ಕಲ್ಲಂಗಡಿ ಮೇಳ ಪ್ರಾರಂಭ


Team Udayavani, Feb 18, 2017, 12:26 PM IST

water-melon.jpg

ಬೆಂಗಳೂರು: ಹಾಪ್‌ಕಾಮ್ಸ್‌ನಿಂದ ಪ್ರಾರಂಭಿಸಲಾಗಿರುವ “ಹಾರ್ಟಿಬಜಾರ್‌’ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಬೆಳ್ಳೂರು ಕೃಷ್ಣ  ತಿಳಿಸಿದ್ದಾರೆ. ಕಸ್ತೂರಿ ನಗರದಲ್ಲಿ ಹಾಪ್‌ಕಾಮ್ಸ್‌ ಆರಂಭಿಸಿರುವ ಹಾರ್ಟಿ ಬಜಾರ್‌ ಮಳಿಗೆಯಲ್ಲಿ ಶುಕ್ರವಾರ ದ್ರಾಕ್ಷಿ ಮತ್ತು ಕಲ್ಲಂಗಡಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಎರಡು ತಿಂಗಳ ಹಿಂದೆ ತೆರೆಯಲಾಗಿರುವ ಹಾರ್ಟಿಬಜಾರ್‌ ಗ್ರಾಹಕರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದೆ. ಶೀಘ್ರದಲ್ಲೇ ಸದಾಶಿವನಗರ ಹಾಗೂ ಮೈಸೂರು ರಸ್ತೆಯ ಜಾನಪದ ಲೋಕ ಬಳಿ ಸ್ಥಾಪಿಸಲಾಗುವುದು. ಮುಂದಿನ ದಿನಗಳಲ್ಲಿ ನಗರದಲ್ಲಿ 30 ರಿಂದ 40 ಕಡೆ ಪ್ರಾರಂಭಿಸುವ ಯೋಜನೆಯಿದೆ ಎಂದು ಹೇಳಿದರು. ಹಾರ್ಟಿಬಜಾರ್‌ನಲ್ಲಿ ಹಣ್ಣು, ತರಕಾರಿ, ಪಾನೀಯ, ಐಸ್‌ಕ್ರೀಂ , ಹಾಲಿನ ಉತ್ಪನ್ನ, ದ್ರಾಕ್ಷಾ ರಸ, ಸಿರಿಧಾನ್ಯಗಳು, ಕ್ಯಾಂಪ್ಕೋ ಉತ್ಪನ್ನಗಳು ಸಿಗಲಿದ್ದು,  ದಿನಕ್ಕೆ 40ರಿಂದ 50 ಸಾವಿರ ರೂ. ವರೆಗೆ ವಹಿವಾಟು ನಡೆಯುತ್ತಿದೆ ಎಂದು ತಿಳಿಸಿದರು.

ಹಾರ್ಟಿ ಬಜಾರ್‌ನಿಂದ ಬರುವ ಆದಾಯದಲ್ಲಿ ಶೇ.3ರಿಂದ 5ರಷ್ಟು ಕಟ್ಟಡ ಮಾಲೀಕರಿಗೆ ನೀಡಲಾಗುವುದು. ಕಸ್ತೂರಿ ನಗರದ ಮಾಲೀಕರಿಗೆ ತಿಂಗಳಿಗೆ 45ರಿಂದ 50 ಸಾವಿರ ರೂ. ಬಾಡಿಗೆ ಸಿಗುತ್ತಿದೆ. ಹಾಪ್‌ಕಾಮ್ಸ್‌ ಸಹಭಾಗಿತ್ವದೊಂದಿಗೆ ಹಾರ್ಟಿ ಬಜಾರ್‌ ಮಳಿಗೆಯನ್ನು ಪ್ರಾರಂಭಿಸಲು ಬಯಸುವವರು ಹಾಪ್‌ಕಾಮ್ಸ್‌ ಕಚೇರಿಯನ್ನು ಸಂಪರ್ಕಿಸಬಹುದು. 800 ರಿಂದ 1 ಸಾವಿರ ಚದರಡಿಯಷ್ಟು ವಿಸ್ತೀರ್ಣದ ಜಾಗ ಇದಕ್ಕೆ ಸಾಕು ಎಂದು ಹೇಳಿದರು.

