ನಗರದಲ್ಲಿ ನೀರಿಗೆ ಕೊರತೆಯಾಗದು


Team Udayavani, May 20, 2019, 3:08 AM IST

nagaradalli

ಬೆಂಗಳೂರು: ನಗರದಲ್ಲಿ ನೀರಿಗೆ ಯಾವುದೇ ರೀತಿಯಲ್ಲೂ ಕೊರತೆ ಉಂಟಾಗದಂತೆ ಕ್ರಮವಹಿಸುತ್ತಿದ್ದು, ಭವಿಷ್ಯದಲ್ಲೂ ಯಾವುದೇ ಜಲಕಂಟಕ ಬಾರದಂತೆ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಲಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ.

ಬೆಂಗಳೂರು ನಗರದ 800 ಚ.ಕಿ.ಮೀ ಕಾರ್ಯವ್ಯಾಪ್ತಿಯಲ್ಲಿ ನೀರು ಸರಬರಾಜು ಹಾಗೂ ತ್ಯಾಜ್ಯ ನೀರಿನ ಶುದ್ಧೀಕರಣ ಹಾಗೂ ವಿಲೇವಾರಿ ಜವಾಬ್ದಾರಿ ವಸಿಕೊಂಡಿರುವ ಜಲಮಂಡಳಿಯು ನಿತ್ಯ 1,453 ದಶಲಕ್ಷ ಲೀ.ನಷ್ಟು ನೀರನ್ನು ಪೂರೈಸುತ್ತಿದೆ.

ಈ ನಡುವೆ ಬೇಸಿಗೆ ಸಂದರ್ಭದಲ್ಲಿ ನಗರದ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಕುರಿತು ಸಾಕಷ್ಟು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮಂಡಳಿಯು ಸದ್ಯ ಆಣೆಕಟ್ಟುಗಳಲ್ಲಿ ನೀರಿನ ಸ್ಥಿತಿ, ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ನೀರು ಒದಗಿಸಲು ಸದ್ಯ ಚಾಲ್ತಿಯಲ್ಲಿರುವ ಹಾಗೂ ಭವಿಷ್ಯದಲ್ಲಿ ಕೈಗೊಳ್ಳುವ ಯೋಜನೆಗಳು ಕುರಿತು ಮಾಹಿತಿ ನೀಡಿದೆ.

10 ಟಿಎಂಸಿ ಹೆಚ್ಚುವರಿ ನೀರಿ: ಸರ್ಕಾರ ಬೆಂಗಳೂರಿಗೆ 19 ಟಿ.ಎಂ.ಸಿ .ಯಷ್ಟು ನೀರನ್ನು ಹಂಚಿಕೆ ಮಾಡಿದ್ದು, ಅದನ್ನು ವಿವಿಧ ಹಂತಗಳ ಮೂಲಕ ನಗರಕ್ಕೆ ಪೂರೈಕೆ ಮಾಡುತ್ತಿದೆ. ಈ 19 ಟಿಎಂಸಿ ಜತೆಗೆ ಭವಿಷ್ಯದ ಬೆಂಗಳೂರಿಗಾಗಿ ಸರ್ಕಾರ ಇನ್ನು 10 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ನೀಡಿದ್ದು, ಈ ನೀರನ್ನು ಬಳಸಿಕೊಳ್ಳುವ ಸಲುವಾಗಿ ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿಯನ್ನು ಆರಂಭಿಸಲಾಗಿದೆ ಎಂದು ಜಲಮಂಡಳಿ ತಿಳಿಸಿದೆ.

ಜಲಮಂಡಳಿಯ ಪ್ರಮುಖ ಸಮಸ್ಯೆಯಾಗಿರುವ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣವನ್ನು ಕಡಿತಗೊಳಿಸುವಲ್ಲಿ ಜಲಮಂಡಳಿ ಸಫ‌ಲವಾಗಿದ್ದು, ಹಿಂದೆ ಇದ್ದ ಶೇ.43ರಷ್ಟು ನೀರಿನ ಸೋರಿಕೆ ಪ್ರಮಾಣವನ್ನು ಶೇ.36ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದ 120 ದಶಲಕ್ಷ ಲೀ. ನೀರು ಲೆಕ್ಕಕ್ಕೆ ಸಿಗುತ್ತಿದೆ.

