ಗೂಡು ಸೇರದ ಬಾಲಕಿಗೆ ಬಿಡುಗಡೆ ಎಂದು?


Team Udayavani, Nov 27, 2019, 3:09 AM IST

goodu-serada

ಬೆಂಗಳೂರು: ಬಾಲಕಾರ್ಮಿಕ ಮಾಫಿಯಾದ ಹಿಡಿತದಿಂದ ಪಾರಾಗಿ ಹೆತ್ತವರ ಮಡಿಲು ಸೇರಲು ಆಸೆ ಕಂಗಳಿಂದ ಎದುರು ನೋಡುತ್ತಿರುವ ಮಗಳನ್ನು ಆಲಂಗಿಸಬೇಕು ಎಂದು ತೋಳು ಚಾಚಿರುವ ಪೋಷಕರು. ಕಳೆದ ಎಂಟು ತಿಂಗಳಿನಿಂದ ಹೊರ ರಾಜ್ಯದ ಬಾಲಕಿ, ಆಕೆಯ ಪೋಷಕರು ಅಸಹಾಯಕ ಪರಿಸ್ಥಿತಿ. ಈ ಸ್ಥಿತಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್‌ ಇಲಾಖೆಯ ವಿಳಂಬ ಧೋರಣೆ ಎಂಬ ಆರೋಪ ಕೇಳಿ ಬಂದಿದೆ.

ಏಜೆಂಟರೊಬ್ಬರ ಮೂಲಕ ನಗರಕ್ಕೆ ಬಂದು ಉದ್ಯಮಿಯೊಬ್ಬರ ಮನೆಯಲ್ಲಿ ಬಾಲಕಾರ್ಮಿಕಳಾಗಿ ಜೀತಕ್ಕಿದ್ದ ಅಪ್ರಾಪ್ತ ಬಾಲಕಿಯನ್ನು ಹನ್ನೊಂದು ತಿಂಗಳ ಹಿಂದೆ 1098 ಚೈಲ್ಡ್‌ಲೈನ್‌ ಸದಸ್ಯರು ರಕ್ಷಿಸಿ ಬೆಂಗಳೂರು ನಗರದ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿತ್ತು. ಸಮಿತಿ ಬಾಲಕಿ ಕುಟುಂಬಸ್ಥರ ಮಾಹಿತಿ ಸಂಗ್ರಹಿಸಿ ಅವರಿಗೆ ಮಾಹಿತಿ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಸಮಿತಿ, ಬಾಲಕಿಯನ್ನು ಪೋಷಕರ ವಶಕ್ಕೆ ನೀಡಲು ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕ್ಕೆ ಆದೇಶ ನೀಡಿತ್ತು.

ಮಕ್ಕಳ ನ್ಯಾಯ ಕಾಯ್ದೆ ಪ್ರಕಾರ ಮಕ್ಕಳನ್ನು ಗರಿಷ್ಠ ನಾಲ್ಕು ತಿಂಗಳಲ್ಲಿ ಎಲ್ಲ ತನಿಖೆ ನಂತರ ಅವರ ಹುಟ್ಟು ಸ್ಥಳಗಳಿಗೆ ಕಳುಹಿಸಬೇಕು ಎಂದು ತಿಳಿಸುತ್ತದೆ. ಬಾಲಕಿ ಸಿಕ್ಕು 11 ತಿಂಗಳಾಗಿದೆ. ಸಮಿತಿ ಆದೇಶಿಸಿ 8 ತಿಂಗಳಾಗಿದೆ. ಆದರೆ, ಬಾಲಕಿ ಮಾತ್ರ ಪೋಷಕರ ಮಡಿಲು ಸೇರಿಸಲು ಸಾಧ್ಯವಾಗಿಲ್ಲ.

ಸಮಿತಿ ಆದೇಶದ ಅನ್ವಯ ಮಕ್ಕಳ ರಕ್ಷಣಾ ಘಟಕ ವರದಿ ಪರಿಶೀಲಿಸಿ ಸಂತ್ರಸ್ತ ಬಾಲಕಿಯನ್ನು ಆಕೆ ಹುಟ್ಟೂರಿಗೆ ಬಿಟ್ಟು ಬರಲು ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಶಿಫಾರಸು ಮಾಡಿದೆ. ಆದರೆ, ಅಲ್ಲಿಂದ ಯಾವುದೇ ಪ್ರಕ್ರಿಯೆ ಬಂದಿಲ್ಲ. ಸಿಬ್ಬಂದಿ ಕೊರತೆಯಿಂದ ಸದ್ಯಕ್ಕೆ ಬಾಲಕಿಯನ್ನು ಕರೆದೊಯ್ಯಲು ಆಗುತ್ತಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹೇಳುತ್ತಿದ್ದಾರೆ.

