ಶಾಲೆಗಳಿಗೆ ಮಕ್ಕಳೇ ಬಾರದಿದ್ದರೆ ಸರ್ಕಾರ ಏನು ಮಾಡೀತು?
Team Udayavani, Aug 17, 2018, 11:22 AM IST
ಬೆಂಗಳೂರು: “ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನೇ ಕಳುಹಿಸದಿದ್ದರೆ, ಸರ್ಕಾರವಾದರೂ ಏನು ಮಾಡೀತು? ಮಕ್ಕಳೇ ಬಾರದಿದ್ದಾಗ, ಖಾಲಿ ಶಾಲೆಗಳನ್ನು ಇಟ್ಟುಕೊಂಡು ಏನು ಮಾಡುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನು ಬಳಿಗಾರ್ ಪ್ರಶ್ನಿಸಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಅಮೆರಿಕದ ಕ್ಯಾಲಿಫೋರ್ನಿಯಾದ ನಾರಾಯಣಾನಂದ ಸ್ವಾಮೀಜಿ ರಚಿಸಿದ “ಸಾಧನಾಕೃತಿ’ ಲೋಕಾರ್ಪಣೆ ಮಾಡಿ ಮಾತನಾಡಿ, ಗ್ರಾಮದಿಂದ ರಾಜ್ಯಮಟ್ಟದವರೆಗೂ ಕನ್ನಡವು ಸಮಸ್ಯೆ ಎದುರಿಸುತ್ತಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳೇ ಬರುತ್ತಿಲ್ಲ.
ಹೀಗಿರುವಾಗ ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ನಾನು ಮುಖ್ಯಮಂತ್ರಿ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡುತ್ತಿಲ್ಲ. ಆದರೆ, ಸರ್ಕಾರ ಖಾಲಿ ಶಾಲೆಗಳನ್ನು ಇಟ್ಟುಕೊಂಡು ಏನು ಮಾಡಬೇಕು ಎಂದರು. ಈ ಹಿನ್ನೆಲೆ ಒಂದನೇ ತರಗತಿಯಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಈ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು.
ಈಗ ಮತ್ತೂಮ್ಮೆ ಈ ಸಂಬಂಧ ಮನವಿ ಸಲ್ಲಿಸಲಾಗಿದ್ದು, ಶಾಲೆಗಳ ಗುಣಮಟ್ಟ ಸುಧಾರಣೆಗೂ ಒತ್ತಾಯಿಸಲಾಗಿದೆ. ಇದಕ್ಕೆ ಪೂರಕ ಸ್ಪಂದನೆ ದೊರಕಿದೆ. 40-50 ವರ್ಷಗಳ ಹಿಂದಿನ ಸ್ಥಿತಿಗೂ ಈಗಿನ ಸ್ಥಿತಿಗೂ ಸಾಕಷ್ಟು ವ್ಯತ್ಯಾಸ ಇದೆ. ಇದೆಲ್ಲದರ ಬಗ್ಗೆಯೂ ಯೋಚನೆ ಮಾಡಬೇಕಾಗಿದೆ ಎಂದು ಸೂಚ್ಯವಾಗಿ ಹೇಳಿದರು.
ರಾಜ್ಯಸಭೆ ಸದಸ್ಯ ಎಲ್. ಹನುಮಂತಯ್ಯ, ತುಮಕೂರಿನ ಡಾ.ಹನುಮಂತನಾಥ ಸ್ವಾಮೀಜಿ, ಪರಿಷತ್ತಿನ ಗೌರವಾಧ್ಯಕ್ಷ ವ.ಚ. ಚನ್ನೇಗೌಡ, ಕುವೆಂಪು ಪ್ರಕಾಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