ಇದರ ಜೊತೆಗೆ ಎತ್ತಿನ ಹೊಳೆಯೋಜನೆಯಿಂದ ನೀರು ತರಲಾಗುತ್ತಿದ್ದು, ಇದಕ್ಕಾಗಿ ತಿಪ್ಪಗೊಂಡನಹಳ್ಳಿ ಕೆರೆ ಪುನರುಜ್ಜೀವನ ಯೋಜನೆ ಕೈಗೊಳ್ಳಲಾಗಿದೆ. ಇನ್ನು 2023ರ ವೇಳೆಗೆ ನಗರದಲ್ಲಿ ಒಟ್ಟು 1713.5 ಎಂ.ಎಲ್‌.ಡಿ., ತ್ಯಾಜ್ಯ ನೀರನ್ನು ಸಂಸ್ಕರಿಸಬಹುದಾಗಿರುತ್ತದೆ. ಈ ಸಂಸ್ಕರಿಸಿದ ನೀರಿನಲ್ಲಿ ಶೇ.50ರಷ್ಟನ್ನು ಬೆಂಗಳೂರಿನ ಹೊರಭಾಗದಲ್ಲಿರುವ ನಗರಗಳ ಕೆರೆಗಳನ್ನು ತುಂಬಿಸಲಾಗುವುದು,

ಉಳಿದ ಶೇ.50ರಷ್ಟು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬೆಂಗಳೂರಿನಲ್ಲಿರುವ ಕೈಗಾರಿಕೆ, ವಾಣಿಜ್ಯ ಮತ್ತು ಗೃಹ ಬಳಕೆದಾರರ ಇತರೆ ಬಳಕೆಯ ಬೇಡಿಕೆಯನ್ನು ಪೂರೈಸಲು, ಉದ್ಯಾನವನದಲ್ಲಿನ ಗಿಡಗಳಿಗೆ ನೀರುಣಿಸಲು ಹಾಗೂ ಸಮುದಾಯ ಭವನಗಳ ಉಪಯೋಗಗಳಿಗೆ ಬಳಸಲಾಗುತ್ತದೆ. ಇದಲ್ಲದೇ ಬೆಂಗಳೂರಿನ ನಾಗರಿಕರಿಗೆ ಸಹ ಕಟ್ಟಡಗಳಿಗೆ ಮಳೆನೀರು ಕೊಯ್ಲು, ತ್ಯಾಜ್ಯ ಸಂಸ್ಕರಣ ಘಟಕ ಅಳವಡಿಕೆ ಮಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಲಮಂಡಳಿ ತಿಳಿಸಿದೆ.

ಡ್ಯಾಂಗಳಲ್ಲಿ ನೀರಿನ ಸಂಗ್ರಹ ತೃಪ್ತಿಕರ: ಸದ್ಯ ಕೃಷ್ಣರಾಜ ಅಣೆಕಟ್ಟೆ ಮತ್ತು ಕಬಿನಿ ಅಣೆಕಟ್ಟೆಯಲ್ಲಿ ನೀರಿನ ಶೇಖರಣೆಯ ಪ್ರಮಾಣವು ತೃಪ್ತಿಕರವಾಗಿದ್ದು, ಬೇಸಿಗೆ ಹಾಗೂ ಬರದಿಂದಾಗಿ ನಗರದಲ್ಲಿ ನೀರಿನ ಕೊರತೆ ಉಂಟಾಗಿರುವುದಿಲ್ಲ. ಇನ್ನು ಜೂನ್‌ ಪ್ರಾರಂಭಿಕ ವಾರದಲ್ಲಿ ಮುಂಗಾರು ಮಳೆಯ ಮುನ್ಸೂಚ ಇದ್ದು ಮತ್ತೆ ನೀರಿನ ಶೇಖರಣೆ ಹೆಚ್ಚಲಿದೆ.

ಸದ್ಯ ಜಲಮಂಡಲಿಯು ಬಿಬಿಎಂಪಿ ವ್ಯಾಪ್ತಿಯ ಸುಮಾರು ಒಂದು ಕೋಟಿ ಜನರಿಗೆ ನೀರನ್ನು ಪೂರೈಸುತ್ತಿದ್ದು, 2007ರಲ್ಲಿ ಹೊಸದಾಗಿ ಬಿಬಿಎಂಪಿಗೆ ಸೇರಿದ 110 ಹಳ್ಳಿಗಳಿಗೆ ನೀರು ಸರಬರಾಜು ಸೌಲಭ್ಯವನ್ನು ಒದಗಿಸುವ ಕಾಮಗಾರಿಯು ಪ್ರಗತಿಯಲ್ಲಿದ್ದು 2019 ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.