ಮಡಿಲು ಸೇರಲು ತಾಯಿ ಇಲ್ಲ!: ಹೆಣ್ಮು ಮಕ್ಕಳಿಗೆ ತಾಯಿಯ ಮಡಿಲೇ ಶ್ರೇಷ್ಠ. ಆದರೆ, ಈ ಬಾಲಕಿಗೆ ತಾಯಿ ಮಡಿಲು ಸೇರುವ ಭಾಗ್ಯವಿಲ್ಲ. ದುರಂತವೆಂದರೆ ಬೆಂಗಳೂರಿಗೆ ಬರುವ ಮುನ್ನ ತಾಯಿಯನ್ನು ಅಪ್ಪಿಕೊಂಡಿದ್ದ ಬಾಲಕಿ, ಮರಳಿ ತನ್ನ ಗೂಡಿಗೆ ಹೋದರೆ ತಾಯಿಯಿಲ್ಲ. ಹನ್ನೊಂದು ವರ್ಷ ತಾಯಿ ಜತೆ ಇದ್ದ ಮಗು, 2016ರಲ್ಲಿ ಬೆಂಗಳೂರಿಗೆ ಬಂದಿದ್ದು, 2018 ಅಕ್ಟೋಬರ್‌ವರೆಗೆ ಬಾಲಕಾರ್ಮಿಕಳಾಗಿ ಕೆಲಸ ಮಾಡಿದೆ.

ಇದರಿಂದೀಚೆಗೆ ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳ ಅನುಸರಣ ಗೃಹದಲ್ಲಿ ಸುರಕ್ಷಿತವಾಗಿದ್ದು, ಇದೀಗ ಬಾಲಕಿಗೆ 14 ವರ್ಷವಾಗಿದೆ. ಆದರೆ, ಮೂರು ವರ್ಷದ ಹಿಂದೆ ಇದ್ದ ತಾಯಿ ಈಗ ಮೃತರಾಗಿದ್ದಾರೆ. ಈಗಲಾದರೂ ಕುಟುಂಬ ಸದಸ್ಯರೊಡನೆ ಸೇರಲಿ ಎಂದರೆ ಅದೂ ವಿಳಂಬವಾಗುತ್ತಿದೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದರು.

ಮಕ್ಕಳ ನ್ಯಾಯ ಕಾಯ್ದೆ ಪ್ರಕಾರ ಮಕ್ಕಳನ್ನು ಗರಿಷ್ಠ 4 ತಿಂಗಳಲ್ಲಿ ಎಲ್ಲಾ ತನಿಖೆ ನಂತರ ಅವರ ಹುಟ್ಟು ಸ್ಥಳಗಳಿಗೆ ಕಳುಹಿಸಬೇಕಾಗಿರುತ್ತದೆ. ಆದರೆ, ಸರಿಯಾದ ವಿಳಾಸ ಸಿಗದೆ, ಗೃಹ ತನಿಖಾ ವರದಿ ಬರುವಲ್ಲಿ ತಡವಾಗುವುದು ಮತ್ತು ವರ್ಗಾವಣೆ ಮಾಡಲು ಬೇಕಾದ ಸಿಬ್ಬಂದಿ ಕೊರತೆಯಿಂದಾಗಿ ವರ್ಗಾವಣೆ ವಿಳಂಬವಾಗಿದೆ.
-ಅಂಜಲಿ ರಾಮಣ್ಣ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ

ಸಿಬ್ಬಂದಿ ಕೊರತೆ ನೆಪದಲ್ಲಿ ಬಹಳಷ್ಟು ವರ್ಷದಿಂದ ಮಕ್ಕಳು ಬಾಲಮಂದಿರ, ಮಕ್ಕಳ ಅನುಸರಣ ಗೃಹದಲ್ಲಿಯೇ ಇದ್ದಾರೆ. ಮಕ್ಕಳ ಕಲ್ಯಾಣ ಇಲಾಖೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ನ್ಯಾಯ ಕಾಯ್ದೆ ಪ್ರಕಾರ ಮಕ್ಕಳನ್ನು 4 ತಿಂಗಳಲ್ಲಿಯೇ ಕಳುಹಿಸುವ ವ್ಯವಸ್ಥೆ ಮಾಡಬೇಕು.
-ವಾಸುದೇವ ಶರ್ಮಾ, ಚೈಲ್ಡ್‌ ರೈಟ್ಸ್‌ ಟ್ರಸ್ಟ್‌ನ ಕಾರ್ಯಕಾರಿ ನಿರ್ದೇಶಕ

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.