ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

"ದಿಢೀರ್‌ ನೆರೆ' ಜತೆಗೆ ಕಸ ವಿಲೇವಾರಿ ಸಮಸ್ಯೆ

Team Udayavani, Oct 16, 2021, 10:17 AM IST

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚು ತ್ಯಾಜ್ಯ ಸೃಷ್ಟಿಯಾಗಿದ್ದು, ಈ ಮಧ್ಯೆ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ನಗರದಲ್ಲಿ “ದಿಢೀರ್‌ ನೆರೆ’ ಜತೆಗೆ ಕಸ ವಿಲೇವಾರಿ ಸಮಸ್ಯೆ ಕೂಡ ಕಾಡುತ್ತಿದೆ.

ಇದು ಪಾಲಿಕೆಗೆ ತಲೆನೋವಾಗಿ ಪರಿಣಮಿಸಿದೆ. ಹಬ್ಬದ ಹಿನ್ನೆಲೆಯಲ್ಲಿ ಸುತ್ತಲಿನ ಗ್ರಾಮಾಂತರ ಪ್ರದೇಶಗಳಿಂದ ಬಾಳೆಕಂದು, ಮಾವಿನ ಎಲೆ, ಬೂದು ಕುಂಬಳಕಾಯಿ ಸಾಕಷ್ಟು ಪ್ರಮಾಣದಲ್ಲಿ ಬಂದಿತ್ತು. ಶುಕ್ರವಾರ ಸಂಜೆಯಾಗುತ್ತಿದ್ದಂತೆ ರೈತರು ಹಾಗೂ ವ್ಯಾಪಾರಿಗಳು ತಂದಿರುವ ವಸ್ತುಗಳನ್ನು ಅಲ್ಲಅಲ್ಲೇ ಬಿಟ್ಟು ಹೋಗಿದ್ದಾರೆ.

ಈ ತ್ಯಾಜ್ಯ ತೆರವುಗೊಳಿಸುವಷ್ಟರಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇದು ವಿಲೇವಾರಿಗೆ ಅಡತಡೆ ಉಂಟುಮಾಡಿದೆ. ಹಾಗಾಗಿ, ಶನಿವಾರದವರೆಗೆ ಸಮಸ್ಯೆ ಮುಂದುವರಿಯುವ ಸಾಧ್ಯತೆ ಇದೆ. ಕೆ.ಆರ್‌. ಮಾರುಕಟ್ಟೆ, ಮಲ್ಲೇಶ್ವರ, ಮಡಿವಾಳ, ಕೆ.ಆರ್‌. ಪುರ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಈ ತ್ಯಾಜ್ಯ ಕಂಡುಬಂತು. ಈ ನಡುವೆ ರಸ್ತೆ ಬದಿಗಳಲ್ಲಿ ಬಾಳೆಕಂದು, ಮಾವಿನ ಎಲೆ ಬಿದ್ದಿದ್ದರಿಂದ ಮಳೆ ನೀರಿನಲ್ಲಿ ಅದು ಸೇರಿಕೊಂಡು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯಲು ಮತ್ತಷ್ಟು ಅಡ್ಡಿ ಉಂಟುಮಾಡಿದ ಘಟನೆಗಳೂ ಅಲ್ಲಲ್ಲಿ ವರದಿಯಾಗಿವೆ.

ಅಂತಹ ಕಡೆಗಳಲ್ಲಿ ಪಾಲಿಕೆ ಸಿಬ್ಬಂದಿ ಮಳೆಯಲ್ಲೇ ಭೇಟಿ ನೀಡಿ, ತೆರವುಗೊಳಿಸಿದರು. ಇನ್ನು ಹಲವೆಡೆ ತ್ಯಾಜ್ಯವನ್ನು ಕಾಂಪ್ಯಾಕ್ಟರ್‌ನಲ್ಲಿ ತುಂಬಿ ನಿಲ್ಲಿಸಲಾಗಿದ್ದು, ಲ್ಯಾಂಡ್‌ಫಿಲ್‌ ಮತ್ತು ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ತೆಗೆದುಕೊಂಡು ಹೋಗಲು ಅಡ್ಡಿಯಾಗಿದ್ದು, ಶನಿವಾರ ಬೆಳಗ್ಗೆ ಹೊತ್ತಿಗೆ ವಿಲೇವಾರಿ ಆಗಲಿದೆ ಎಂದು ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದರು.

