ಸ್ವೀಟ್‌ 2020ಗೆ ಅದ್ಧೂರಿ ಸ್ವಾಗತ


Team Udayavani, Jan 1, 2020, 3:10 AM IST

street

ಹೊಸ ವರ್ಷಾಚರಣೆ ಅಂಗವಾಗಿ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಲ್ಲಿ ಅಪಾರ ಜನಸ್ತೋಮ ನೆರೆದಿತ್ತು. ರಾತ್ರಿ 12 ಗಂಟೆಯಾಗುತ್ತಿದ್ದಂತೆ ಯುವಕರು ಹ್ಯಾಪಿ ನ್ಯೂ ಇಯರ್‌ ಎಂದು ಘೋಷಿಸುತ್ತಾ ಹೊಸವರ್ಷವನ್ನು ಬರಮಾಡಿಕೊಂಡರು. ನೆರೆದಿದ್ದ ಜನರು ಹೊಸವರ್ಷದ ಅಭಿನಂದನೆಯನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಹೋಟೆಲ್‌ ರೆಸ್ಟೋರೆಂಟ್‌ಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪೊಲೀಸರು ಯಾವುದೇ ಅವಘಡ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಿದ್ದರು.

ಬೆಂಗಳೂರು: ಒಂದೆಡೆ ಕೈಯಲ್ಲಿ ಹಿಡಿದಿದ್ದ ಬಲೂನುಗಳನ್ನು ಬಾನಿನತ್ತ ಹಾರಿಬಿಟ್ಟ ಯುವಜನತೆ, ಮತ್ತೂಂದೆಡೆ ಬಾನಲ್ಲಿ ಬಣ್ಣ ಬಣ್ಣದ ಚಿತ್ತಾರ ಮೂಡಿಸುತ್ತಿರುವ ಪಟಾಕಿಗಳ ಸದ್ದು, ಹಷೋದ್ಗಾರ, ಕುಣಿತ, ಮೋಜು-ಮಸ್ತಿಗಳೊಂದಿಗೆ 2019ಕ್ಕೆ ಬೈ ಬೈ ಹೇಳಿದ ಉದ್ಯಾನನಗರಿ ಜನತೆ 2020ನೇ ವರ್ಷಕ್ಕೆ ಅದ್ಧೂರಿ ಸ್ವಾಗತ ಕೋರಿದರು.

ನಗರದ ಯುವ ಜನತೆಯ ಹೊಸ ವರ್ಷಾಚರಣೆಯ ಕೇಂದ್ರ ಸ್ಥಳವಾದ ಎಂ.ಜಿ ರಸ್ತೆ ಮತ್ತು ಬ್ರಿಗೇಡ್‌ ರಸ್ತೆ ಜಂಕ್ಷನ್‌ನಲ್ಲಿ ಅಪಾರ ಜನಸ್ತೋಮ ನೆರೆದಿತ್ತು. ಮಧ್ಯರಾತ್ರಿ 11.59 ಹಿಮ್ಮುಖ ಕೌಟ್‌ಡೌನ್‌ ಆರಂಭವಾಯಿತು. ಗಡಿಯಾರದ ಮುಳ್ಳು 12 ಗಂಟೆ ಬಾರಿಸುತ್ತಿದ್ದಂತೆ ಸಂಭ್ರಮದ ಕಟ್ಟೆ ಹೊಡೆದು ನೆರೆದಿದ್ದ ಜನರೆಲ್ಲಾ ಖುಷಿಯ ಅಲೆಯಲ್ಲಿ ಮಿಂದೆದ್ದರು. ಇದೇ ವೇಳೆ ಆಕಾಶಕ್ಕೆ ಸಿಡಿದ ಪಟಾಕಿಗಳು ಚಿತ್ತಾರ ಮೂಡಿಸಿದವು.

