ಯಾವಾಗ ಚುನಾವಣೆ ಬಂದರೂ ನಿಮಗೆ ಬಿ ಫಾರಂ
Team Udayavani, May 25, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು ನೀವೇ ಅಭ್ಯರ್ಥಿಗಳು. ನಾಳೆಯಿಂದಲೇ ಕ್ಷೇತ್ರದಲ್ಲಿ ಕೆಲಸ ಆರಂಭಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋತ ಅಭ್ಯರ್ಥಿಗಳಿಗೆ ಕರೆ ನೀಡಿದ್ದಾರೆ.
ಗುರುವಾರ ಖಾಸಗಿ ಹೋಟೆಲ್ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ 110 ಅಭ್ಯರ್ಥಿಗಳ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. ಇಲ್ಲವೇ ಬಿಜೆಪಿ ಸರ್ಕಾರವೂ ರಚನೆಯಾಗಬಹುದು. ಯಾರೂ ಧೃತಿಗೆಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು.
ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬಂದರೆ ನಿಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಿದೆ. ಮತ್ತೆ ಚುನಾವಣೆ ಎದುರಾದರೆ ನೀವು ಕಣಕ್ಕಿಳಿದು ಗೆಲ್ಲಬೇಕು. ಈಗ ಚುನಾವಣೆ ನಡೆದರೆ ಬಿಜೆಪಿಗೆ 150 ಸ್ಥಾನ ಖಚಿತ ಹೀಗಾಗಿ, ತತಕ್ಷಣದಿಂದ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚಿಸಿದರು ಎನ್ನಲಾಗಿದೆ.
ಚುನಾವಣೆಯಲ್ಲಿ ಹತ್ತರಿಂದ ಹದಿನೈದು ಸ್ಥಾನ ಗಳಿಸಿದ್ದರೆ ನಾವು ಸರ್ಕಾರ ರಚನೆ ಮಾಡಲು ಯಾವುದೇ ಅಡ್ಡಿ ಇರಲಿಲ್ಲ. 104 ಸ್ಥಾನ ಗಳಿಸಿದರೂ ಅಧಿಕಾರ ನಡೆಸಲು ಪ್ರತಿಪಕ್ಷಗಳು ಬಿಟ್ಟಿಲ್ಲ. ಹೀಗಾಗಿ, ನಾವು ಇದನ್ನು ಸವಾಲಾಗಿ ಸ್ವೀಕರಿಸಿ ಮುಂದುವರಿಯಬೇಕು. ಸೋಲಿನ ಕಾರಣಗಳೇನು ಎಂಬುದರ ಆತ್ಮಾವಲೋಕನ ಮಾಡಿಕೊಂಡು ಎಲ್ಲೆಲ್ಲಿ ಸಮಸ್ಯೆಯಾಯಿತು ಎಂಬುದನ್ನು ಪತ್ತೆ ಹಚ್ಚಿ ಸರಿಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು ಎಂದು ಹೇಳಲಾಗಿದೆ. ಸಭೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು