ಹಂಡೀಬಾಗ್ ಕುಟುಂಬ ಕಷ್ಟದಲ್ಲಿದ್ದಾಗ ಕುರುಬ ಸಂಘದವರು ಎಲ್ಲಿಹೋಗಿದ್ದರು
Team Udayavani, Apr 19, 2018, 12:59 PM IST
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಕಲ್ಲಪ್ಪ ಹಂಡೀಬಾಗ್ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೇನೆ ಎಂದು ರಾಜಕೀಯ ಕಾರಣಕ್ಕಾಗಿ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಪ್ರತಿಭಟನೆ ನಡೆಸುತ್ತಿರುವ ಕುರು ಬರ ಸಂಘದ ಕೆಲವು ಮುಖಂಡರು ಹಂಡೀಬಾಗ್ ಕುಟುಂಬ ಸಂಕಷ್ಟದ ಲ್ಲಿರುವಾಗ ಎಲ್ಲಿ ಹೋಗಿದ್ದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ನಾನು ಎಲ್ಲಾ ಸಮುದಾಯದವರನ್ನು ಗೌರವವಾಗಿ ಕಾಣುತ್ತೇನೆ. ಯಾರ ಬಗ್ಗೆಯೂ ಕೇವಲವಾಗಿ ಮಾತನಾಡುವುದಿಲ್ಲ. ಕಲ್ಲಪ್ಪ ಹಂಡೀಬಾಗ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ ಎಂಬುದನ್ನು ತಿಳಿದು ಅವರ ಮನೆಗೆ ಹೋಗಿ ಹಂಡೀಬಾಗ್ ಪತ್ನಿ ಯೊಂದಿಗೆ ಮಾತನಾಡಿದ್ದೆ. ಆ ಸಂದರ್ಭದಲ್ಲಿ ಕುಟುಂಬದ ಸಂಕಷ್ಟದ ಬಗ್ಗೆ ಮಾತನಾಡಿದ್ದೆ. ಇದನ್ನೇ ತಪ್ಪಾಗಿ ಅರ್ಥೈಸಿಕೊಂಡು ನನ್ನ ವಿರುದ್ಧ ಕುರುಬರ ಸಂಘದವರು ಪ್ರತಿಭಟನೆ ಮಾಡುತ್ತಿದ್ದಾರೆ’. “ನನ್ನ ವಿರುದ್ಧ ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿರುವ ಸಮುದಾ ಯದ ಕೆಲವು ಮುಖಂಡರು ಕಲ್ಲಪ್ಪ ಹಂಡೀ ಬಾಗ್ ಆತ್ಮಹತ್ಯೆ ಮಾಡಿ ಕೊಂಡಾಗ ಎಲ್ಲಿ ಹೋಗಿದ್ದರು? ಅವರ ಕುಟುಂಬ ಸಂಕಷ್ಟದಲ್ಲಿದ್ದಾಗ ಏಕೆ ನೆರವಿಗೆ ಬರಲಿಲ್ಲ? ಅವರಿಗೆ ನಿಜ ವಾಗಿಯೂ ಆ ಕುಟುಂಬದ ಬಗ್ಗೆ ಗೌರವ ಇದ್ದರೆ ಕುಟುಂಬಕ್ಕೆ ನೆರವು ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ
ಮಾಡಬೇಕು. ರಾಜಕೀಯ ಕಾರಣಕ್ಕಾಗಿ ನನ್ನ ವಿರುದ್ಧ ಪ್ರತಿಭಟನೆ ಮಾಡುವುದ ರಲ್ಲಿ ಅರ್ಥವಿಲ್ಲ. ಇಂತಹ ಕೆಲವು ಮುಖಂಡರಿಂದ ಸಮುದಾಯಕ್ಕೆ ಅಗೌರವ ಉಂಟಾಗುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.