ಹಾಡು, ನೃತೃ, ಶಿಳ್ಳೆ ಚಪ್ಪಾಳೆಯ ಮೂಲಕ “ಹ್ಯಾಪಿ ನ್ಯೂ ಇಯರ್‌’ “ಹೊಸ ವರ್ಷದ ಶುಭಾಶಯಗಳು’ ಎಂದು ಹರ್ಷೋದ್ಗಾರದ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು. ಹೊಸ ವರ್ಷದ ಸ್ವಾಗತ ಹಿನ್ನೆಲೆಯಲ್ಲಿ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ ಹಾಗೂ ಕಮರ್ಷಿಯಲ್‌ ಸ್ಟ್ರೀಟ್‌ಗಳಲ್ಲಿ ಎರಡು ದಿನ ಮುಂಚೆಯೇ ವಿಶೇಷ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ವಾಣಿಜ್ಯ ಮಳಿಗಗಳು, ಕಟ್ಟಡಗಳು ಸಿಂಗಾರಗೊಂಡಿದ್ದವು.

ಶುಭಾಶಯ ವಿನಿಮಯ: ವಿವಿಧ ವೇಷಭೂಷಣಗಳು ಹಾಗೂ ರಂಗುರಂಗಿನ ಉಡುಗೆ ತೊಡುಗೆಗಳನ್ನು ಧರಿಸಿಕೊಂಡು ಬಂದಿದ್ದ ಯುವಕರು ಎಲ್ಲರನ್ನು ಆಕರ್ಷಿಸಿದರು. ನಾನಾ ನಮೂನೆಯ ಸಂಗೀತ ವಾದ್ಯಗಳು, ಬಲೂನು, ಹೊಸ ವರ್ಷ ಶುಭಾಶಯ ಕೊರುವ ಫ‌ಲಕಗಳನ್ನು ಹಿಡಿದು ತಂಡೋಪ ತಂಡವಾಗಿ ಬಂದಿದ್ದರು. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಯುವ ಜನತೆ ವರ್ಷಪೂರ್ತಿ ಇದೇ ಹರ್ಷ ಇರಲೆಂದು ಪರಸ್ಪರ ಆತ್ಮೀಯ ಅಪ್ಪುಗೆ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.

“ಹ್ಯಾಪಿ ನ್ಯೂ ಇಯರ್‌…’ ಶುಭಾಶಯ ವಿನಿಮಯ ಎಲ್ಲೆಡೆಯಿಂದ ಕೇಳಿಬರುತ್ತಿತ್ತು. ಈ ಹಿಂದೆ ಹೊಸ ವರ್ಷಾಚರಣೆಯ ವೇಳೆ ನೂಕು ನುಗ್ಗಲು ಉಂಟಾಗಿ, ಲೈಂಗಿಕ ದೌರ್ಜನ್ಯದಂತಹ ಘಟನೆಗಳು ವರದಿಯಾಗಿದ್ದವು. ಹೀಗಾಗಿ ಈ ವರ್ಷವೂ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಬ್ರಿಗೇಡ್‌ ರಸ್ತೆಯಲ್ಲಿ 12 ಗಂಟೆಗೆ ವಿದ್ಯುತ್‌ ದೀಪಗಳನ್ನು ಸ್ಥಗಿತಗೊಳಿಸಲಿಲ್ಲ. ಹೆಚ್ಚಿನ ಜನದಟ್ಟಣೆ ಹಿನ್ನೆಲೆ ಒಂದಿಷ್ಟು ನೂಕುನುಗ್ಗುಲು ಉಂಟಾಯಿತು.

ಸಂಜೆಯಿಂದಲೇ ಸಂಭ್ರಮ: ನಗರದಾದ್ಯಂತ ಮಂಗಳವಾರ ಸಂಜೆಯಿಂದಲೇ ಹೊಸ ವರ್ಷದ ಸಂಭ್ರಮ ಮನೆ ಮಾಡಿತ್ತು. ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ರೆಸಿಡೆನ್ಸಿ ರಸ್ತೆ, ಚರ್ಚ್‌ ಸ್ಟ್ರೀಟ್‌, ಕಮರ್ಷಿಯಲ್‌ ಸ್ಟ್ರೀಟ್‌, ಮಲ್ಲೇಶ್ವರ, ಜಯನಗರ, ಇಂದಿರಾನ ಗರ, ಕೋರಮಂಗಲ, ಮಾರತ್ತಹಳ್ಳಿ, ಹಲಸೂರು, ಕಾಡು ಗೋಡಿ, ವೈಟ್‌ಫೀಲ್ಡ್‌ ಹಾಗೂ ಹೊಸೂರು ರಸ್ತೆ, ಎಲೆಕ್ಟ್ರಾನಿಕ್‌ ಸಿಟಿಯ ಪ್ರಮುಖ ಕಟ್ಟಡ, ಹೋಟೆಲ್‌, ರೆಸ್ಟೋರೆಂಟ್‌ ಪಬ್‌ಗಳನ್ನು ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗಿತ್ತು.

