ರಾಜ್ಯದಲ್ಲಿ ಬೆಂಕಿ ಹಚ್ಚಲು ನಾವು ಬಿಡುವುದಿಲ್ಲ: ಸಿದ್ದರಾಮಯ್ಯ
Team Udayavani, Jan 1, 2018, 6:00 AM IST
ಬೆಂಗಳೂರು: ಸಮಾಜದಲ್ಲಿ ಸಾಮರಸ್ಯ ಕದಡಬೇಕು ಎಂದು ಬಯಸುವವರು ಮನುಷ್ಯರೇ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಹೇಳಿದರು.
ಬೆಂಗಳೂರು ಪ್ರಸ್ಕ್ಲಬ್ ಭಾನುವಾರ ಹಮ್ಮಿಕೊಂಡಿದ್ದ ಪ್ರಸ್ಕ್ಲಬ್ ವರ್ಷದ ವ್ಯಕ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ,
“ರಾಜಕಾರಣಿಯಾದವರು ಸಮಾಜದಲ್ಲಿ ಶಾಂತಿ-ಸಹಬಾಳ್ವೆ ನೆಲೆಸಲೆಂದು ಆಶಿಸಬೇಕು. ಈ ನಿಟ್ಟಿನಲ್ಲಿ ಶ್ರಮಿಸಬೇಕು. ಆದರೆ, ಸಾಮರಸ್ಯ ಹಾಳು ಮಾಡಬೇಕೆಂದು ಬಯಸುವವರು ನನ್ನ ಪ್ರಕಾರ ಮನುಷ್ಯರೇ ಅಲ್ಲ’ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಬೆಂಕಿ ಹಚ್ಚಲು ನಾವು ಸುಲಭವಾಗಿ ಬಿಡುವುದಿಲ್ಲ. ಹಾಗೊಂದು ವೇಳೆ ಬೆಂಕಿ ಹಚ್ಚಿದರೂ ತಕ್ಷಣ ನಾವು ಆರಿಸಿ ಬಿಡುತ್ತೇವೆ ಎಂದು ಸೂಚ್ಯವಾಗಿ ಹೇಳಿದರು.
ಈ ಹಿಂದೆ ಅಮಿತ್ ಶಾ ಭೇಟಿ ನೀಡಿದಾಗ, “ರಾಜ್ಯದಲ್ಲಿ ಎಷ್ಟು ಲಾಠಿಚಾರ್ಜ್ ಅಥವಾ ಬೆಂಕಿ ಹಚ್ಚುವಂತಹ ಘಟನೆಗಳು ನಡೆದಿವೆ ಎಂದು ಕೇಳಿದರು’ ಎಂದು ಸಂಸದ ಪ್ರತಾಪ್ಸಿಂಹ ಹೇಳಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ವಿಷಯ ಪ್ರಸ್ತಾಪ ಮಾಡಿದಂತಿತ್ತು.
ಮತ್ತೂಬ್ಬರ ಪ್ರಾಣವೂ ಮುಖ್ಯ:
ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ “ಪ್ರಸ್ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸಮಾಜದಲ್ಲಿ ನನ್ನ ಪ್ರಾಣ ಎಷ್ಟು ಮುಖ್ಯವೋ ಮತ್ತೂಬ್ಬರ ಪ್ರಾಣವೂ ಅಷ್ಟೇ ಅಮೂಲ್ಯ ಎಂದು ತಿಳಿದವರಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಮತ್ತೂಬ್ಬರನ್ನು ದ್ವೇಷಿಸುವವನು ಮಾನವನಾಗಲು ಸಾಧ್ಯವೇ ಇಲ್ಲ. ಧರ್ಮ, ಜಾತಿಯ ಹಿನ್ನೆಲೆ ನೋಡುವುದಲ್ಲ; ವಿಶ್ವಮಾನವನಾಗಿ ಜಗತ್ತಿಗೆ ಕಾಲಿಟ್ಟ ವ್ಯಕ್ತಿ, ವಿಶ್ವಮಾನವನಾಗಿ ಬೆಳೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.
ಸಂವಿಧಾನವು ಜಾತ್ಯತೀತವಾದುದು. ಇದನ್ನು ಜಾರಿಗೊಳಿಸುವುದು ಚುನಾಯಿತ ಸರ್ಕಾರದ ಜವಾಬ್ದಾರಿ. ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಜನಪ್ರತಿನಿಧಿಗಳಾಗಲು ಲಾಯಕ್ಕಿಲ್ಲ. ಜಾತೀಯತೆ ಅನುಸರಿಸಿದರೆ, ಅದು ಸಂವಿಧಾನಬಾಹಿರ. ಈ ಮೂಲಭೂತ ತಿಳವಳಿಕೆ ಜನಪ್ರತಿನಿಧಿಗಳಲ್ಲಿ ಇರಬೇಕು ಎಂದು ಸೂಚ್ಯವಾಗಿ ಹೇಳಿದರು.
ಪರ್ಯಾಯ ಸಂವಿಧಾನ ಸಾಧ್ಯವಿಲ್ಲ:
ಮಾನವೀಯ ಮೌಲ್ಯಗಳನ್ನೇ ಸಂವಿಧಾನ ಪ್ರತಿಪಾದನೆ ಮಾಡುತ್ತದೆ. ಆ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ದೇಶದ ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಆದರೆ, ಆ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ಅಪರಾಧವೇ ಎಂದು ಪ್ರಶ್ನಿಸಿದ ಅವರು, ಡಾ.ಅಂಬೇಡ್ಕರ್ ಅವರು ಸ್ವ-ಅನುಭವದಿಂದ ಈ ಸಂವಿಧಾನವನ್ನು ರಚಿಸಿದ್ದಾರೆ. ಇದಕ್ಕಿಂತ ಉತ್ತಮವಾದುದು ಅಥವಾ ವ್ಯತಿರಿಕ್ತವಾದುದನ್ನು ತರಲು ಸಾಧ್ಯವೇ ಇಲ್ಲ ಮತ್ತು ಸೂಕ್ತವೂ ಅಲ್ಲ ಎಂದು ಹೇಳಿದರು.
ಸಮಾಜದಲ್ಲಿ ಕೆಳವರ್ಗದವರು ಸ್ವಾಭಿಮಾನದಿಂದ ಬದುಕುವುದೇ ದುರಹಂಕಾರ ಎಂದು ಬಿಂಬಿಸಲಾಗುತ್ತಿದೆ. ಆದರೆ, ಮೇಲ್ವರ್ಗದವರು ಇದೇ ಸ್ವಾಭಿಮಾನದಿಂದ ಬದುಕಿದರೆ, ಅದು ಪ್ರತಿಷ್ಠೆ ಆಗುತ್ತದೆ. ಈ ಮನಃಸ್ಥಿತಿ ಬದಲಾಗಬೇಕಾಗಿದೆ ಎಂದ ಅವರು, ನನಗೂ ದುರಹಂಕಾರಿ, ಹುಂಬ ಎಂದೆಲ್ಲಾ ಕೆಲವರು ಹೇಳುತ್ತಾರೆ. ಆದರೆ, ನಾನು ಹಳ್ಳಿಯಿಂದ ಬಂದವನು. ಆ ಸೊಗಡು ಹೋಗುವುದೇ ಇಲ್ಲ. ಹಾಗಾಗಿ, ನಾನು ಮಾತನಾಡುವುದೇ ಹೀಗೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್