ನಾವು ಬೇರೆ,ಅವರು ಬೇರೆಯವರಲ್ಲ: ಈಶ್ವರ ಖಂಡ್ರೆ


Team Udayavani, Sep 11, 2017, 6:10 AM IST

veerashaiva-lingayat.jpg

ಬೆಂಗಳೂರು: ತಮ್ಮೊಳಗಿನವರನ್ನೇ ನಮ್ಮವರು ಎಂದು ಅಪ್ಪಿಕೊಳ್ಳುತ್ತಿಲ್ಲ. ಇನ್ನು ಹೊರಗಿನವರನ್ನು ಒಪ್ಪಿಕೊಳ್ಳುತ್ತಾರೆಯೇ? ಇಂತಹವರು ಬಸವಣ್ಣನವರು ಸ್ಥಾಪಿಸಿದ ಸಮಾಜದ ವಾರಸುದಾರರು ಆಗಲು ಸಾಧ್ಯವೇ?
– ವೀರಶೈವರಿಂದ ಹೊರತಾದ ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಹೋರಾಟ ಮಾಡುತ್ತಿರುವವರ ನಡೆಯನ್ನು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಪ್ರಶ್ನಿಸಿದ ರೀತಿ ಇದು. 

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಭಾನುವಾರ ಅಖೀಲ ಭಾರತ ವೀರಶೈವ ಮಹಾಸಭಾ ಹಮ್ಮಿಕೊಂಡಿದ್ದ “ವೀರಶೈವ-ಲಿಂಗಾಯತ ನಾವೆಲ್ಲಾ ಒಂದೇ ಎನ್ನುವ  ಯುವ ಬಾಂಧವ್ಯ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಇವನಾರವ ಇವನಾರವ ಎಂದೆನಿಸದಿರಯ್ಯ. ಇವ ನಮ್ಮವ ಇವ ನಮ್ಮವ ಇವ ನಮ್ಮ ಮನೆಯ ಮಗನೆಂದೆನಿಸಯ್ಯ’ ಎಂದು ಬಸವಣ್ಣನವರು ಹೇಳಿದರು. 

ಆದರೆ, “ನಮ್ಮೊಳಗಿನವರನ್ನೇ ನಮ್ಮವರಲ್ಲ ಎಂದು ದೂರ ಇಡಲಾಗುತ್ತಿದೆ. ನೀವೇ ಬೇರೆ, ನಾವೇ ಬೇರೆ ಎಂದು ವಾದಿಸುತ್ತಿದ್ದಾರೆ. ಹೀಗಿರುವಾಗ ಹೊರಗಿನವರನ್ನೂ ನಮ್ಮವರೆಂದು ಒಪ್ಪಿಕೊಳ್ಳುತ್ತಾರೆಯೇ? ಇಂತಹವರೆಲ್ಲಾ ಸಮಾಜದ ವಾರಸುದಾರರು ಆಗುತ್ತಾರೆಯೇ?’ ಎಂದು ಕೇಳಿದರು.

ವೀರಶೈವ-ಲಿಂಗಾಯತ ಸಮಾಜವು ಧಾರ್ಮಿಕ ಸಂಸ್ಕಾರದ ಜತೆಗೆ ತ್ರಿವಿಧ ದಾಸೋಹವನ್ನೂ ಮಾಡಿದೆ. ಇದನ್ನು ಬೇರೆ ಯಾವ ಸಮಾಜವೂ ಕೊಟ್ಟಿಲ್ಲ. ಸಾಮಾಜಿಕನ್ಯಾಯ, ಕಾಯಕ, ಸಹೋದರತ್ವ ತಳಹದಿಯ ಮೇಲೆ ಈ ಸಮಾಜ ನಿರ್ಮಾಣ ಆಗಿದೆ. ನಾವೆಲ್ಲರೂ ಇದರ ವಾರಸುದಾರರು. ಅಂಗೈನಲ್ಲಿ ಲಿಂಗ ಹಿಡಿದು ಪೂಜೆ ಮಾಡುವವರೆಲ್ಲಾ ಲಿಂಗಿಗಳು (ವೀರಶೈವ-ಲಿಂಗಾಯತರು) ಎನ್ನಲು ಏನು ಸಮಸ್ಯೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ವಿಘಟಿಸಿದ್ರೆ ನಿರ್ನಾಮ; ಎಚ್ಚರಿಕೆ
“ಸಮಾಜದ ಅನಿಷ್ಟಗಳ ವಿರುದ್ಧ ಹಾಗೂ ಶೋಷಿತರ ಪರ ಹೋರಾಟ ನಡೆಸುವುದು ಬಿಟ್ಟು, ಪರಸ್ಪರ ದೂಷಿಸುವುದು, ಒಬ್ಬರಿಗೊಬ್ಬರು ಬೈದಾಡಿಕೊಳ್ಳಲು ನಾಚಿಕೆ ಆಗುವುದಿಲ್ಲವೇ’ ಎಂದು ಖಾರವಾಗಿ ಕೇಳಿದ ಅವರು, ವೈಯಕ್ತಿಕವಾಗಿ ಸಮಾಜದ ವ್ಯಕ್ತಿಗಳು ಬಲಿಷ್ಠವಾಗಿರಬಹುದು. ಆದರೆ, ಸಂಘಟನಾತ್ಮಕವಾಗಿ ಸಮಾಜ ದುರ್ಬಲಗೊಳ್ಳುತ್ತಿದೆ. ಒಗ್ಗಟ್ಟಿನಲ್ಲಿ ಶಕ್ತಿ ಇದೆ; ವಿಘಟನೆಯಾದರೆ ನಿರ್ನಾಮ ಆಗಲಿದೆ ಎಂದೂ ಎಚ್ಚರಿಸಿದರು.

ಬಸವಣ್ಣನ ವಿರೋಧಿಗಳಲ್ಲ
ಈಗ ಭಿನ್ನರಾಗ ಹಾಡುತ್ತಿರುವವರೂ ಸೇರಿದಂತೆ ಈ ಹಿಂದೆ ಸಮಾಜದ ಮುಖಂಡರು ಕೂಡಲಸಂಗಮದಲ್ಲಿ ನಡೆದ ಸಭೆಯಲ್ಲಿ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಕಲ್ಪ ಮಾಡಿ, ಸಹಿ ಹಾಕಿದ್ದಾರೆ. ಈಗ ಯಾಕೆ ಬೇರೆ ಎಂಬ ಭಾವ ಎಂದು ಕೇಳಿದ ಅವರು, ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸೂಚ್ಯವಾಗಿ ಹೇಳಿದರು.

ಇದೇ ವೇಳೆ ಸಚಿವ ಎಂ.ಬಿ. ಪಾಟೀಲ ಅವರನ್ನು ಸರ್ವನಾಶ ಮಾಡುವುದಾಗಿ ಜೀವಬೆದರಿಕೆ ಹಾಕಿರುವುದು ಖಂಡನೀಯ. ಧರ್ಮದ ಮೇಲೆ ನಂಬಿಕೆ ಇರುವವರಾರೂ ಇಂತಹ ಕೆಲಸ ಮಾಡುವುದಿಲ್ಲ ಎಂದು ಸಚಿವ ಖಂಡ್ರೆ ತಿಳಿಸಿದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.