ಡಿಕೆಗೆ ಏನಾಗಿದೆ ಕಲ್ಲು ಗುಂಡಿನ ಹಾಗೆ ಇದ್ದಾನೆ: ಸಿದ್ದರಾಮಯ್ಯ ಶಿಫಾರಸು
ಡಿಕೆಗೆ ಪಾಸಿಟಿವ್ ಸರ್ಟಿಫಿಕೇಟ್ ಕೊಡಲು ಬಂದಿದ್ದರು, ಬಿಜೆಪಿಯವರು ಮೂರ್ಖರು
Team Udayavani, Jan 11, 2022, 11:58 AM IST
ಬೆಂಗಳೂರು: ಈ ಡಿಕೆಗೆ ಏನಾಗಿದೆ ? ಕಲ್ಲುಗುಂಡಿನ ಹಾಗೆ ಇದ್ದಾನೆ. ಅವನಿಗೂ ಕೋವಿಡ್ ಪಾಸಿಟಿವ್ ಸರ್ಟಿಫಿಕೇಟ್ ಕೊಡುವುದಕ್ಕೆ ಬಂದಿದ್ದರು` ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೂರನೇ ದಿನದ ಪಾದಯಾತ್ರೆ ಆರಂಭಕ್ಕೂ ಮುನ್ನ ಕನಕಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ವಿರುದ್ಧ ಎಫ್ಐಆರ್ ದಾಖಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿ ನಮ್ಮನ್ನು ಬೆದರಿಸಬಹುದು ಎಂದುಕೊಂಡರೆ ಬಿಜೆಪಿಯವರಷ್ಟು ಮೂರ್ಖರು ಯಾರೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಹತ್ತು ದಿನಗಳ ಕಾಲ ಪಾದಯಾತ್ರೆ ನಡೆಸುತ್ತೇವೆ. ನಿಮ್ಮ ಗೊಡ್ಡು ಬೆದರಿಕೆಗೆಲ್ಲ ಜಗ್ಗುವುದಿಲ್ಲ. ಪಾದಯಾತ್ರೆ ನಿಲ್ಲಿಸುವುದಕ್ಕೆ ಬಿಜೆಪಿಯವರು ಏನೆಲ್ಲ ಸಂಚು ನಡೆಸುತ್ತಿದ್ದಾರೆ. ಆರೋಗ್ಯ ತಪಾಸಣೆ ನೆಪದಲ್ಲಿ ಶಿವಕುಮಾರ್ಗೆ ಪಾಸಿಟಿವ್ ಸರ್ಟಿಫಿಕೇಟ್ ಕೊಡಲು ಬಂದಿದ್ದರು. ಡಿಕೆಗೆ ಏನಾಗಿದೆ ? ಕಲ್ಲುಗುಂಡು ಇದ್ದ ಹಾಗೆ ಇದ್ದಾನೆ. ಎರಡು ದಿನ ನಡೆದರು ಏನೂ ಆಗಿಲ್ಲ, ಅಲ್ವೇನಯ್ಯಾ ? ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಪಾದಯಾತ್ರೆಯಿಂದ ಸೋಂಕು ಹರಡುತ್ತಿಲ್ಲ. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಹೇರುವ ಪರಿಸ್ಥಿತಿ ಬಂದರೆ ಅದಕ್ಕೆ ಬಿಜೆಪಿಯೇ ಕಾರಣ. ಸುಭಾಷ್ ಗುತ್ತೇದಾರ್ ಹಾಗೂ ರೇಣುಕಾಚಾರ್ಯ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ. ತೀರ್ಥಹಳ್ಳಿಯಲ್ಲಿ ಜಾತ್ರೆ ನಡೆಸಿದರೂ ಏಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.
ಮೇಕೆದಾಟು ವಿಚಾರದಲ್ಲಿ ಬಿಜೆಪಿ ಏನನ್ನೂ ಮಾಡಿಲ್ಲ. ನಾವು ಅಧಿಕಾರದಲ್ಲಿದ್ದಾಗ ಕಾನೂನು ತಜ್ಞ ಪಾಲಿ ನಾರಿಮನ್ ಅವರನ್ನು ಸಂಪರ್ಕಿಸಿ ಅವರ ಸಲಹೆ ಮೇರೆಗೆ ಡಿಪಿಆರ್ ಮಾಡಿದ್ದೆವು. ಆದರೆ ಬಿಜೆಪಿಯವರು ತಮಿಳುನಾಡಿನಲ್ಲಿ ಮತ ಹೆಚ್ಚಿಸಿಕೊಳ್ಳುವುದಕ್ಕಾಗಿ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