ಕರ್ನಾಟಕದಲ್ಲಿ ಆತ್ಮಹತ್ಯೆ ಹೆಚ್ಚಲು ಕಾರಣವೇನು?


Team Udayavani, Apr 26, 2018, 6:55 AM IST

180425kpn98.jpg

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ರಾಹುಲ್‌ಗಾಂಧಿ ಆಯ್ಕೆಯಾದ ಬಳಿಕ ಕಾಂಗ್ರೆಸ್‌ನ ಅಧಃಪತನವಾಗುತ್ತಿದೆ ಎಂದು ವ್ಯಂಗ್ಯವಾಡಿರುವ ಕೇಂದ್ರ ಸಚಿವ ಅನಂತಕುಮಾರ್‌, ಗುರುವಾರ ರಾಜ್ಯ ಪ್ರವಾಸ ಕೈಗೊಳ್ಳಲಿರುವ ರಾಹುಲ್‌ ಗಾಂಧಿಯವರಿಗೆ ಸ್ವಾಗತದ ಹಿನ್ನೆಲೆಯಲ್ಲಿ ಐದು ಪ್ರಶ್ನೆಗಳನ್ನು ಕೇಳಿದ್ದು, ಪ್ರವಾಸದ ವೇಳೆ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾಗಿ ರಾಹುಲ್‌ ಗಾಂಧಿ ಆಯ್ಕೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶ, ಮೇಘಾಲಯಗಳಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಕಳೆದುಕೊಂಡಿದೆ. ರಾಹುಲ್‌ಗಾಂಧಿ ಸಾರಥ್ಯ ಎಂದರೆ
ಕಾಂಗ್ರೆಸ್‌ ಪತನ. “ಭಾರತ್‌ ಖೋಜೋ’ (ಭಾರತಶೋಧಿಸಿ ) ಎನ್ನುತ್ತಾ ರಾಹುಲ್‌ಗಾಂಧಿ ರಾಜಕೀಯ ಜೀವನ ಆರಂಭಿಸಿದರು. ಈಗ ರಾಹುಲ್‌ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್‌ ಸೋತಿದೆ. ಆ ಮೂಲಕ “ಭಾರತ್‌ ಖೋಜೋ’ ಅಭಿಯಾನವನ್ನು “ಕಾಂಗ್ರೆಸ್‌ ಖೋಜೋ’ ಆಗಿ ರೂಪಿಸಿದ ಕೀರ್ತಿ ಅವರಿಗೆ ಸಲ್ಲಬೇಕು ಎಂದು ಹೇಳಿದರು.

ಪ್ರಶ್ನೆ 1: ರಾಜ್ಯದಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ 3718 ರೈತರ ಆತ್ಮಹತ್ಯೆ ವರದಿಯಾಗಿದ್ದು, ದೇಶದಲ್ಲೇ ಅತಿ ಹೆಚ್ಚು
ಆತ್ಮಹತ್ಯೆ ಸಂಭವಿಸಿದೆ. ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲಿ ಕೈಗೊಂಡ ಕ್ರಮಗಳಿಂದ ರೈತರ ಆತ್ಮಹತ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಿರುವಾಗ ಕರ್ನಾಟಕದಲ್ಲಿ ಆತ್ಮಹತ್ಯೆ ಹೆಚ್ಚಲು ಕಾರಣವೇನು?

ಪ್ರಶ್ನೆ 2: ಈ ಹಿಂದೆ ಡಾ.ಮನಮೋಹನ್‌ಸಿಂಗ್‌ ಅವರು ಪ್ರಧಾನಿಯಾಗಿದ್ದ 2004-2014ರವರೆಗಿನ ಅವಧಿಯಲ್ಲಿ ಕರ್ನಾಟಕ ಪ್ರಕೃತಿ ವಿಕೋಪ, ಬರಕ್ಕೆ ತುತ್ತಾದಾಗ ನೀಡಿದ ಪರಿಹಾರ 4822 ಕೋಟಿ ರೂ. ಮಾತ್ರ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2014ರಿಂದ 2017ರವರೆಗೆ ಬಿಡುಗಡೆ ಮಾಡಿರುವ ಪರಿಹಾರ 5693.69 ಕೋಟಿ ರೂ. ಕೇಂದ್ರ ಸರ್ಕಾರದ ಅನುದಾನವನ್ನು
ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫ‌ಲವಾಗಿದೆ. ಕೇಂದ್ರದ ಅನುದಾನವನ್ನು ಸಮರ್ಪಕವಾಗಿ
ಬಳಸಿಕೊಳ್ಳದಿರಲು ಕಾರಣವೇನು?

