ಕೊಳಚೆ ನೀರು ಹರಿಸುವವರಿಗೆ “ನೋಟಿಸ್‌’ಬಿಸಿ !


Team Udayavani, Jan 27, 2021, 11:44 AM IST

Wastewater

ಬೆಂಗಳೂರು: ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ಬಿಡುವ ಕೈಗಾರಿಕೆ ಹಾಗೂ ಕಾರ್ಖಾನೆಗಳನ್ನು ಗುರುತಿಸುತ್ತಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿಯಮ ಉಲ್ಲಂಘನೆ ಮಾಡುವವರಿಗೆ ನೋಟಿಸ್‌ ಬಿಸಿ ಮುಟ್ಟಿಸಿದೆ. ವೃಷಭಾವತಿ ವ್ಯಾಲಿ ವ್ಯಾಪ್ತಿಯಲ್ಲಿ ಕೊಳಚೆ ನೀರು ಹರಿದು ಹೋಗುವುದಕ್ಕೆ ಸಮರ್ಪಕ ಪೈಪ್‌ಲೈನ್‌ ಅಳವಡಿಸದೆ ಇರುವುದು, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರವಾನಗಿ ತೆಗೆದುಕೊಳ್ಳದೆ ಇರುವುದು ಹಾಗೂ ಕೊಳಚೆ ನೀರು ನೇರವಾಗಿ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಸಂಪರ್ಕ ಕಲ್ಪಿಸದೆ ಇರುವುದು ಸೇರಿದಂತೆ “ವಾಟರ್‌ ಆ್ಯಕ್ಟ್’ ನಿಯಮ ಉಲ್ಲಂಘನೆ ಮಾಡಿರುವ 76 ಕೈಗಾರಿಕೆಗಳ ಮೇಲೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಿಮಿನಲ್‌ ಕೇಸ್‌ ದಾಖಲು ಮಾಡಿದೆ.

ಅಲ್ಲದೆ, ಈ ಭಾಗದಲ್ಲಿ ಸಣ್ಣ ಹಾಗೂ ದೊಡ್ಡ ಕಾರ್ಖಾನೆಗಳು ಹಾಗೂ ವಿವಿಧ ಉದ್ದಿಮೆಗಳಿಂದ ಕೊಳಚೆ ನೀರು ವೃಷಭಾವತಿ ವ್ಯಾಲಿಗೆ ಬಿಡುತ್ತಿರುವ ನಿರ್ದಿಷ್ಟ ಸ್ಥಳಗಳನ್ನು ಗುರುತಿಸಲಾಗಿದ್ದು, ನಿಯಮ ಉಲ್ಲಂಘನೆ ಮಾಡಿರುವ 309 ಕಾರ್ಖಾನೆಗಳ ಮಾಲೀಕರಿಗೆ ಕ್ಲೋಸರ್‌ ನೋಟಿಸ್‌ (ಕಂಪನಿಗಳ ಪರವಾನಗಿ) ರದ್ದು  ನಿಯಂತ್ರಣ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ವೃಷಭಾವತಿಗೆ ಕೊಳಚೆ ನೀರು ತಡೆಯಲು ಅಭಿಯಾನ: ವೃಷ ಭಾವತಿ ನದಿ ಉಳಿವಿಗಾಗಿ ಹಾಗೂ ಈ ಮಾರ್ಗದಲ್ಲಿ ಕೊಳಚೆ ನೀರು ಹರಿಸುವುದನ್ನು ತಪ್ಪಿಸುವ ಉದ್ದೇಶದಿಂದ ವಿವಿಧ ಸಂಘಟನೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿಯ ಅಧಿಕಾರಿಗಳ ಗಮನ ಸೆಳೆಯುತ್ತಿವೆ. ಸಾಮಾಜಿಕ ಜಾಲತಾಣ ಹಾಗೂ ವಾಟ್ಸ್‌ಆ್ಯಪ್‌ ಗ್ರೂಪ್‌ಗಳ ಮೂಲಕ ನದಿ ಮಾರ್ಗದಲ್ಲಿ ಕೊಳಚೆ ನೀರು ಬಿಡುವವರ ಬಗ್ಗೆ ಹಾಗೂ ಅನಧಿಕೃತ ಲಾರಿಗಳ ಮೂಲಕ ಈ ಮಾರ್ಗದಲ್ಲಿ ಕೊಳಚೆ ನೀರು ಬಿಡುತ್ತಿರುವ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಗಮನ ಸೆಳೆಯಲಾಗುತ್ತಿದೆ. ಇದು ಸಹ ಪರೋಕ್ಷವಾಗಿ ವೃಷಭಾವತಿ ವ್ಯಾಲಿ ಮಾರ್ಗದಲ್ಲಿ ಕೊಳಚೆ ನೀರು ಬಿಡುವುದಕ್ಕೆ ಕಡಿವಾಣ ಬಿದ್ದಂತಾಗಿದೆ.

