ರಾಜಧಾನಿಗೆ ಶೀಘ್ರದಲ್ಲೇ ತಟ್ಟಲಿದೆ ನೀರಿನ ಬಿಲ್‌ ಬಿಸಿ


Team Udayavani, Jun 26, 2023, 12:00 PM IST

ರಾಜಧಾನಿಗೆ ಶೀಘ್ರದಲ್ಲೇ ತಟ್ಟಲಿದೆ ನೀರಿನ ಬಿಲ್‌ ಬಿಸಿ

ಬೆಂಗಳೂರು: ಜಲಮಂಡಳಿಯು ನೀರಿನ ಶುಲ್ಕವನ್ನು ಪರಿಷ್ಕರಣೆ ಮಾಡಲು ಚಿಂತಿಸಿದ್ದು, ಸದ್ಯದಲ್ಲೇ ನೀರಿನ ಬಿಲ್‌ ಹೆಚ್ಚಳವಾಗುವ ಸಾಧ್ಯತೆಗಳಿವೆ. ಇದೀಗ ವಿದ್ಯುತ್‌ ಬಿಲ್‌ ಏರಿಕೆ ಬಿಸಿ ತಟ್ಟಿದ ಬೆನ್ನಲ್ಲೇ ನೀರಿನ ಬಿಲ್‌ ಬಿಸಿ ತಟ್ಟುವ ಸಾಧ್ಯತೆಗಳಿವೆ. ಬೆಂ

ಗಳೂರಿನಲ್ಲಿ ಕಳೆದ 8 ವರ್ಷಗಳಿಂದ ನೀರಿನ ಬಿಲ್‌ ಹೆಚ್ಚಳ ಮಾಡಿರಲಿಲ್ಲ. ಇದರಿಂದ ಜಲಮಂಡ ಳಿಗೆ ನಷ್ಟ ಉಂಟಾಗಿದ್ದು, 8 ಕೋಟಿ ರೂ.ಗೂ ಅಧಿಕ ಹೊರೆಯಾಗುತ್ತಿದೆ. ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಜಲಮಂಡಳಿ ಸದಸ್ಯರ ಜೊತೆಗೆ ನಡೆಸಿದ ಸಭೆಯಲ್ಲಿ ನೀರಿನ ಬಿಲ್‌ ಹೆಚ್ಚಳ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ.

ವಿದ್ಯುತ್‌ ಬಿಲ್‌ಗ‌ಳನ್ನು ಎಷ್ಟು ಪ್ರಮಾಣದಲ್ಲಿ, ಯಾವ ರೀತಿ ಜನರಿಗೆ ಹೊರೆಯಾಗದಂತೆ ಹೆಚ್ಚಳ ಮಾಡಬಹದು ಎಂಬ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅಧಿಕಾರಿಗಳಿಂದ ಮಾಹಿತಿ ಪಡೆದ ದ್ದಾರೆ. ಇದರ ಬೆನ್ನಲ್ಲೇ ನೀರಿನ ಬಿಲ್‌ ಹೆಚ್ಚಳ ಮಾಡಲು ಜಲಮಂಡಳಿಯು ಸದ್ದಿಲ್ಲದೇ ಕೆಲ ಪ್ರಕ್ರಿಯೆ ಪ್ರಾರಂಭಿಸಿದೆ ಎಂದು ತಿಳಿದು ಬಂದಿದೆ.

ಆದಾಯದಲ್ಲಿ ಶೇ.80 ವಿದ್ಯುತ್‌ಗೆ ಬಳಕೆ: ಮತ್ತೂಂದೆಡೆ ಜಲಮಂಡಳಿಗೂ ವಿದ್ಯುತ್‌ ಶುಲ್ಕ ಏರಿಕೆಯ ಬಿಸಿ ತಟ್ಟಿದೆ. ಪ್ರಧಾನ ಕಚೇರಿ, ಪಂಪಿಂಗ್‌ ಸ್ಟೇಷನ್‌, ಜಲಮಂಡಳಿಯ ಉಪ ವಿಭಾಗಗಳು, ಇನ್ನೀತರ ಉಪ ಕಚೇರಿಗಳಲ್ಲಿ ಬಳಸಿದ ವಿದ್ಯುತ್‌ಗೆ ತಿಂಗಳಿಗೆ 78 ಕೋಟಿ ರೂ. ಶುಲ್ಕ ಪಾವತಿಸಲಾಗುತ್ತಿತ್ತು. ಇದೀಗ ವಿದ್ಯುತ್‌ ಏರಿಕೆಯಿಂದ ಬರುವ ಆದಾಯದಲ್ಲಿ 88 ರಿಂದ 90 ಕೋಟಿ ರೂ. ವಿದ್ಯುತ್‌ ಶುಲ್ಕದ ಪಾಲಾಗುತ್ತಿದೆ. ನೀರಿನ ಬಿಲ್‌ ಹೆಚ್ಚಳ ಮಾಡದಿದ್ದಲ್ಲಿ ಜಲಮಂಡಳಿಯ ನಿರ್ವಹಣೆಯೂ ಸವಾಲಾಗಿದೆ ಎನ್ನುತ್ತಾರೆ ಜಲಮಂಡಳಿಯ ಅಧಿಕಾರಿಗಳು.