ಆಯುಧ ಪೂಜೆ ಹಾಗೂ ವಿಜಯದಶಮಿ ಒಳಗೊಂಡಂತೆ ಎರಡೂ ದಿನಗಳಲ್ಲಿ ಸುಮಾರು 6,200-6,500 ಟನ್‌ ತ್ಯಾಜ್ಯ ಸೃಷ್ಟಿಯಾಗಿದ್ದು, ಇವುಗಳ ತೆರವಿಗೆ ನಗರದಾದ್ಯಂತ ಅಂದಾಜು 591 ಕಾಂಪ್ಯಾಕ್ಟರ್‌ಗಳು ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ:- ಕೋಟಿಗೊಬ್ಬ-3 ಚಿತ್ರ ವಿಮರ್ಶೆ: ಸತ್ಯ ಶೋಧನೆಯಲ್ಲಿ ದೊರೆತ ಶಿವ ಸಾಂಗತ್ಯ

ಇದು ಸಾಮಾನ್ಯ ದಿನಗಳಿಗೆ ಹೋಲಿಸಿದರೆ, ಶೇ. 30ರಷ್ಟು ಹೆಚ್ಚುವರಿ ಆಗಿದೆ. ಆದರೆ, ಇದರ ವಿಲೇವಾರಿಗೆ ವ್ಯವಸ್ಥಿತ ಯೋಜನೆ ರೂಪಿಸಿದ್ದರಿಂದ ಯಾವುದೇ ಸಮಸ್ಯೆ ಆಗಿಲ್ಲ. ಲ್ಯಾಂಡ್‌ಫಿಲ್‌ನಲ್ಲಿ ಕೂಡ ಮಣ್ಣಿನ ಪದರು ಮಾಡಿ, ಸುರಿಯಲಾಗುತ್ತಿದೆ. ಹಾಗಾಗಿ, ತ್ಯಾಜ್ಯ ವಿಲೇವಾರಿ ವಾಹನಗಳ ಸಂಚಾರ ಕೂಡ ಸರಾಗವಾಗಿದೆ. ಒಂದು ವೇಳೆ ನಿರಂತರ ಮಳೆ ಸುರಿಯುತ್ತಿದ್ದರೆ, ಸಮಸ್ಯೆ ಆಗುತ್ತಿತ್ತು. ಸದ್ಯಕ್ಕೆ ಆ ತೊಂದರೆ ಇಲ್ಲ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಘನ ತ್ಯಾಜ್ಯ ನಿರ್ವಹಣೆ) ಡಾ.ಹರೀಶ್‌ ಕುಮಾರ್‌ ಸ್ಪಷ್ಟಪಡಿಸಿದರು.

ಆಯುಧ ಪೂಜೆಯ ಹಿನ್ನೆಲೆಯಲ್ಲಿ ಗುತ್ತಿಗೆದಾರರು ತಮ್ಮ ಆಟೋ ಟಿಪ್ಪರ್‌ಗಳು ಹಾಗೂ ಕಾಂಪ್ಯಾಕ್ಟರ್‌ಗಳಿಗೆ ಪೂಜೆ ಸಲ್ಲಿಸಿದ್ದಾರೆ. ಪರಿಣಾಮ ನಗರದಲ್ಲಿ ಗುರುವಾರ ವಾಹನಗಳು ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡಿಲ್ಲ. ಇದರೊಂದಿಗೆ ಪೌರಕಾರ್ಮಿಕರು ರಜೆ ತೆಗೆದುಕೊಂಡಿರುವುದರಿಂದ ರಸ್ತೆಗಳ ಸ್ವತfತಾ ಕಾರ್ಯ, ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ವ್ಯತ್ಯಯ ಉಂಟಾಗಿತ್ತು ಎನ್ನಲಾಗಿದೆ. ಆದರೆ, ಇದನ್ನು ಅಧಿಕಾರಿಗಳು ತಳ್ಳಿಹಾಕಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.