ಕಲ್ಲಂಗಡಿ ಮೇಳ ಪ್ರಾರಂಭ


Team Udayavani, Feb 18, 2017, 12:26 PM IST

water-melon.jpg

ಬೆಂಗಳೂರು: ಹಾಪ್‌ಕಾಮ್ಸ್‌ನಿಂದ ಪ್ರಾರಂಭಿಸಲಾಗಿರುವ “ಹಾರ್ಟಿಬಜಾರ್‌’ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಬೆಳ್ಳೂರು ಕೃಷ್ಣ  ತಿಳಿಸಿದ್ದಾರೆ. ಕಸ್ತೂರಿ ನಗರದಲ್ಲಿ ಹಾಪ್‌ಕಾಮ್ಸ್‌ ಆರಂಭಿಸಿರುವ ಹಾರ್ಟಿ ಬಜಾರ್‌ ಮಳಿಗೆಯಲ್ಲಿ ಶುಕ್ರವಾರ ದ್ರಾಕ್ಷಿ ಮತ್ತು ಕಲ್ಲಂಗಡಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಎರಡು ತಿಂಗಳ ಹಿಂದೆ ತೆರೆಯಲಾಗಿರುವ ಹಾರ್ಟಿಬಜಾರ್‌ ಗ್ರಾಹಕರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿದೆ. ಶೀಘ್ರದಲ್ಲೇ ಸದಾಶಿವನಗರ ಹಾಗೂ ಮೈಸೂರು ರಸ್ತೆಯ ಜಾನಪದ ಲೋಕ ಬಳಿ ಸ್ಥಾಪಿಸಲಾಗುವುದು. ಮುಂದಿನ ದಿನಗಳಲ್ಲಿ ನಗರದಲ್ಲಿ 30 ರಿಂದ 40 ಕಡೆ ಪ್ರಾರಂಭಿಸುವ ಯೋಜನೆಯಿದೆ ಎಂದು ಹೇಳಿದರು. ಹಾರ್ಟಿಬಜಾರ್‌ನಲ್ಲಿ ಹಣ್ಣು, ತರಕಾರಿ, ಪಾನೀಯ, ಐಸ್‌ಕ್ರೀಂ , ಹಾಲಿನ ಉತ್ಪನ್ನ, ದ್ರಾಕ್ಷಾ ರಸ, ಸಿರಿಧಾನ್ಯಗಳು, ಕ್ಯಾಂಪ್ಕೋ ಉತ್ಪನ್ನಗಳು ಸಿಗಲಿದ್ದು,  ದಿನಕ್ಕೆ 40ರಿಂದ 50 ಸಾವಿರ ರೂ. ವರೆಗೆ ವಹಿವಾಟು ನಡೆಯುತ್ತಿದೆ ಎಂದು ತಿಳಿಸಿದರು.

ಹಾರ್ಟಿ ಬಜಾರ್‌ನಿಂದ ಬರುವ ಆದಾಯದಲ್ಲಿ ಶೇ.3ರಿಂದ 5ರಷ್ಟು ಕಟ್ಟಡ ಮಾಲೀಕರಿಗೆ ನೀಡಲಾಗುವುದು. ಕಸ್ತೂರಿ ನಗರದ ಮಾಲೀಕರಿಗೆ ತಿಂಗಳಿಗೆ 45ರಿಂದ 50 ಸಾವಿರ ರೂ. ಬಾಡಿಗೆ ಸಿಗುತ್ತಿದೆ. ಹಾಪ್‌ಕಾಮ್ಸ್‌ ಸಹಭಾಗಿತ್ವದೊಂದಿಗೆ ಹಾರ್ಟಿ ಬಜಾರ್‌ ಮಳಿಗೆಯನ್ನು ಪ್ರಾರಂಭಿಸಲು ಬಯಸುವವರು ಹಾಪ್‌ಕಾಮ್ಸ್‌ ಕಚೇರಿಯನ್ನು ಸಂಪರ್ಕಿಸಬಹುದು. 800 ರಿಂದ 1 ಸಾವಿರ ಚದರಡಿಯಷ್ಟು ವಿಸ್ತೀರ್ಣದ ಜಾಗ ಇದಕ್ಕೆ ಸಾಕು ಎಂದು ಹೇಳಿದರು.

