ಹೊರೆಯಾಗುವುದೇ ಕೇಬಲ್‌, ಡಿಟಿಎಚ್‌ ಹೊಸ ದರ?


Team Udayavani, Dec 21, 2018, 11:40 AM IST

blore-5.jpg

ಬೆಂಗಳೂರು: ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ಜನವರಿ 1ರಿಂದ ಕೇಬಲ್‌ ಹಾಗೂ ಡಿಟಿಎಚ್‌ಗಳಿಗೆ ಹೊಸದರ ನಿಗದಿಪಡಿಸಿರುವ ಕ್ರಮಕ್ಕೆ ಕೇಬಲ್‌ ಹಾಗೂ ಡಿಟಿಎಚ್‌ ಆಪರೇಟರ್ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಟ್ರಾಯ್‌ ಹೊಸದರ ನಿಗದಿ ನಿರ್ಧಾರವನ್ನು ಹಿಂಪಡೆಯಬೇಕು, ಇಲ್ಲವೇ ಹೊಸದರ ನಿಗದಿ ಕ್ರಮದಿಂದ ಗ್ರಾಹಕರಿಗೆ ಯಾವ ರೀತಿಯ ಅನುಕೂಲ ಆಗಲಿದೆ ಎಂಬುದನ್ನು ಬಹಿರಂಗಗೊ ಳಿಸಬೇಕು. ಈ ಕುರಿತು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಸೂಕ್ತ ಕ್ರಮವಹಿಸಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜ್ಯ ಕೇಬಲ್‌ ಟಿವಿ ಆಪರೇಟರರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ವಿ.ಎಸ್‌ ಫ್ಯಾಟ್ರಿಕ್‌ ರಾಜು ತಿಳಿಸಿದ್ದಾರೆ.

ಟ್ರಾಯ್‌ ನಿಗದಿಪಡಿಸಿರುವ ಹೊಸ ದರದ ಅನ್ವಯ ಹೊಸ ವ್ಯವಸ್ಥೆಯಲ್ಲಿ 100 ಚಾನೆಲ್‌ ಆಯ್ಕೆಗೆ ಅವಕಾಶ ಇರುತ್ತದೆ. ಅದರಲ್ಲಿ ದೂರದರ್ಶನದ 26 ಚಾನೆಲ್‌ಗ‌ಳು ಕಡ್ಡಾಯವಾಗಿರಲಿವೆ. ಜತೆಗೆ, ಶೇ 18ರಷ್ಟು ಜಿಎಸ್‌ಟಿ ತೆರಿಗೆ ಒಳಗೊಂಡು ರೂ. 130 ರೂ ಪಾವತಿಸಬೇಕು. ಹೆಚ್ಚುವರಿಯಾಗಿ 20ರೂ ನೀಡಿದರೆ ಹೆಚ್ಚುವರಿಯಾಗಿ 25 ಚಾನೆಲ್‌ಗ‌ಳನ್ನು ಪ್ರಸಾರ ಸಿಗಲಿದೆ. ಉಳಿದಂತೆ ಯಾವುದೇ ಹೊಸ ಚಾನೆಲ್‌ ನಿಗದಿ ಪಡಿಸಿದರೂ ಟ್ರಾಯ್‌ ದರ ಹೊಸದಾಗಿ ಪಾವತಿಸಬೇಕು.

 ಟ್ರಾಯ್‌ನ ಈ ಕ್ರಮದಿಂದ ಗ್ರಾಹಕರಿಗೆ ಹೆಚ್ಚು ಹೊರೆ ಬೀಳಲಿದೆ. ಉದಾಹರಣೆಗೆ 10 ಚಾನೆಲ್‌ ಗಳನ್ನು ಗ್ರಾಹಕ ಖರೀದಿಸಿದರೆ ರೂ. 19 ರೂಗಳಂತೆ 190 ಹೆಚ್ಚುವರಿ ಹೊರೆ ಬೀಳಲಿದೆ. ಇದರಿಂದ ಈ ಹಿಂದೆ ಆಪರೇಟರ್ಸ್‌ಗಳು ನಗರ ಭಾಗದಲ್ಲಿ 300ರೂಗಳಿಗೆ 400 ಚಾನೆಲ್‌ ನೀಡುತ್ತಿದ್ದರು, ಇದಕ್ಕೆ ಹೋಲಿಸಿಕೊಂಡರೆ ಹೊಸ ದರ ನಿಗದಿ ಗ್ರಾಹಕರಿಗೆ ಸಂಕಷ್ಟ ಎಂಬುದು ಕೇಬಲ್‌ ಆಪರೇಟರ್ಸ್‌ ವಾದವಾಗಿದೆ.
 
