![1-assam](https://www.udayavani.com/wp-content/uploads/2024/07/1-assam-415x233.jpg)
ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ ನಿವಾಸಿಗಳು
Team Udayavani, Mar 18, 2024, 10:36 AM IST
![ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ ನಿವಾಸಿಗಳು](https://www.udayavani.com/wp-content/uploads/2024/03/6-13-620x372.jpg)
ಬೆಂಗಳೂರು: ಗೊರಗುಂಟೆಪಾಳ್ಯದ ಅರವಿಂದ್ ಗಾರ್ಮೆಂಟ್ಸ್ ಬಳಿಯ ಜ್ಯೋತಿ ಬಾಯಿ ಫುಲೆ ನಗರ ಕೊಳೆಗೇರಿಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ನಾಲ್ಕೈದು ತಿಂಗಳಿಂದ ಇಲ್ಲಿನ ನಿವಾಸಿಗಳು ಖಾಲಿ ಕೊಡಗಳನ್ನು ಹಿಡಿದು ಗಲ್ಲಿ ಗಲ್ಲಿ ಅಲೆಯುತ್ತಿದ್ದಾರೆ.
ಈ ಕುರಿತು ಆರೋಪಿಸಿರುವ ಮಲ್ಲೇಶ್ವರದ ಬೆಂಗಳೂರು ಉಳಿಸಿ ಸಮಿತಿ, ಹಲವು ವರ್ಷಗಳಿಂದ ಕೊಳೆಗೇರಿ ನಿವಾಸಿಗಳಿಗೆ ನೀರಿಗೆ ಆಸರೆಯಾಗಿದ್ದ ಕೊಳವೆಬಾವಿ ಭತ್ತಿದೆ. ಹೊಸದಾಗಿ ಕೊರೆಯಿಸಿರುವ ಬೋರ್ವೆಲ್ಗೆ ಸಂಪರ್ಕ ಒದಗಿಸದೇ ನಿಷ್ಪ್ರಯೋಜಕವಾಗಿದೆ ಎಂದಿದೆ.
ಇನ್ನು ಕುಡಿಯುವ ನೀರಿಗಾಗಿ 150 ಕುಟುಂಬ ಗಳಿರುವ ಈ ಪ್ರದೇಶಕ್ಕೆ ಕೇವಲ 2 ನಲ್ಲಿಗಳು ಇವೆ. ಇದರಲ್ಲಿ ಎರಡು ಅಥವಾ ನಾಲ್ಕು ದಿನಕ್ಕೊಮ್ಮೆ ಒಂದು ಗಂಟೆ ಮಾತ್ರ ನೀರು ಬಿಡಲಾಗುತ್ತಿದೆ. ಇದಕ್ಕಾಗಿ ಇಡಿರಾತ್ರಿ ಕಾಯಬೇಕು.
ಬಿಟ್ಟ ನೀರನ್ನು ಬೆರಳೆಣಿಕೆ ಕುಟುಂಬಗಳು, 3-4 ಕೊಡ ತುಂಬಿಸುವ ಹೊತ್ತಿಗೆ ಹೈರಾಣಾಗಿ ಹೋಗುತ್ತಾರೆ ಎಂದು ದೂರಿದೆ.
ಜಲಮಂಡಳಿಗೆ ಮನವಿ: ಇಲ್ಲಿ ವಾಸವಿರುವ ಬಹುತೇಕ ಮಂದಿ ಗಾರೆ ಕೆಲಸ ಮಾಡುವ, ಗಾರ್ಮೆಂಟ್ಸ್, ಮನೆ ಕೆಲಸ ಮಾಡುವ ಬಡ ಕೂಲಿ ಕಾರ್ಮಿಕರಾಗಿದ್ದಾರೆ. ರಾತ್ರಿಯಿಡೀ ನೀರಿಗಾಗಿ ನಿದ್ದೆ ಇಲ್ಲದೆ ಕಾದು ಕುಳಿತುಕೊಳ್ಳಬೇಕು. ಮತ್ತೆ ಬೆಳಗ್ಗೆ ದುಡಿಯಲು ಹೋಗಬೇಕು.
ಸಾವಿರಾರು ರೂ. ನೀಡಿ ಟ್ಯಾಂಕರ್ ನೀರು ಖರೀದಿಸುವ ಸ್ಥಿತಿವಂತರಲ್ಲ. ಆದ್ದರಿಂದ ಈ ಕೂಡಲೇ ಇಲ್ಲಿನ ನೀರಿನ ಸಮಸ್ಯೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಿತಿಯೊಂದಿಗೆ ಇಲ್ಲಿನ ನಾಗರಿಕರು ಜಲಮಂಡಳಿಗೆ ಮನವಿ ಮಾಡಿದ್ದಾರೆ. ಸಿಟ್ಟಿಗೆದ್ದ ನಾಗರಿಕರು ಸ್ಥಳದಲ್ಲಿಯೇ ಕೊಡಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೆಂಗಳೂರು ಉಳಿಸಿ ಸಮಿತಿಯು ಆರೋಪಿಸಿದೆ.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.