ಸಂಜೆ 7 ಗಂಟೆಯಿಂದಲೇ ನಗರದ ಬಹುತೇಕ ಐಶಾರಾಮಿ ಹೋಟೆಲ್‌, ಪಬ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮೋಜು ಮಸ್ತಿ ಆರಂಭವಾಗಿತ್ತು. ಕೆಲವು ಮಳಿಗೆಗಳ ಮುಂದೆ ಅಳವಡಿಸಿದ್ದ ಧ್ವನಿವರ್ಧಕಗಳಿಂದ ವಿದೇಶಿ ಮಿಶ್ರಿತ ಸಂಗೀತ ಕೇಳಿಬರುತ್ತಿತ್ತು.

ಮನೆ ಕಚೇರಿಗಳಲ್ಲಿಯೇ ಕಾರ್ಯಕ್ರಮ: ಅನೇಕರು ಮನೆಗಳಲ್ಲಿ, ಕಚೇರಿಗಳಲ್ಲಿಯೇ ಹೊಸ ವರ್ಷದ ವಿಶೇಷ ಕಾರ್ಯಕ್ರಮ ಹಾಗೂ ಔತಣಕೂಟ ಆಯೋಜಿಸಿದ್ದರು. ಸಂಜೆಯಿಂದಲೇ ಪಾನೀಯ ಜೊತೆಗೆ ಹಾಡು, ನೃತ್ಯ, ಆಟಗಳ ಮೂಲಕ ಸಂತಸ ಪಟ್ಟರು. ಬಳಿಕ 12 ಗಂಟೆಗೆ ಕೇಕ್‌ ಕತ್ತರಿಸುವ ಮೂಲಕ 2019ಕ್ಕೆ ಸ್ವಾಗತ ಕೋರಿದರು. ಸ್ನೇಹಿತರು, ಸಂಬಂಧಿಕರು, ಕುಟುಂಬದವರು ಪರಸ್ಪರ ಶುಭಾಶಯ ಕೋರಿ ಕುಣಿದು ಕುಪ್ಪಳಿದರು. ಕೆಲವರು ರಾತ್ರಿ ಚರ್ಚ್‌ಗಳ ಆವರಣಕ್ಕೆ ತೆರಳಿ ಮೂಂಬತ್ತಿ ಹಚ್ಚುವ ಮೂಲಕ ಹೊಸ ವರ್ಷ ಸ್ವಾಗತಿಸಿದರು.

ಮಹಿಳೆಯರ ರಕ್ಷಣೆಗೆ ಆದ್ಯತೆ: ಸಂಭ್ರಮಾಚರಣೆ ಬಳಿಕ ಮನೆಗೆ ತೆರಳುತ್ತಿದ್ದ ಮಹಿಳೆಯರು, ಯುವತಿಯರ ಬಳಿ ಅನುಚಿತವಾಗಿ ವರ್ತನೆ ತೋರಿದ ಘಟನೆಯು ನಡೆಯಿತು. ಅದರಿಂದ ಗಾಬರಿಗೊಂಡ ಸಂತ್ರಸ್ತೆಯರು ಸಮೀಪದಲ್ಲೇ ಇದ್ದ ಸೇಫ್ಟಿ ಐಲ್ಯಾಂಡ್‌ ಸಿಬ್ಬಂದಿಗೆ ತಮ್ಮ ಅಹವಾಲು ತಿಳಿಸಿದರು. ಅವರನ್ನು ಸಂತೈಸಿದ ಸಿಬ್ಬಂದಿ ಅವರ ಮನೆ ವಿಳಾಸ ಹಾಗೂ ಪೋಷಕರ ಮಾಹಿತಿ ಪಡೆದು ಕಳುಹಿಸಿಕೊಟ್ಟರು. ಮಹಿಳೆಯರ ರಕ್ಷಣೆಗಾಗಿ ಪ್ರತ್ಯೇಕವಾಗಿ ತೆರೆದಿರುವ ಸೇಫ್ಟಿ ಐಲ್ಯಾಂಡ್‌ನ‌ಲ್ಲಿ ಪಾನಮತ್ತ ಯುವತಿಯರನ್ನು ಕರೆದೊಯ್ದು ಕೆಲ ಹೊತ್ತಿನ ಬಳಿಕ ಅವರ ವಿಳಾಸ ಅಥವಾ ಸಂಬಂಧಿಕರನ್ನು ಸಂಪರ್ಕಿಸಿ ಮನೆಗೆ ಕಳುಹಿಸುವ ಕೆಲಸವನ್ನು ಪೊಲೀಸ್‌ ಸಿಬ್ಬಂದಿ ಮಾಡಿದರು.