ಪ್ರಶ್ನೆ 3: ಇತ್ತೀಚೆಗೆ ಅತ್ಯಾಚಾರ ಘಟನೆಗಳನ್ನು ಖಂಡಿಸಿ ರಾಹುಲ್‌ಗಾಂಧಿಯವರು ಇಂಡಿಯಾ ಗೇಟ್‌ ಬಳಿ ಮಧ್ಯರಾತ್ರಿ ಮೇಣದಬತ್ತಿಮೆರವಣಿಗೆ ನಡೆಸಿದ್ದರು. ರಾಜ್ಯದಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ 3857 ಲೈಂಗಿಕ ದೌರ್ಜನ್ಯ ಪ್ರಕರಣ, 800ಕ್ಕೂ ಹೆಚ್ಚು ದಲಿತ ಮಹಿಳೆಯರ ಮೇಲೆ ಅತ್ಯಾಚಾರ, 7523 ಮಹಿಳೆಯರ ಹತ್ಯೆ ನಡೆದಿದೆ. ಇದನ್ನು ಖಂಡಿಸಿ ಇಲ್ಲಿಯೂ ಮೇಣದಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸುವಿರಾ?

ಪ್ರಶ್ನೆ 4: ಕೋಮು ಸೌಹಾರ್ದತೆಗಾಗಿ ಇತ್ತೀಚೆಗೆ ಕಾಂಗ್ರೆಸ್‌ ಮುಖಂಡರು ಹೊಟ್ಟೆಭರ್ತಿ “ಚೋಲೆ ಬಟೂರ’ ಆಹಾರ ಸೇವಿಸಿ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಧರಣಿ ನಡೆಸಿದರು. ರಾಜ್ಯದಲ್ಲಿ 2015ನೇ ಸಾಲಿನಲ್ಲಿ 254 ಕೋಮು ಗಲಭೆ ಘಟನೆ ವರದಿಯಾಗಿದೆ. ಹಾಗಾದರೆ, ಪಿಎಫ್ಐ, ಎಸ್‌ ಡಿಪಿಐ ಸಂಘಟನೆಯ 175 ಕಾರ್ಯಕರ್ತರ ವಿರುದಟಛಿದ ಕ್ರಿಮಿನಲ್‌ ಪ್ರಕರಣಗಳನ್ನು ವಾಪಸ್‌ ಪಡೆದಿರುವುದಕ್ಕೆ ಉತ್ತರ ನೀಡಬೇಕು? 

ಪ್ರಶ್ನೆ 5: 10.7 ಕಿ.ಮೀ. ಉದ್ದದ ಆರ್ಟಿರಿಯಲ್‌ ರಸ್ತೆ ಅಭಿವೃದ್ಧಿಗೆ 468 ಕೋಟಿ ರೂ. ವೆಚ್ಚ ನಿಗದಿಪಡಿಸಲಾಗಿದೆ. ಆದರೆ ಇಸ್ರೋ ಮಂಗಳಯಾನ ಯೋಜನೆಗೆ ಮಾಡಿದ ವೆಚ್ಚ  50 ಕೋಟಿ ರೂ. ಅಂದರೆ ಮಂಗಳಯಾನ ಯೋಜನೆ ವೆಚ್ಚಕ್ಕಿಂತ 18 ಕೋಟಿ ರೂ. ಹೆಚ್ಚು ಹಣವನ್ನು 10 ಕಿ.ಮೀ. ಉದ್ದದ ರಸ್ತೆಗೆ ನಿಗದಿಪಡಿಸಿರುವುದನ್ನು ಹೋಲಿಸಿ ರಾಹುಲ್‌ ಗಾಂಧಿ ಏನು ಹೇಳುತ್ತಾರೆ?

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.