ತೊರೆಕಾಡನಹಳ್ಳಿ, ಹಾರೋಹಳ್ಳಿ ತಾತುಗುಣಿಯಲ್ಲಿ ಜಲಮಂಡಳಿಯ ಪಂಪಿಂಗ್‌ ಸ್ಟೇಷನ್‌ ಇದೆ. ಪ್ರತಿದಿನ ಕಾವೇರಿಯಿಂದ ನಗರದ ವಿವಿಧ ಭಾಗಗಳಿಗೆ 1,450 ದಶಲಕ್ಷ ಲೀಟರ್‌ ನೀರು ಪೂರೈಸಲಾಗುತ್ತಿದೆ. ಇದರಿಂದ ತಿಂಗಳಿಗೆ ಸರಾಸರಿ 110 ಕೋಟಿ ರೂ. ಆದಾಯ ಜಲಮಂಡಳಿ ಬೊಕ್ಕಸ ಸೇರುತ್ತಿದೆ. ಆದರೆ, ಇವುಗಳಲ್ಲಿ ಶೇ.80ರಷ್ಟು ವಿದ್ಯುತ್‌ ಬಿಲ್‌ ಪಾವತಿಗೆ ಬಳಸಿದರೆ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿಗೆ ವೇತನ ಕೊಡಲು ಸಮಸ್ಯೆ ಉಂಟಾಗಿದೆ.

ಶುಲ್ಕ ಹೆಚ್ಚಳ ಸಾರ್ವಜನಿಕರಿಗೆ ಹೊರೆ : ನಿರೀಕ್ಷೆಗೆ ತಕ್ಕಂತೆ ಮಳೆ ಬೀಳದ ಹಿನ್ನೆಲೆಯಲ್ಲಿ ಕೆಆರ್‌ಎಸ್‌ನಲ್ಲೂ ಸಂಗ್ರಹಿಸಿರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಆದರೂ, ಆಗಸ್ಟ್‌ವರೆಗೆ ಬೆಂಗಳೂರಿಗೆ ಬೇಕಾಗಿರುವಷ್ಟು ನೀರನ್ನು ಸಂಗ್ರಹಿಸಲಾಗಿದೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.

ಆಗಸ್ಟ್‌ ನಂತರವೂ ನಿರೀಕ್ಷೆಗೆ ತಕ್ಕಂತೆ ಮಳೆ ಬಾರದಿದ್ದರೆ ನೀರಿನ ಕೊರತೆ ಎದುರಾಗಲಿದೆ. ಇದೀಗ ನೀರಿನ ಕೊರತೆಯ ಜೊತೆಗೆ ನೀರಿನ ದರ ಹೆಚ್ಚಳ ಶುಲ್ಕವು ಸಾರ್ವಜನಿಕರಿಗೆ ಹೊರೆಯಾಗಲಿದೆ. ಜಲಮಂಡಳಿ ಕಳೆದ 3 ವರ್ಷಗಳ ಹಿಂದೆಯೂ ನೀರಿನ ದರ ಹೆಚ್ಚಳ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೋವಿಡ್‌ ಭೀತಿಯಿಂದ ಜನ ಸಾಮಾನ್ಯರು ಸಂಕಷ್ಟಕೀಡಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರವು ನೀರಿನ ದರ ಪರಿಷ್ಕರಣೆಗೆ ಅನುಮತಿ ನೀಡಿರಲಿಲ್ಲ. ಇದೀಗ ಕೋವಿಡ್‌ ಸಂಕಷ್ಟ ದೂರವಾಗಿ ಜನ ಜೀವನ ಮತ್ತೆ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ದರ ಪರಿಷ್ಕರಣೆ ಮಾಡಲಿದೆ.

ಟಾಪ್ ನ್ಯೂಸ್

Modi Code of Conduct: TMC Accused, Complaint Submitted

Election; ಮೋದಿ ನೀತಿ ಸಂಹಿತೆ: ಟಿಎಂಸಿ ಆರೋಪ, ದೂರು ಸಲ್ಲಿಕೆ!

22-harangi

Madikeri: ಹಾರಂಗಿ ನಾಲೆ ಸಮೀಪ ವ್ಯಕ್ತಿಯ ಶವ ಪತ್ತೆ

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ: ಅರುಣ್‌ ಶಹಾಪೂರ್‌

Arun Shahapur ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ

20-aranthodu

Crime News: ಅರಂತೋಡು ಭಾಗದ ಸುದ್ದಿಗಳು

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Day Care Center: ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಡೇ ಕೇರ್‌ ಕೇಂದ್ರ

Bengaluru: ವಿಪತ್ತು ನಿರ್ವಹಣೆಗೆ 10 ಕೋಟಿ ರೂ.: ತುಷಾರ್‌

Bengaluru: ವಿಪತ್ತು ನಿರ್ವಹಣೆಗೆ 10 ಕೋಟಿ ರೂ.: ತುಷಾರ್‌

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Modi Code of Conduct: TMC Accused, Complaint Submitted

Election; ಮೋದಿ ನೀತಿ ಸಂಹಿತೆ: ಟಿಎಂಸಿ ಆರೋಪ, ದೂರು ಸಲ್ಲಿಕೆ!

22-harangi

Madikeri: ಹಾರಂಗಿ ನಾಲೆ ಸಮೀಪ ವ್ಯಕ್ತಿಯ ಶವ ಪತ್ತೆ

25-udupi

Udupi: ನಗರಸಭಾ ಸದಸ್ಯನ ಕಾರಿಗೆ ಕಲ್ಲು ಎಸೆತ

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.