ನಗರ ಜಿಲ್ಲೆಯಲ್ಲೂ ಜಲ ಸಂರಕ್ಷಣೆ

ಕೇಂದ್ರದ ಜಲ ಸಂರಕ್ಷಣಾ ಅಭಿಯಾನಕ್ಕೆ ಪೂರ್ವ ಸೇರಿ ನಾಲ್ಕು ತಾಲೂಕುಗಳು ಆಯ್ಕೆ

Team Udayavani, Aug 2, 2019, 8:57 AM IST

bng-tdy-6

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಸಂರಕ್ಷಣಾ ಅಭಿಯಾನ’ದ ವ್ಯಾಪ್ತಿಗೆ ಬೆಂಗಳೂರು ನಗರ ಜಿಲ್ಲೆಯ ನಾಲ್ಕು ತಾಲೂಕುಗಳು ಆಯ್ಕೆಯಾಗಿವೆ. ಹೀಗಾಗಿ ಕೆಲವೇ ತಿಂಗಳಲ್ಲಿ ಈ ತಾಲೂಕುಗಳ ಕೆರೆ-ಕುಂಟೆ, ಭಾವಿಗಳು, ಇನ್ನಿತರ ಜಲ ಮೂಲಗಳಿಗೆ ಮರು ಜೀವ ನೀಡುವ ಕೆಲಸ ಆರಂಭವಾಗಲಿದೆ.

ಜಲಶಕ್ತಿ ಮಂತ್ರಾಲಯದಡಿ ರೂಪಿಸಲಾಗಿರುವ ‘ಜಲ ಸಂರಕ್ಷಣಾ ಅಭಿಯಾನ್‌’ಗೆ ದೇಶದ 254 ಜಿಲ್ಲೆಗಳು ಆಯ್ಕೆಯಾಗಿದ್ದು, ಇದರಲ್ಲಿ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ, ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಆನೇಕಲ್ ತಾಲೂಕುಗಳು ಸಹ ಸೇರಿವೆ.

ಅರಣ್ಯೀಕರಣ, ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು, ನೀರಿನ ಮರು ಬಳಕೆ, ಜಲ ಮೂಲಗಳ ಪುನರ್‌ ಭರ್ತಿ, ಜಲಾನಯನ ಅಭಿವೃದ್ಧಿ ಮುಂತಾದ ಅಂಶಗಳನ್ನು ಈ ಅಭಿಯಾನ ಒಳಗೊಂಡಿದೆ. ಈಗಾಗಲೇ ಬತ್ತಿರುವ ನೀರಿನ ಸೆಲೆಗಳಿಗೆ ಮರು ಜೀವ ನೀಡುವುದು ಈ ಯೋಜನೆ ಉದ್ದೇಶವಾಗಿದ್ದು, ಚೆಕ್‌ ಡ್ಯಾಂಗಳ ನಿರ್ಮಾಣ ಕೂಡ ನಡೆಯಲಿದೆ.

ಮಳೆ ನೀರು ಕೊಯ್ಲಿಗೆ ಆದ್ಯತೆ: ಜಲ ಸಂರಕ್ಷಣಾ ಅಭಿಯಾನದಡಿ ಕೃಷಿ ಹೊಂಡಗಳ ನಿರ್ಮಾಣ, ಮಳೆ ನೀರು ಕೊಯ್ಲಿಗೆ ಆದ್ಯತೆ ನೀಡಲಾಗುತ್ತಿದೆ. ಮಳೆ ನೀರು ಕೊಯ್ಲು ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ಜತೆಗೆ, ಸಾಂಪ್ರದಾಯಿಕ ನದಿ ನೀರಿನ ಮೂಲಗಳ ನವೀಕರಣ ಪ್ರಕ್ರಿಯೆ ಕೂಡ ನಡೆಯಲಿದೆ ಎಂದು ಬೆಂಗಳೂರು ನಗರ ಜಿ.ಪಂ.ನ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನಾಲ್ಕೂ ತಾಲೂಕುಗಳ ಹಲವೆಡೆ ನಾನಾ ಕಾರಣಗಳಿಂದಾಗಿ ಬತ್ತಿ ಹೋಗಿರುವ ಬೋರ್‌ವೆಲ್ಗಳಿಗೆ ಮರುಜೀವ ನೀಡುವ ಕೆಲಸ ನಡೆಯಲಿದೆ. ಈಗಾಗಲೇ ಶಾಲೆ, ಕಾಲೇಜು ವಿದ್ಯಾರ್ಥಿಗಳ ಮೂಲಕ ಜಲ ಸಂರಕ್ಷಣಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಅಲ್ಲದೆ ವಿವಿಧ ಜಾರಿಯ ಸುಮಾರು 50,000 ಸಸಿಗಳನ್ನು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳ ಸಭೆ: ಬೆಂಗಳೂರು ನಗರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಜಲ ಸಂರಕ್ಷಣಾ ಅಭಿಯಾನ್‌ ಯೋಜನೆ ಜಾರಿ ಕುರಿತಂತೆ ಕೇಂದ್ರ ಜಲಶಕ್ತಿ ಇಲಾಖೆಯ ಹಿರಿಯ ಅಧಿಕಾರಿಗಳು ಈಗಾಗಲೇ ನಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಂಚಾಯತ್‌ ರಾಜ್‌ ಇಲಾಖೆ, ಗ್ರಾಮೀಣ ಮತ್ತು ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು, ಜಿಲ್ಲಾ ಯೋಜನಾ ನಿರ್ದೇಶಕರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಇಲಾಖಾವಾರು ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಅನುದಾನ, ಯೋಜನೆಯ ಯಶಸ್ವಿಗೊಳಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

5 ಅಂಶಗಳ ಅಭಿಯಾನ:

ನೀರಿನ ಮೂಲ ಸೆಲೆಗಳಿಗೆ ಮರು ಜೀವ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯವು ‘ಜಲ ಸಂರಕ್ಷಣಾ ಅಭಿಯಾನ್‌’ ಎಂಬ ವಿನೂತನ ಯೋಜನೆ ರೂಪಿಸಿದೆ. ದೇಶದ ಹಲವು ಭಾಗಗಳಲ್ಲಿ ತೀವ್ರ ನೀರಿನ ಕೊರತೆ ಕಾಣಿಸಿಕೊಂಡಿರುವ ಪರಿಣಾಮ ಕೇಂದ್ರ ಸರ್ಕಾರವು ಐದು ಅಂಶಗಳ ನೀರಿನ ಸಂರಕ್ಷಣಾ ಅಭಿಯಾನವನ್ನು ಪ್ರಾರಂಭಿಸಿದೆ. ಇದಕ್ಕೆ ಜಲಶಕ್ತಿ ಅಭಿಯಾನ ಎಂದು ಹೆಸರಿಡಲಾಗಿದೆ.

 

● ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.