ಬ್ರಿಗ್ರೇಡ್‌ ರೋಡ್‌ ಎಲ್ಲಿ?: ಇದೇ ಮೊದಲ ಬಾರಿಗೆ ಬ್ರಿಗೇಡ್‌ ರಸ್ತೆಗೆ ಬಂದಿದ್ದ ಸಾರ್ವಜನಿಕರೊಬ್ಬರು, ಸಾವಿರಾರು ಮಂದಿಯನ್ನು ಕಂಡು ಅಚ್ಚರಿಗೊಂಡಿದ್ದರು. ಅಲ್ಲದೆ, ವಾಟ್‌ ಟವರ್‌ ಮೇಲೆ ನಿಂತಿದ್ದ ಪೊಲೀಸ್‌ ಸಿಬ್ಬಂದಿಗೆ ಬ್ರಿಗೇಡ್‌ ರಸ್ತೆ ಎಲ್ಲಿ ಎಂದು ಪ್ರಶ್ನಿಸಿದರು? ಆಗ ಧ್ವನಿ ವರ್ಧಕದ ಮೂಲಕ ಸೂಚನೆ ನೀಡುತ್ತಿದ್ದ ಪೊಲೀಸ್‌ ಸಿಬ್ಬಂದಿ” ಏನಪ್ಪ ಇಲ್ಲಿ ನಿಂತು ಬ್ರಿಗೇಡ್‌ ರಸ್ತೆ ಎಲ್ಲಿ ಅಂತಿಯಲ್ಲ. ಈ ವರ್ಷನಾದರೂ ಒಳ್ಳೆಯದಾಗಲಿ. ಇದೇ ಬ್ರಿಗೇಡ್‌ ರಸ್ತೆ ಎಂದರು. ಆಗ ಸ್ಥಳದಲ್ಲಿದ್ದ ಸಾವಿರಾರು ಮಂದಿ ಸಾರ್ವಜನಿಕರು ಒಂದು ಕ್ಷಣ ನಗೆಗಡಲಲ್ಲಿ ತೇಲಿದರು.

ನಿರಾಸೆ ವ್ಯಕ್ತಪಡಿಸಿದ ಜನರು: ಪ್ರತಿ ವರ್ಷ ಲೈಟ್‌ ಆನ್‌ ಮಾಡುವುದು, ಸಂಗೀತ ಹಾಕುವ ಮೂಲಕ ಹೊಸವರ್ಷ ಸ್ವಾಗತಿಸುತ್ತಿದ್ದೇವು. ಆದರೆ, ಈ ಬಾರಿ ಯಾವುದಕ್ಕೂ ಪೊಲೀಸರು ಅವಕಾಶ ನೀಡಲಿಲ್ಲ. ಅಲ್ಲದೆ, ಕಾವೇರಿ ಎಂಪೋರಿಯಂ ಬಳಿ ಎಲ್ಲರೂ ಒಂದೆಡೆ ಸೇರಿ ಜೋರಾಗಿ ಕೂಗುವ ಮೂಲಕ ಸಂಭ್ರಮಿಸುತ್ತಿದ್ದವು. ಆದರೆ, ಎಲ್ಲಿಯೂ ನಿಲ್ಲದೆ ಸರದಿ ಸಾಲಿನಲ್ಲಿ ಕಳುಹಿಸುತ್ತಿದ್ದರಿಂದ ಸಂಭ್ರಮಾಚರಣೆಗೆ ಬ್ರೇಕ್‌ ಹಾಕಿದ್ದಾರೆ ಎಂದು ಕೆಲ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.