ನಿಯಮ ಉಲ್ಲಂಘಿಸಿದವರಿಗೆ ನೋಟಿಸ್‌

ವೃಷಭಾವತಿ ವ್ಯಾಲಿ ಹಾಗೂ ಹೆಬ್ಟಾಳ ಸೇರಿದಂತೆ ವಿವಿಧೆಡೆ ಕೆರೆಗಳು ಹಾಗೂ ವ್ಯಾಲಿಗಳಿಗೆ ಕೊಳಚೆ ನೀರು ಬಿಡುವ ಕಾರ್ಖಾನೆ ಕೈಗಾರಿಕೆಗಳನ್ನು ಮುಚ್ಚುವ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲೋಷರ್‌ ನೋಟಿಸ್‌ ಜಾರಿ ಮಾಡುತ್ತಿದೆ. ಕಂಪನಿಗಳು ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುವವರೆಗೆ ಪರವಾನಗಿ ರದ್ದು ಪಡಿಸಲಾಗುತ್ತದೆ. ಒಮ್ಮೆ ಕಂಪನಿಗಳು ಕೊಳಚೆ ನೀರು ಹರಿದು ಹೋಗುವುದಕ್ಕೆ ಸೂಕ್ತ ಪೈಪ್‌ಲೈನ್‌ ವ್ಯವಸ್ಥೆ ಮಾಡಿಕೊಂಡರೆ, ಪರವಾನಗಿ ನೀಡುವ ವಿಧಾನವನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅನುಸರಿಸುತ್ತಿದೆ.

ಇದನ್ನೂ ಓದಿ:ಜಾನಪದ ಸಂಗೀತಕ್ಕೆ ತಲೆದೂಗಿದ ಸಿಎಂ

ಬಿಬಿಎಂಪಿ ಮಾರ್ಷಲ್‌ಗಳಿಂದಲೂ ಗಸ್ತು ಕಾರ್ಯ

ವೃಷಭಾವತಿ ವ್ಯಾಲಿಗೆ ಟ್ಯಾಂಕರ್‌ಗಳಲ್ಲಿ ಕೊಳಚೆ ನೀರು ತಂದು ಬಿಡುವವರ ಮೇಲೆ ಕಣ್ಣಿರಿಸುವ ಉದ್ದೇಶದಿಂದ ಇಬ್ಬರು ಮಾರ್ಷಲ್‌ಗಳನ್ನು ನೇಮಕ ಮಾಡಲಾಗಿತ್ತು. ಇದೀಗ ವಾರ್ಡ್‌ ಮಟ್ಟದ ಹಾಗೂ ವಲಯದ ಮಟ್ಟದ ಮಾರ್ಷಲ್‌ಗಳೇ ರಾತ್ರಿಪಾಳಿಯಲ್ಲಿ ಗಸ್ತು ತಿರುಗುತ್ತಿದ್ದಾರೆ. ಕೊಳಚೆ ನೀರು ಬಿಡುವವರನ್ನು ಹಿಡಿದು, ಪೊಲೀಸರಿಗೂ ಒಪ್ಪಿಸಲಾಗಿದೆ ಎಂದು ಬಿಬಿಎಂಪಿ ಚೀಫ್ ಮಾರ್ಷಲ್‌ ರಾಜ್ಬೀರ್ ಸಿಂಗ್‌ ತಿಳಿಸಿದ್ದಾರೆ.

ಹಿತೇಶ್‌ ವೈ

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.