![1-assam](https://www.udayavani.com/wp-content/uploads/2024/07/1-assam-415x233.jpg)
ಚುನಾವಣಾ ಅಧಿಸೂಚನೆ ಎಂದರೇನು?
Team Udayavani, Apr 17, 2018, 6:45 AM IST
![Election-Commission,–1781.jpg](https://www.udayavani.com/wp-content/uploads/2018/04/17/Election-Commission,--1781.jpg)
ಬೆಂಗಳೂರು: ನೀತಿ ಸಂಹಿತೆ ಜಾರಿ, ಅಧಿಸೂಚನೆ ಪ್ರಕಟ, ಬಿ. ಫಾರಂ, ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ಸ್ವೀಕಾರ, ತಿರಸ್ಕಾರ ಇವು ಚುನಾವಣೆ ಸಂದರ್ಭದಲ್ಲಿ ಹೆಚ್ಚಾಗಿ ಕೇಳಿ ಬರುವ ಆಡಳಿತಾತ್ಮಕ ಪದಗಳು. ಈ ಮಧ್ಯೆ 2018ರ ಚುನಾವಣೆಗೆ ಏ.17ರಂದು ಅಧಿಸೂಚನೆ ಹೊರಬೀಳಲಿದೆ. ಹೀಗಿರುವಾಗ ಈ ಅಧಿಸೂಚನೆ ಅಂದರೇನು ಅನ್ನುವುದರ ಬಗ್ಗೆ ಮತದಾರರಿಗೆ ಒಂದಿಷ್ಟು ಸಂಕ್ಷಿಪ್ತ ಮಾಹಿತಿ.
ಚುನಾವಣಾ ವೇಳಾ ಪಟ್ಟಿ ಪ್ರಕಟವಾದ ಕೆಲವು ದಿನಗಳ ಬಳಿಕ ಚುನಾವಣಾ ಆಯೋಗ ಗೆಜೆಟ್ ಅಧಿಸೂಚನೆ ಹೊರಡಿಸುತ್ತದೆ. ಈ ಅಧಿಸೂಚನೆ ಹೊರಬೀಳುತ್ತಿದ್ದಂತೆ ಚುನಾವಣಾ ಪ್ರಕ್ರಿಯೆಗೆ ಅನೌಪಚಾರಿಕ ಚಾಲನೆ ಸಿಗುತ್ತದೆ. ಚುನಾವಣಾ ಅಧಿಸೂಚನೆ ಒಂದು ರೀತಿಯಲ್ಲಿ ಮತದಾರರಿಗೆ ಚುನಾವಣಾ ಆಯೋಗದ “ಕರೆಯೋಲೆ’ ಇದ್ದಂತೆ. ಅಧಿಸೂಚನೆ ಹೊರಡಿಸುವ ಮೂಲಕ ಚುನಾವಣಾ ಆಯೋಗ “ಬನ್ನಿ ಶಾಸನಸಭೆಗೆ ನಿಮ್ಮ ಪ್ರತಿನಿಧಿಯನ್ನು’ ಆಯ್ಕೆ ಮಾಡಿ ಎಂದು ಮತದಾರರಿಗೆ ಕರೆ ನೀಡುತ್ತದೆ.
ಅಧಿಸೂಚನೆ ಹೊರಬಿದ್ದ ದಿನದಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಸಲು ಒಂದು ವಾರ ಅವಕಾಶವಿರುತ್ತದೆ. ಅದಾದ ಬಳಿಕ ನಾಮಪತ್ರ ಪರಿಶೀಲನೆಗೆ 2 ದಿನ ಮತ್ತು ನಾಮಪತ್ರ ವಾಪಸ್ ಪಡೆಯಲು ಎರಡು ದಿನ ಕಾಲಾವಕಾಶ ಕೊಡಲಾಗುತ್ತದೆ. ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಮುಗಿದ ದಿನದಿಂದ ಕನಿಷ್ಠ ಎರಡು ವಾರಗಳ ಕಾಲ ಚುನಾವಣಾ ಪ್ರಚಾರಕ್ಕೆ ಅವಕಾಶ ನೀಡಲಾಗುತ್ತದೆ. ಫಲಿತಾಂಶ ಹೊರಬಿದ್ದ ಎರಡು ದಿನಗಳ ಬಳಿಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಆ ಮೂಲಕ ಚುನಾವಣಾ ಅಧಿಸೂಚನೆಗೂ ತೆರೆ ಬೀಳುತ್ತದೆ.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.