ಪಾಲಿಕೆ ಸದಸ್ಯೆ ಮೀನಾಕ್ಷ್ಮಿ ಲಕ್ಷ್ಮೀಪತಿ, ಹಾಪ್‌ಕಾಮ್ಸ್‌ ತನ್ನ ಮಾರುಕಟ್ಟೆ ಜಾಲವನ್ನು ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ಹಾರ್ಟಿ ಬಜಾರ್‌ ಪರಿಕಲ್ಪನೆ ಅತ್ಯಂತ ಯಶಸ್ವಿ ಹೆಜ್ಜೆ ಎಂದು ಶ್ಲಾ ಸಿದರು. ಹಾಪ್‌ಕಾಮ್ಸ್‌ನಲ್ಲಿ ರೈತರಿಂದ ನೇರವಾಗಿ ತಾಜಾ ತರಕಾರಿ ಮತ್ತು ಹಣ್ಣುಗಳನ್ನು ಖರೀದಿಸಿ, ಗ್ರಾಹಕರಿಗೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಅಂಗ ಸಂಸ್ಥೆಯೊಂದು ರೈತ ಮತ್ತು ಗ್ರಾಹಕರ ಪರವಾಗಿ ಕಾರ್ಯನಿರ್ವಹಿಸುತ್ತಿರುವುದು ಅತ್ಯಂತ ಪ್ರಶಂಸನೀಯ.

ಯಾವುದೇ ರಾಸಾಯನಿಕ ಬಳಸದೆ ಹಣ್ಣುಗಳನ್ನು ಹಾಗೂ ತರಕಾರಿಗಳನ್ನು ಒದಗಿಸುತ್ತಿರುವುದರಿಂದ ಆರೋಗ್ಯದ ದೃಷ್ಠಿಯಿಂದಲೂ ಒಳ್ಳೆಯ ಬೆಳವಣಿಗೆ ಎಂದು ಹೇಳಿದರು. ಹಾರ್ಟಿ ಬಜಾರ್‌ ಮಾರುಕಟ್ಟೆ ವ್ಯವಸ್ಥೆಯನ್ನು ನಗರದೆಲ್ಲೆಡೆ ವಿಸ್ತರಿಸುವ ಕಾರ್ಯವಾಗಬೇಕು. ಪ್ರತಿ 5 ಕಿ.ಮೀ.ಗೆ ಒಂದರಂತೆ ಇಂತಹ ಮಳಿಗೆಗಳು ಇರಬೇಕು.

ಸಾಧ್ಯವಾದರೆ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಹಣ್ಣು, ತರಕಾರಿ ತಲುಪಿಸುವ ಸೇವೆ ಆರಂಭಿಸಿದರೆ ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಹಾಪ್‌ಕಾಮ್ಸ್‌ ಅಧಿಕಾರಿಗಳು ಚಿಂತನೆ ನಡೆಸಬೇಕು. ಇದರಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು. ಹಾಪ್‌ಕಾಮ್ಸ್‌ ಅಧ್ಯಕ್ಷ ಜಿ.ಆರ್‌.ಶ್ರೀನಿವಾಸನ್‌, ಉಪನಿರ್ದೇಶಕ ಪ್ರಶಾಂತ್‌ ಉಪಸ್ಥಿತರಿದ್ದರು.

ಮಾರ್ಚ್‌ ಅಂತ್ಯದವರೆಗೆ ಮೇಳ
ಹಾರ್ಟಿ ಬಜಾರ್‌ನಲ್ಲಿ ಪ್ರಾರಂಭವಾಗಿರುವ ದ್ರಾಕ್ಷಿ, ಕಲ್ಲಂಗಡಿ ಮೇಳ ಮಾರ್ಚ್‌ ಅಂತ್ಯದವರೆಗೆ ನಡೆಯಲಿದೆ. ಶೇ.10ರಷ್ಟು ರಿಯಾಯಿತಿ ದರದಲ್ಲಿ ಹಣ್ಣುಗಳು ಸಿಗಲಿವೆ. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.