ಮುಂದಿನ ವರ್ಷದಿಂದ ಎಲ್ಲ ಹಳ್ಳಿಗಳಲ್ಲೂ ಜಲಧಾರೆ ಯೋಜನೆ
Team Udayavani, Nov 15, 2018, 6:05 AM IST
ಬೆಂಗಳೂರು: ರಾಜ್ಯದ ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರು ಸರಬರಾಜು ಮಾಡುವ ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲಧಾರೆ ಯೋಜನೆಯನ್ನು ಮುಂದಿನ ವರ್ಷದಿಂದ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ, ಮೇಲ್ಮೆ„ ಜಲ ಮೂಲಗಳಿಂದ ನೀರನ್ನು ಶುದ್ಧೀಕರಿಸಿ ಎಲ್ಲ ಗ್ರಾಮೀಣ ಪ್ರದೇಶಗಳ ಜೊತೆಗೆ ಬೆಂಗಳೂರು ಹೊರತು ಪಡೆಸಿ ಉಳಿದ ನಗರಗಳಿಗೂ ಶುದ್ಧ ನೀರು ಸರಬರಾಜು ಮಾಡಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಜನೆಯ ರೂಪುರೇಷೆ, ಅನುಷ್ಠಾನ ಹಾಗೂ ನಿರ್ವಹಣೆಯ ಬಗ್ಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಭೆಯ ನಂತರ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ರಾಜ್ಯದ ಪ್ರತಿ ಹಳ್ಳಿಗೂ ಕುಡಿಯುವ ನೀರು ಪೂರೈಸಲು ತೀರ್ಮಾನಿಸಲಾಗಿದೆ. 53 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮುಂದಿನ ಐದು ವರ್ಷಕ್ಕೆ ನೀರು ಕಲ್ಪಿಸುವ ವಿಸ್ತೃತ ಯೋಜನೆ ಸಿದ್ದಪಡಿಸಿ ಮುಖ್ಯಮಂತ್ರಿಗೆ ನೀಡಲಾಗಿದೆ.
ನದಿ ಮತ್ತು ಜಲಾಶಯಗಳ ಮೂಲಗಳಿಂದ ನೀರು ಪೂರೈಕೆ ಮಾಡಲು ತೀರ್ಮಾನಿಸಲಾಗಿದ್ದು, ಗ್ರಾಮೀಣ ಪ್ರದೇಶಗಳ ಜೊತೆಗೆ ನಗರ ಪ್ರದೇಶಗಳನ್ನೂ ಸೇರಿಸಿಕೊಂಡು ಯೋಜನಾ ವರದಿ ಸಿದ್ದಪಡಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ವರದಿ ಸಿದ್ದಪಡಿಸಿದ ನಂತರ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