ದೇಹ ಕೊಂಡೊಯ್ಯೋ ಆರ್ಥಿಕ ಬಲ ನಮಗಿಲ್ಲ!


Team Udayavani, Dec 11, 2018, 12:26 PM IST

deha-kond.jpg

ಬೆಂಗಳೂರು: “ಬೆಂಗಳೂರಲ್ಲಿ ಅಸಹಜವಾಗಿ ಮೃತಪಟ್ಟ ನಮ್ಮ ಪುತ್ರಿ ಕರೆನ್‌ ಡ್ಯಾನಿಯಲ್‌ ದೇಹವನ್ನು ಕೊಲಂಬಿಯಾಗೆ ಕೊಂಡೊಯ್ಯುವಷ್ಟು ಆರ್ಥಿಕ ಸಧೃಡತೆ ನಮಗಿಲ್ಲ. ಹೀಗಾಗಿ ಕರೆನ್‌ಳ ಅಂತ್ಯ ಸಂಸ್ಕಾರ ನಡೆಸಲು ಆಕೆಯ ಸ್ನೇಹಿತೆ ನೌರಾಗೆ ಸಂಪೂರ್ಣ ಒಪ್ಪಿಗೆಯಿದೆ’.

ಭಾನುವಾರ ಮುಂಜಾನೆ ಹಳೇ ವಿಮಾನ ನಿಲ್ದಾಣ ರಸ್ತೆಯ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟ ಕೊಲಂಬಿಯಾ ಮೂಲದ ಕರೆನ್‌ ಪೋಷಕರು ಸೋಮವಾರ ನಗರ ಪೊಲೀಸರಿಗೆ ಕಳುಹಿಸಿಕೊಟ್ಟ ನಿರಾಕ್ಷೇಪಣಾ (ಎನ್‌ಒಸಿ) ಪತ್ರದ ಸಾರಾಂಶವಿದು.

ಅಪಾರ್ಟ್‌ಮೆಂಟ್‌ನಿಂದ ಬಿದ್ದು ಕರೆನ್‌ ಮೃತಪಟ್ಟ ಬಳಿಕ ಜೀವನ್‌ ಭೀಮಾನಗರ ಠಾಣೆ ಪೊಲೀಸರು, ಕೊಲಂಬಿಯಾ ರಾಯಭಾರ ಕಚೇರಿ ಹಾಗೂ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಈ ವಿಷಯ ತಿಳಿದ ಪೋಷಕರು, ಮಗಳ ಮೃತದೇಹ ಕೊಂಡೊಯ್ಯುವಷ್ಟೂ ಆರ್ಥಿಕ ಸಾಮರ್ಥ್ಯ ತಮಗಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

“ಮಗಳ ಅಕಾಲಿಕ ಸಾವು ನಮ್ಮನ್ನು ಶೋಕದಲ್ಲಿ ಮುಳುಗಿಸಿದೆ. ಆಕೆ ಆತ್ಮಕ್ಕೆ ಶಾಂತಿ ಸಿಗಲಿ. ಆರ್ಥಿಕ ಸಂಕಷ್ಟ ಹಾಗೂ ಇನ್ನಿತರೆ ಕಾರಣಗಳಿಂದ ನಮಗೆ ಬೆಂಗಳೂರಿಗೆ ಬರಲು ಆಗುತ್ತಿಲ್ಲ. ಹೀಗಾಗಿ, ಡ್ಯಾನಿಯಲ್‌ ಸ್ನೇಹಿತೆ ನೌರಾ, ಅಂತಿಮ ಸಂಸ್ಕಾರವನ್ನು ಕ್ರಿಶ್ಚಿಯನ್‌ ಕ್ಯಾಥೋಲಿಕ್‌ ಧರ್ಮದ ವಿಧಿ ವಿಧಾನಗಳ ಅನ್ವಯ ನೆರವೇರಿಸಲು ನಾವು ಒಪ್ಪಿಗೆ ನೀಡುತ್ತಿದ್ದೇವೆ’ ಎಂದು ಸಹಿ ಮಾಡಿ ಎನ್‌ಒಸಿ ಕಳುಹಿಸಿಕೊಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಕರೆನ್‌ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ, ಅಂತ್ಯ ಸಂಸ್ಕಾರಕ್ಕಾಗಿ ನೌರಾ ಅವರ ವಶಕ್ಕೆ ಒಪ್ಪಿಸಲಾಗುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

ಕುಟುಂಬಕ್ಕೆ ಆಧಾರವಾಗಿದ್ದ ಕರೆನ್‌: ಸ್ಪಾನಿಷ್‌, ಅಮೆರಿಕನ್‌ ಇಂಗ್ಲಿಷ್‌ ಸೇರಿ ಹಲವು ಭಾಷೆಗಳಲ್ಲಿ ಪರಿಣತಳಾಗಿದ್ದ ಕರೆನ್‌, ನಗರದ ಹೋಟೆಲೊಂದರಲ್ಲಿ ಭಾಷಾಂತರಕಾರಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾಸಿಕ ವೇತನದಲ್ಲಿ ಇಂತಿಷ್ಟು ಹಣವನ್ನು ಕೊಲಂಬಿಯಾದಲ್ಲಿದ್ದ ಪೋಷಕರಿಗೆ ಕಳಿಸುತ್ತಿದ್ದರು. ಸದ್ಯದಲ್ಲಿಯೇ ಸ್ವದೇಶಕ್ಕೆ ವಾಪಸಾಗಲು ಕರೆನ್‌ ನಿರ್ಧರಿಸಿದ್ದರು.

ಅಷ್ಟರಲ್ಲಿಯೇ ಈ ದುರಂತ ಸಂಭವಿಸಿದೆ ಎಂದು ಆಕೆಯ ಸ್ನೇಹಿತರು ತಿಳಿಸಿದ್ದಾರೆ ಎಂದು ಅಧಿಕಾರಿ ಹೇಳಿದರು. ಕರೆನ್‌ ಆಯತಪ್ಪಿ ಕೆಳಗೆ ಬಿದ್ದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ, ಪ್ರಕರಣವನ್ನು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮತ್ತಷ್ಟು ಸ್ಪಷ್ಟತೆ ಸಿಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

* ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.