ಪಾಲಿಕೆ ಸದಸ್ಯೆ ಮೀನಾಕ್ಷ್ಮಿ ಲಕ್ಷ್ಮೀಪತಿ, ಹಾಪ್‌ಕಾಮ್ಸ್‌ ತನ್ನ ಮಾರುಕಟ್ಟೆ ಜಾಲವನ್ನು ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ಹಾರ್ಟಿ ಬಜಾರ್‌ ಪರಿಕಲ್ಪನೆ ಅತ್ಯಂತ ಯಶಸ್ವಿ ಹೆಜ್ಜೆ ಎಂದು ಶ್ಲಾ ಸಿದರು. ಹಾಪ್‌ಕಾಮ್ಸ್‌ನಲ್ಲಿ ರೈತರಿಂದ ನೇರವಾಗಿ ತಾಜಾ ತರಕಾರಿ ಮತ್ತು ಹಣ್ಣುಗಳನ್ನು ಖರೀದಿಸಿ, ಗ್ರಾಹಕರಿಗೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಅಂಗ ಸಂಸ್ಥೆಯೊಂದು ರೈತ ಮತ್ತು ಗ್ರಾಹಕರ ಪರವಾಗಿ ಕಾರ್ಯನಿರ್ವಹಿಸುತ್ತಿರುವುದು ಅತ್ಯಂತ ಪ್ರಶಂಸನೀಯ.

ಯಾವುದೇ ರಾಸಾಯನಿಕ ಬಳಸದೆ ಹಣ್ಣುಗಳನ್ನು ಹಾಗೂ ತರಕಾರಿಗಳನ್ನು ಒದಗಿಸುತ್ತಿರುವುದರಿಂದ ಆರೋಗ್ಯದ ದೃಷ್ಠಿಯಿಂದಲೂ ಒಳ್ಳೆಯ ಬೆಳವಣಿಗೆ ಎಂದು ಹೇಳಿದರು. ಹಾರ್ಟಿ ಬಜಾರ್‌ ಮಾರುಕಟ್ಟೆ ವ್ಯವಸ್ಥೆಯನ್ನು ನಗರದೆಲ್ಲೆಡೆ ವಿಸ್ತರಿಸುವ ಕಾರ್ಯವಾಗಬೇಕು. ಪ್ರತಿ 5 ಕಿ.ಮೀ.ಗೆ ಒಂದರಂತೆ ಇಂತಹ ಮಳಿಗೆಗಳು ಇರಬೇಕು.

ಸಾಧ್ಯವಾದರೆ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಹಣ್ಣು, ತರಕಾರಿ ತಲುಪಿಸುವ ಸೇವೆ ಆರಂಭಿಸಿದರೆ ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಹಾಪ್‌ಕಾಮ್ಸ್‌ ಅಧಿಕಾರಿಗಳು ಚಿಂತನೆ ನಡೆಸಬೇಕು. ಇದರಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು. ಹಾಪ್‌ಕಾಮ್ಸ್‌ ಅಧ್ಯಕ್ಷ ಜಿ.ಆರ್‌.ಶ್ರೀನಿವಾಸನ್‌, ಉಪನಿರ್ದೇಶಕ ಪ್ರಶಾಂತ್‌ ಉಪಸ್ಥಿತರಿದ್ದರು.

ಮಾರ್ಚ್‌ ಅಂತ್ಯದವರೆಗೆ ಮೇಳ
ಹಾರ್ಟಿ ಬಜಾರ್‌ನಲ್ಲಿ ಪ್ರಾರಂಭವಾಗಿರುವ ದ್ರಾಕ್ಷಿ, ಕಲ್ಲಂಗಡಿ ಮೇಳ ಮಾರ್ಚ್‌ ಅಂತ್ಯದವರೆಗೆ ನಡೆಯಲಿದೆ. ಶೇ.10ರಷ್ಟು ರಿಯಾಯಿತಿ ದರದಲ್ಲಿ ಹಣ್ಣುಗಳು ಸಿಗಲಿವೆ. 

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.