ಡಿಕೆಶಿ ಸ್ವಾಗತ: ನಗರದಲ್ಲಿ ಸಂಚಾರ ದಟ್ಟಣೆ
Team Udayavani, Oct 27, 2019, 3:07 AM IST
ದೇವನಹಳ್ಳಿ: ನೆಚ್ಚಿನ ನಾಯಕನ ಕರೆದುಕೊಂಡು ಹೋಗಲು ಸೇಬಿನಿಂದ ಸಿಂಗಾರಗೊಂಡಿರೋ ಕಾರು. ವಿಮಾನ ನಿಲ್ದಾಣದ ಹೊರಗೆ ಬರುತ್ತಿದ್ದಂತೆ ಡಿಕೆಶಿಯನ್ನ ಕಂಡ ಕಾರ್ಯಕರ್ತರಿಂದ ಸ್ವಾಗತದ ಕಹಳೆ. ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಎತ್ತಿಕೊಂಡು ಕರೆತರುವ ಅಭಿಮಾನಿಗಳು. ಇವು ವೈಭವದ ಸ್ವಾಗತಕ್ಕೆ ಸಾಕ್ಷಿಯಾದವು.
ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಮಾಡಿದರು. ಇಡಿ ಕುಣಿಕೆಯಲ್ಲಿ ಸಿಲುಕಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ಗೆ ದೆಹಲಿ ಹೈಕೊರ್ಟ್ ಬುಧವಾರ ಜಮೀನು ಮಂಜೂರು ಮಾಡಿತ್ತು. ಸುಮಾರು 50ಕ್ಕೂ ಹೆಚ್ಚು ದಿನ ಇಟಿ ವಿಚಾರಣೆಯನ್ನ ಎದುರಿಸಿ ಬಂಧನಕ್ಕೊಳಗಾಗಿ ಜಾಮೀನು ಪಡೆದ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ಸಾದರು.
ಇನ್ನೂ ಡಿ.ಕೆ. ಶಿವಕುಮಾರ್ ಆಗಮನದ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರು ಡಿಕೆಶಿ ಪರ ಘೋಷಣೆಯಲ್ಲಿ ತೊಡಗಿದ್ದರು. ಮದ್ಯಾಹ್ನ 2.40 ಕ್ಕೆ ದೆಹಲಿಯಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಕೆಐಎಎಲ್ಗೆ ಬಂದಿಳಿದ ಡಿ.ಕೆ.ಶಿವಕುಮಾರ್ ಇನ್ನೂ ವಿಮಾನ ನಿಲ್ದಾಣದ ಒಳಗೆ ಬರುತ್ತಿದ್ದಂತೆ ಬೆಳಗಾವಿಗೆ ತೆರಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಶಿವಕುಮಾರ್ ಬಳಿ ತೆರಳಿ ಗುಡ್ಲಕ್ ಹೇಳಿ ಸ್ವಾಗತಿಸಿದ್ದು ವಿಶೇಷವಾಗಿತ್ತು.
ನಂತರ ವಿಮಾನ ನಿಲ್ದಾಣದ ಹೊರಗೆ ಬರುತ್ತಿದ್ದಂತೆ ಕಾರ್ಯಕರ್ತರ ಘೋಷಣೆಗಳಿಂದ ವಿಮಾನ ನಿಲ್ದಾಣವೇ ಡಿ.ಕೆ. ಹೆಸರಿನಲ್ಲಿ ಮೊಳಗಿತ್ತು. ಅಲ್ಲದೆ ಡಿಕೆಶಿಯನ್ನ ಕರೆದುಕೊಂಡು ಹೋಗಲು ವೊಲ್ವೊ ಕಾರನ್ನ ಸುಮಾರು 200 ಕೆ.ಜಿ. ಸೇಬಿನಿಂದ ಅಲಂಕಾರ ಮಾಡಲಾಗಿತ್ತು. ಈ ವೇಳೆ ಡಿ.ಕೆ. ಶಿವಕುಮಾರ್ ಕಾರು ಬಳಿ ಬರಲು ಸಾಕಷ್ಟು ಹರಸಹಾಸವೇ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜತೆಗೆ ಪೊಲೀಸರಿಗೆ ಡಿಕೆಶಿ ಅಭಿಮಾನಿಗಳನ್ನ ನಿಯಂತ್ರಿಸಲು ದೊಡ್ಡ ಸಾಹಸವನ್ನೇ ಮಾಡಬೇಕಾಯಿತು.
ಅಲ್ಲದೆ ಡಿ.ಕೆ.ಯವರ ಸ್ವಾಗತದ ವೇಳೆ ಹಲವಾರು ಜನ ತಮ್ಮ ಮೊಬೈಲ್ಗಳನ್ನು, ಚಪ್ಪಲಿಗಳನ್ನು ಕಳೆದುಕೊಂಡರು. ಡಿಕೆಶಿಗಾಗಿ ಮನೆಯಲ್ಲಿ ಪ್ರಾರ್ಥನೆಯನ್ನ ಸಲ್ಲಿಸುತ್ತಿದ್ದ ಅಭಿಮಾನಿಯೊಬ್ಬ ಡಿ.ಕೆ. ಶಿವಕುಮಾರ್ಗಾಗಿ ತಿರುಪತಿಯಲ್ಲಿ ವಿಶೇಷ ಪೂಜೆಯನ್ನ ಸಲ್ಲಿಸಿ ಲಾಡುಗಳನ್ನು ತಂದಿದ್ದು ವಿಶೇಷವಾಗಿತ್ತು. ಅಲ್ಲದೆ ಡಿ.ಕೆ.ಯವರನ್ನ ರಾಜಕೀಯ ದುರುದ್ದೇಶದಿಂದ ಬಂಧನ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಕಿಡಿಕಾರಿದರು.
ಶಾಸಕರಾದ ಕೃಷ್ಣ ಬೈರೇಗೌಡ, ವೆಂಕಟ ರಮಣಯ್ಯ ನಂಜೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಂಸದ ಶಿವ ರಾಮೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್ ರವಿ, ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರಿದ್ದರು.
ಪ್ರೀತಿಯನ್ನು ಅಳಿಯಲು ಸಾಧ್ಯವಿಲ್ಲ. ನಾನು ಯಾರಿಗೂ ದ್ರೋಹ ಮಾಡಿಲ್ಲ. ನನ್ನ ಜತೆ ಇಡೀ ರಾಜ್ಯದ ಜನರಿದ್ದಾರೆ. ಕಾನೂನಿಗೆ ಗೌರವ ನೀಡಿದ್ದೇನೆ. ಇಷ್ಟು ಜನರು ಬಂದಿರುವುದರಿಂದ ಅಭಿಮಾನಕ್ಕೆ ಚಿರಋಣಿ ಆಗಿರುತ್ತಾನೆ. ಮುಣದಿನ ದಿನಗಳಲ್ಲಿ ರಾಜ್ಯದ ಜನತೆಯ ಮುಂದೆ ಬಿಚ್ಚಿ ಇಡುತ್ತೇನೆ.
-ಡಿ.ಕೆ. ಶಿವಕುಮಾರ್, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