ನೀರಿನ ಟ್ಯಾಂಕರ್‌ಗಳು ಪರವಾನಗಿ ಪಡೆಯುವುದು ಕಡ್ಡಾಯ


Team Udayavani, Mar 16, 2019, 6:33 AM IST

neerina.jpg

ಬೆಂಗಳೂರು: ನಗರದಲ್ಲಿನ ಟ್ಯಾಂಕರ್‌ ನೀರಿನ ಮಾಫಿಯಾಗೆ ಕಡಿವಾಣ ಹಾಕಲು ಬಿಬಿಎಂಪಿ ಮುಂದಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವವರು ಕಡ್ಡಾಯವಾಗಿ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯವಾಗಲಿದೆ. 

ಬೇಸಿಗೆ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ನೀರಿನ ಸಮಸ್ಯೆ ಉಂಟಾಗಿರುವುದರಿಂದ  ಅದನ್ನೇ ಲಾಭವಾಗಿಸಿಕೊಳ್ಳಲು ಮುಂದಾಗಿರುವ ನೀರಿನ ಟ್ಯಾಂಕರ್‌ಗಳು ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿಗೆ ಮುಂದಾಗುತ್ತಾರೆ. ಅದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಟ್ಯಾಂಕರ್‌ ನೀರು ಪೂರೈಕೆಗೆ ಪರವಾನಗಿ ನೀಡಲು ಪಾಲಿಕೆ ಮುಂದಾಗಿದೆ.

ಪಾಲಿಕೆಯಿಂದ ರೂಪಿಸುವ ಹೊಸ ನಿಯಮಗಳಂತೆ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವವರು ಕಡ್ಡಾಯವಾಗಿ ಬಿಬಿಎಂಪಿಯಿಂದ ಉದ್ದಿಮೆ ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಪಾಲಿಕೆಯ ವ್ಯಾಪ್ತಿಯಲ್ಲಿ 4 ಸಾವಿರಕ್ಕೂ ಹೆಚ್ಚಿನ ನೀರು ಪೂರೈಕೆ ಟ್ಯಾಂಕರ್‌ಗಳಿವೆ ಎಂದು ಅಂದಾಜಿಸಲಾಗಿದೆ. ಆದರೆ, ಬಿಬಿಎಂಪಿಯಾಗಲಿ, ಜಲಮಂಡಳಿಯ ಬಳಿಯಾಗಲಿ ನಿಖರ ಮಾಹಿತಿ ಲಭ್ಯವಿಲ್ಲ.  

ಆ ಹಿನ್ನೆಲೆಯಲ್ಲಿ ಟ್ಯಾಂಕರ್‌ ಮಾಲೀಕರು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಸಾರ್ವಜನಿಕರಿಗೆ ನೀರು ಪೂರೈಕೆ ಮಾಡುತ್ತಿದ್ದಾರೆ. ಜತೆಗೆ ಬೇಸಿಗೆಯ ಹಿನ್ನೆಲೆಯಲ್ಲಿ ಜನರ ಸುಲಿಗೆಗೆ ಇಳಿದಿದ್ದಾರೆ. ಈ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಪರವಾನಗಿ ಪಡೆಯುವ ನಿಯಮ ಜಾರಿಗೆ ತರಲು ಪಾಲಿಕೆ ಮುಂದಾಗಿದ್ದು, ಪರವಾನಗಿ ಪಡೆಯದ ಟ್ಯಾಂಕರ್‌ಗಳನ್ನು ಜಪ್ತಿ ಮಾಡಲು ನಿರ್ಧರಿಸಿದೆ. ಹೀಗಾಗಿ, ವಾರ್ಡ್‌ವಾರು ಟ್ಯಾಂಕರ್‌ಗಳ ಮಾಹಿತಿ ಸಂಗ್ರಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನೀರಿನ ಮೂಲ ತೋರಿಸಬೇಕು: ನಗರದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡುವವರು ತಾವು ನೀರನ್ನು ಎಲ್ಲಿಂದ ತರುತ್ತಿದ್ದೇವೆ ಎಂಬ ಮಾಹಿತಿಯನ್ನು ವಾಣಿಜ್ಯ ಪರವಾನಗಿ ಪಡೆಯುವ ವೇಳೆ ಪಾಲಿಕೆಗೆ ತಿಳಿಸಬೇಕು. ಜತೆಗೆ ಆ ನೀರಿನ ಗುಣಮಟ್ಟವನ್ನು ಕೂಡ ಪ್ರಮಾಣೀಕರಿಸಿ ಪ್ರಮಾಣಪತ್ರ ಸಲ್ಲಿಸಬೇಕಿದೆ. ಒಂದು ವೇಳೆ ನೀರಿನ ಮೂಲ ಮತ್ತು ಗುಣಮಟ್ಟ ತೋರಿಸದಿದ್ದರೆ ಅಂತಹ ಟ್ಯಾಂಕರ್‌ಗಳಿಗೆ ನೀರು ಪೂರೈಕೆಗೆ ಅವಕಾಶ ನೀಡದಿರಲು ಪಾಲಿಕೆ ತೀರ್ಮಾನ ಕೈಗೊಂಡಿದೆ. 

ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ: ನೀರಿನ ಸಮಸ್ಯೆಯಿರುವ ಕೆಲವು ವಾರ್ಡ್‌ಗಳಲ್ಲಿ ಜನಪ್ರತಿನಿಧಿಗಳು ಟ್ಯಾಂಕರ್‌ ಮೂಲಕ ಜನರಿಗೆ ನೀರು ಪೂರೈಕೆ ಮಾಡುತ್ತಿದ್ದಾರೆ. ಉಚಿತವಾಗಿ ನೀರು ಪೂರೈಕೆ ಮಾಡಲು ಅವಕಾಶವಿದ್ದರೂ, ಅದನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು ಟ್ಯಾಂಕರ್‌ ಮೇಲೆ ತಮ್ಮ ಹೆಸರು, ರಾಜಕೀಯ ಪಕ್ಷದ ಚಿಹ್ನೆ ಹಾಕಿ ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ ಎಂದು ನಗರ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ. 

ಟ್ಯಾಂಕರ್‌ ನೀರಿಗೆ 2 ದಿನಗಳಲ್ಲಿ ದರ ನಿಗದಿ: ಟ್ಯಾಂಕರ್‌ ನೀರು ಪೂರೈಕೆ ಪರವಾನಗಿ ಕಡ್ಡಾಯಗೊಳಿಸಲು ಮುಂದಾಗಿರುವ ಪಾಲಿಕೆಯು, ನಗರದಾದ್ಯಂತ ಟ್ಯಾಂಕರ್‌ ನೀರಿಗೆ ಏಕರೂಪ ದರ ನಿಗದಿಪಡಿಸುವ ಮಹತ್ತರ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಅದರಂತೆ ಲೋಕೋಪಯೋಗಿ ಇಲಾಖೆಯಲ್ಲಿನ ಶೆಡ್ನೂಲ್‌ ದರ (ಎಸ್‌ಆರ್‌ ರೇಟ್‌) ಪಟ್ಟಿ ನೀಡುವಂತೆ ಇಲಾಖೆಯ ಅಧಿಕಾರಿಗಳನ್ನು ಕೋರಿದ್ದು, ನೀರಿನ ಪೂರೈಕೆ ಪ್ರಮಾಣ, ದೂರ ಸೇರಿ ಇನ್ನಿತರ ಅಂಶಗಳನ್ನು ಪರಿಶೀಲಿಸಿ ದರ ನಿಗದಿ ಮಾಡಲಾಗುತ್ತದೆ. ಅದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಿದವರಿಗೆ ಶಿಕ್ಷೆಯಾಗಲಿದೆ. 

ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವವರು ಸಾರ್ವಜನಿಕರ ಸುಲಿಗೆ ಮಾಡುವುದನ್ನು ತಡೆಯುವ  ಉದ್ದೇಶದಿಂದ ಟ್ಯಾಂಕರ್‌ ನೀರಿಗೆ ದರ ನಿಗದಿಪಡಿಸಲಾಗುವುದು. ಜತೆಗೆ ನಗರದಲ್ಲಿ ಎಲ್ಲಾ ಟ್ಯಾಂಕರ್‌ಗಳು ವಾಣಿಜ್ಯ ಪರವಾನಗಿ ಪಡೆಯುವುದು ಕಡ್ಡಾಯವಾಗಿದ್ದು, ಎರಡು ವಾರಗಳಲ್ಲಿ ಈ ಕುರಿತು ನಿಯಮಗಳನ್ನು ರೂಪಿಸಿ ಪ್ರಕಟಿಸಲಾಗುವುದು.
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.