ಜನರ ಎಚ್ಚರಿಸಲು “ಮತ್ತೆ ಕಲ್ಯಾಣ’ ಅಭಿಯಾನ
Team Udayavani, Jul 30, 2019, 3:05 AM IST
ಬೆಂಗಳೂರು: ಧರ್ಮ- ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೌಡ್ಯ ಕುರಿತು ಜನರನ್ನು ಎಚ್ಚರಗೊಳಿಸಲು ಸಾಣೇಹಳ್ಳಿಯ ತರಳಬಾಳು ಮಠ ಹಾಗೂ ಸಹಮತ ವೇದಿಕೆ ವತಿಯಿಂದ ಆ.1ರಿಂದ ರಾಜ್ಯಾದ್ಯಂತ “ಮತ್ತೆ ಕಲ್ಯಾಣ’ ಅಭಿಯಾನ ನಡೆಯಲಿದೆ.
ನಯನ ಸಭಾಂಗಣದಲ್ಲಿ ಸೋಮವಾರ ನಡೆದ ಕುರಿತು ಸುದ್ದಿಗೋಷ್ಠಿಯಲ್ಲಿ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿರುವ ಅಜ್ಞಾನ, ಮೂಢನಂಬಿಕೆ, ಲಿಂಗ ತಾರತಮ್ಯ, ಭ್ರಷ್ಟಾಚಾರ, ಶೋಷಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ವಿವಿಧೆಡೆ ಒಂದು ತಿಂಗಳು ಮತ್ತೆ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪ್ರಮುಖವಾಗಿ ಯುವ ಪೀಳಿಗೆಯನ್ನು ಗಮನದಲ್ಲಿರಿಸಿಕೊಂಡು ಅಭಿಯಾನ ಆರಂಭಿಸಿದೆ. ಪ್ರಸ್ತುತ ದಿನಗಳಲ್ಲಿ ರಾಜಕೀಯ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳು ಹದಗೆಟ್ಟಿದ್ದು, ಅವುಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಸ್ವತ್ಛ ಮಾಡುವ ಉದ್ದೇಶವೂ ಇದೆ ಎಂದರು.
ಆ.1ರಂದು ಅಕ್ಕನಾಗಲಾಂಬಿಕೆ ಐಕ್ಯ ಸ್ಥಳವಾದ ತರೀಕೆರೆಯಲ್ಲಿ ಚಿಂತಕ ಗೊ.ರು. ಚನ್ನಬಸಪ್ಪ ಅವರು ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಅಂದು ಸಾಹಿತಿ ಪ್ರೊ. ರಹಮತ್ ತರೀಕೆರೆ ಹಾಗೂ ಶರಣೆ ಗಂಗಾಂಬಿಕಾ ಬಸವರಾಜು ಉಪನ್ಯಾಸ ನೀಡಲಿದ್ದಾರೆ. ಆ.30ರಂದು ಬಸವಕಲ್ಯಾಣದಲ್ಲಿ ಸಮಾರೋಪ ನಡೆಯಲಿದ್ದು, ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಭಾಷಣ ಮಾಡಲಿದ್ದಾರೆ.
ಪ್ರತಿ ದಿನ ಒಂದೊಂದು ಜಿಲ್ಲೆಯಲ್ಲಿ ಆಯಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ಬಸವಾದಿ ಶರಣರ ವಿಷಯಗಳನ್ನು ಚರ್ಚಿಸಲಾಗುತ್ತಿದೆ. ಸಂಜೆ ವಿವಿಧ ಧಾರ್ಮಿಕ ಗುರುಗಳ ಜತೆ ಚರ್ಚೆ, ಸಂವಾದ ನಡೆಸಲಾಗುತ್ತದೆ. ಸಾರ್ವಜನಿಕ ಸಮಾವೇಶ, ವಚನಗೀತೆ, ಉಪನ್ಯಾಸ, ಆಶೀರ್ವಚನ ನಡೆಯಲಿದೆ ಎಂದು ತಿಳಿಸಿದರು. ಈ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿಸಿಂಗ್ ಅವರು “ಮತ್ತೆ ಕಲ್ಯಾಣ’ ವೆಬ್ಸೈಟ್ಗೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