ನೀರು ತಿರುಗಿಸಲು ಬಿಡಲ್ಲ: ಗೋವಾ ಸಿಎಂ ಪರ್ರಿಕರ್
Team Udayavani, Feb 22, 2018, 6:35 AM IST
ಪಣಜಿ: ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ತಿರುಗಿಸಲು ಬಿಡುವುದಿಲ್ಲ. ಇದು ಗೋವಾ ಸರ್ಕಾರದ ಧೋರಣೆಯಾಗಿದ್ದು ನಮ್ಮ ಅಭಿಪ್ರಾಯವನ್ನು ನ್ಯಾಯಾಧಿಕರಣದ ಎದುರು ಮಂಡಿಸಿದ್ದೇವೆ ಎಂದು ಗೋವಾ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ.
ಪೊಂಡಾ ಕ್ಷೇತ್ರದ ಶಾಸಕ ರವಿ ನಾಯ್ಕ ಕೇಳಿದ್ದ ಪ್ರಶ್ನೆಗೆ ಮುಖ್ಯಮಂತ್ರಿ ಪರ್ರಿಕರ್ ಲಿಖೀತ ಉತ್ತರ ನೀಡಿದ್ದಾರೆ. ಮಹದಾಯಿ ನದಿಯಲ್ಲಿ 113.50 ಟಿಎಂಸಿ ನೀರಿದೆ. ಗೋವಾಕ್ಕೆ ಇದರಲ್ಲಿ ಎಷ್ಟು ಪಾಲಿದೆ ಎಂಬುದು
ನಿರ್ಧರಿಸಬೇಕಿದೆ.
ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡರೆ ಅದರ ವ್ಯತಿರಿಕ್ತ ಪರಿಣಾಮ ಗೋವಾದ ಮೇಲಾಗಲಿದೆ. ಗೋವಾ ಸರ್ಕಾರವು ಮಹದಾಯಿ ನದಿ ನೀರು ಹಾಗೂ ನದಿ ಹರಿಯುವ ಪ್ರದೇಶದ ಸಮಗ್ರ ಅಭ್ಯಾಸ ನಡೆಸಿದೆ. ಇದರಿಂದಾಗಿ ಮಹದಾಯಿ ನದಿ ನೀರಿನ ವಿಷಯದಲ್ಲಿ ಗೋವಾ ಸರ್ಕಾರದ ನಿರ್ಣಯ ದೃಢವಾಗಿದೆ. ನಾವು ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ತಿರುಗಿಸಿಕೊಳ್ಳಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