ಗ್ರಾಮೀಣ ಭಾಗದ ಗ್ರಾಹಕರಿಗೂ ಇದರಿಂದ ಹೆಚ್ಚಿನ ಸಂಕಷ್ಟ. ಬಹುತೇಕ ಅನಕ್ಷರಸ್ಥರಾಗಿರುವ ಗ್ರಾಹಕರಿಗೆ ಹೊಸ ದರವ್ಯವಸ್ಥೆ, ತಮಗಿಷ್ಟ ಬಂದ ಚಾನೆಲ್‌ ಬೇಕು ಎಂದರೆ ಮುಂಗಡವಾಗಿಯೇ ಹಣ ನೀಡಿ ಖರೀದಿಸಬೇಕು ಎಂಬುದು ಹೇಗೆ ಅರ್ಥವಾಗಲಿದೆ ಎನ್ನುವ ಅಂಶವನ್ನೂ ಮುಂದಿಡುತ್ತಾರೆ. ಟ್ರಾಯ್‌ ದೇಶದ ಕೇಬಲ್‌ ಆಪರೇಟರ್ಸ್‌ ಅಥವಾ ತಜ್ಞರ ಜತೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿಲ್ಲ. ಕಾರ್ಫೋರೇಟ ಸಂಸ್ಥೆಗಳಿಗೆ ಅನುಕೂಲ ಮಾಡಲು ಈ ನಿರ್ಧಾರ ತೆಗೆದುಕೊಂಡಿದೆ. ಇದರ ಪರಿಣಾಮ ರಾಜ್ಯದ 17 ಸಾವಿರ ಕೇಬಲ್‌ ಆಪರೇಟರ್ಸ್‌ ಹಾಗೂ ಅವರ ಜತೆ ಕೆಲಸ ಮಾಡುವ ಹುಡುಗರ ಉದ್ಯೋಗದ ಮೇಲೆ ನೇರ ಪರಿಣಾಮ ಬೀಳಲಿದೆ ಎಂದು ಫ್ಯಾಟ್ರಿಕ್‌ ರಾಜು ಆರೋಪಿಸಿದರು.

ಟ್ರಾಯ್‌ ಏನು ಹೇಳುತ್ತಿದೆ?
ಗ್ರಾಹಕರ ಆಯ್ಕೆಯ ಚಾನೆಲ್‌ಗ‌ಳನ್ನು ಮಾತ್ರವೇ ನೀಡುವ ಉದ್ದೇಶ ಅನಗತ್ಯವಾಗಿ ಚಾನೆಲ್‌ಗ‌ಳು ಹೇರುವ ಪದ್ಧತಿಗೆ
ಕಡಿವಾಣ ಹಾಕುವ ಸಲುವಾಗಿ ಹೊಸ ದರ ನಿಗದಿಪಡಿಸಲಾಗಿದೆ, ಇದರಿಂದ ಗ್ರಾಹಕನ ಆಯ್ಕೆ ಸ್ವಾತಂತ್ರ್ಯಕ್ಕೆ ಹೆಚ್ಚು ಆದ್ಯತೆ ದೊರೆಯಲಿದೆ. ಗ್ರಾಹಕರ ಹಿತಾಸಕ್ತಿಯ ಉದ್ದೇಶವೇ ಇದರ ಮೂಲ ಉದ್ದೇಶವಾಗಿದೆ. ಹೊಸ ದರ ನಿಗದಿ ಕುರಿತ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಟ್ರಾಯ್‌ ಹೇಳುತ್ತಿದೆ.

ಡಿ29ರಿಂದ ಗ್ರಾಹಕರಿಗೆ ಶಾಕ್‌!
ಹೊಸದರ ನಿಗದಿ ಹಿನ್ನೆಲೆಯಲ್ಲಿ ಡಿ29ರಿಂದ ಉಚಿತವಾಗಿ ನೀಡಲಾಗುತ್ತಿರುವ 26 ಚಾನೆಲ್‌ಗ‌ಳನ್ನು ಹೊರತು ಪಡಿಸಿ ಬೇರೆ ಯಾವುದೇ ಚಾನೆಲ್‌ಗ‌ಳು ಬರುವುದಿಲ್ಲ. ಈ ಸಂಬಂಧ ಟ್ರಾಯ್‌, ಗ್ರಾಹಕರ ಆಯ್ಕೆ ಚಾನೆಲ್‌ಗ‌ಳ ದರವನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು. ಗ್ರಾಹಕರು ಡಿ.29ಕ್ಕೂ ಮುನ್ನವೇ ಡಿಜಿಟಲ್‌ ಹಾಗೂ ಕೇಬಲ್‌ ಆಪರೇಟರ್ಸ್‌ಗಳ ಮೊದಲೇ ಹಣ ಪಾವತಿಸಿ ರಿಚಾರ್ಜ್‌ ಮಾಡಿಸಿಕೊಳ್ಳಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.