತ್ತು ಇದು ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಹೀಗಾಗಿ, ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ನಗರದಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಶೀಘ್ರ ವಿಲೇವಾರಿ ಮಾಡಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸಫ‌ರ್ರಾಜ್‌ ಖಾನ್‌ ಪ್ರತಿಕ್ರಿಯಿಸಿ, ಬೆಳ್ಳಳ್ಳಿ ಕ್ವಾರಿ ಭರ್ತಿಯಾಗಿವುದರಿಂದ ತ್ಯಾಜ್ಯ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪಕ್ಕದಲ್ಲೇ ಮಿಟಗಾನಹಳ್ಳಿ ಕ್ವಾರಿ ಇದ್ದು, ಅದರಲ್ಲಿ ಮಿಶ್ರ ತ್ಯಾಜ್ಯ ವಿಲೇವಾರಿ ಮಾಡಬಹುದಾಗಿದೆ. ಈ ಸಂಬಂಧ ಈಗಾಗಲೇ ಅಲ್ಪಾವಧಿ ಟೆಂಡರ್‌ ಕರೆಯಲಾಗಿದೆ. ವಾರಾದೊಳಗೆ ಕ್ವಾರಿಗೆ ಕಸ ವಿಲೇವಾರಿ ಮಾಡಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

‘ವಾಣಿಜ್ಯ (ಬಲ್ಕ್ ಜನರೇಟರ್ಸ್‌) ಸಂಸ್ಥೆಗಳಿಂದ ಬೃಹತ್‌ ಪ್ರಮಾಣದಲ್ಲಿ ಉತ್ಪತ್ತಿ ಆಗುವ ತ್ಯಾಜ್ಯ ಸಂಗ್ರಹಕ್ಕೆ ಪ್ರತ್ಯೇಕ ಟೆಂಡರ್‌ ಕರೆಯಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಒಣ ಕಸವಿಲೆವಾರಿ ಮಾಡಲು ಈಗಾಗಲೇ ಚಿಂದಿ ಆಯುವವರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 8 ಸಾವಿರ ಮಂದಿ ಚಿಂದಿ ಆಯುವವರಿದ್ದಾರೆ. ಅವರು ಒಣ ತ್ಯಾಜ್ಯ ಸಂಗ್ರಹಿಸಿ ಸಂಸ್ಕರಣಾ ಘಟಕಗಳಿಗೆ ಕೊಡುತ್ತಿದ್ದಾರೆ’ ಎಂದು ವಿವರಿಸಿದರು.

‘ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಲು ಕಣ್ಣೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ಆದರೆ, ಸಾರ್ವಜನಿಕರು ಖಾಲಿ ನಿವೇಶಗಳಲ್ಲಿ, ಕೆರೆ ಮತ್ತು ರಾಜಕಾಲುವೆಯ ಅಂಚಿನಲ್ಲಿ ರಾತ್ರಿ ವೇಳೆ ಕಟ್ಟಡ ತ್ಯಾಜ್ಯ ತಂದು ಸುರಿಯುತ್ತಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮೇಯರ್‌ ಮಾತನಾಡಿ, ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಸುರಿಯುತ್ತಿರುವುದರಿಂದ ನಾನಾ ಸಮಸ್ಯೆಗಳು ಉಂಟಾಗುತ್ತಿದೆ. ಕೆರೆಗಳೂ ಅವನತಿ ಅಂಚಿಗೆ ಸಾಗುತ್ತಿವೆ. ಇದನ್ನು ತಪ್ಪಿಸಲು ಕೂಡಲೆ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ಕಡೆಗಳಲ್ಲಿ ಸ್ಥಳ ಗುರುತಿಸಿ ಪಟ್ಟಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಉಪಮೇಯರ್‌ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್‌, ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಪ್ರಾಣಿ ತ್ಯಾಜ್ಯ ವಿಲೇವಾರಿಗೆ ವಲಯವಾರು ಟೆಂಡರ್‌: ‘ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಾಂಸದ ಮಳಿಗೆಗಳಿದ್ದು, ಪ್ರತಿ ನಿತ್ಯ 40 ಮೆಟ್ರಿಕ್‌ ಟನ್‌ ಪ್ರಾಣಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ 80ರಿಂದ 90 ಮೆಟ್ರಿಕ್‌ ಟನ್‌ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಈ ತ್ಯಾಜ್ಯ ವಿಲೇವಾರಿಗೆ ಪಾಲಿಕೆಯ ಎಂಟು ವಲಯಗಳಲ್ಲಿ ಪ್ರತ್ಯೇಕ ಟೆಂಡರ್‌ ಕರೆಯಲು ನಿರ್ಧರಿಸಲಾಗಿದೆ. ಗುತ್ತಿಗೆ ಪಡೆದವರು ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ಹೊಂದಿರದಿದ್ದರೆ ಘಕಟ ಹೊಂದಿರುವವರ ಜತೆ ಒಡಂಬಡಿಕೆ ಮಾಡಿಕೊಂಡು ಕೆಲಸ ಮಾಡಬೇಕು. ಕಂಟೇನರ್‌ ಮಾದರಿಯ ಆಟೋಗಳ ಮೂಲಕ ತ್ಯಾಜ್ಯ ಸಂಗ್ರಹಿಸಿ, ಅದನ್ನು ಸಂಸ್ಕರಣಾ ಘಟಕಗಳಿಗೆ ನೀಡಬೇಕು’ ಎಂದು ಸಫ‌ರ್ರಾಜ್‌ ಖಾನ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.