ವಯಾಡಕ್ಟ್ ಬಿರುಕಿಗೆ ಹೊಣೆ ಯಾರು?


Team Udayavani, Dec 14, 2018, 11:24 AM IST

vayadact.jpg

ಬೆಂಗಳೂರು: ನೂರಾರು ವರ್ಷ ಬಾಳ ಬೇಕಾದ ಕಾಮಗಾರಿ ಅದು. ಆದರೆ, ಕೇವಲ ಹತ್ತು ವರ್ಷ ಗಳಲ್ಲಿ ಅದರಲ್ಲಿ ಕಾಣಿಸಿಕೊಂಡ ಸಮಸ್ಯೆಗೆ ಯಾರು  ಹೊಣೆ? ಕಾಮಗಾರಿ ಮಾಡಿದವರಾ? ಅದನ್ನು ತಪಾಸಣೆ ಮಾಡಿ “ಸೈ’ ಎಂದವರಾ? ಅಥವಾ ಇಡೀ ಮಾರ್ಗಕ್ಕೆ ಹಸಿರು ನಿಶಾನೆ ತೋರಿದವರಾ? “ನಮ್ಮ  ಮೆಟ್ರೋ’ದಲ್ಲಿ ಕಾಣಿಸಿಕೊಂಡ ಒಂದು ಸಣ್ಣ ಬಿರುಕು ಇಂತಹ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

 2007-08ರಲ್ಲೇ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ವೃತ್ತದ  ನಡುವೆ ನಿರ್ಮಿಸ ಲಾದ ಮೆಟ್ರೋ ಮಾರ್ಗದ ಸಿವಿಲ್‌ ಕಾಮ ಗಾರಿಗೆ ನವ  ಯುಗ ಕಂಪನಿಯು ಅತ್ಯಂತ ನುರಿತ ಎಂಜಿ ನಿಯರ್‌ಗಳನ್ನು ನಿಯೋಜಿಸಿತ್ತು  (ಡಿಎಲ್‌ಪಿ ಅವಧಿ ಎರಡು ವರ್ಷ ಇತ್ತು). ಆ ಕಾಮಗಾರಿ ಯನ್ನು ಇಂಚಿಂಚೂ ಪರಿಶೀಲಿಸಿ “ಓಕೆ’ ಎಂದು ಹೇಳಿದ್ದು ರೈಟ್ಸ್‌ ಸಂಸ್ಥೆ.

ತದ ನಂತರ ನಿರ್ವಹಣೆ  ಮಾಡುತ್ತಿರುವುದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ). ಇಡೀ ಯೋಜ ನೆಗೆ ಹಸಿರು ನಿಶಾನೆ ತೋರಿಸಿದ್ದು ರೈಲ್ವೆ ಸುರಕ್ಷತಾಯುಕ್ತರು. ಇಷ್ಟೆಲ್ಲ ಆಗಿಯೂ, ಈ ಬಿರುಕು ಕಾಣಿಸಿ ಕೊಂಡಿದೆ. ಈಗ ಇದನ್ನು ಸರಿಪಡಿಸುವು ದರ ಜತೆಗೆ ಈ ಲೋಪಕ್ಕೆ ಯಾರು ಹೊಣೆ ಎಂಬ  ಪ್ರಶ್ನೆಗೂ ಉತ್ತರ ಬೇಡಿಕೆ. 

ಆಗಬಾರದಿತ್ತು ಆಗಿದೆ; ಎಂಡಿ: “ಇದು ಆಗಬಾರದಾಗಿತ್ತು. ಆದರೆ ಆಗಿಬಿಟ್ಟಿದೆ. ಈಗ ಅದನ್ನು ಸರಿಪಡಿಸುವ ಕೆಲಸವನ್ನು ನಾವು ಮಾಡ ಬೇಕಾಗಿದೆ.  ಹಾಗಂತ ಇದರಿಂದ ಮೆಟ್ರೋ ಸುರಕ್ಷಿತ ಪ್ರಯಾಣಕ್ಕೆ ಯಾವುದೇ ತೊಂದರೆ ಇಲ್ಲ. ದುರಸ್ತಿ ಸಂದರ್ಭದಲ್ಲಿ ಸೇವೆ ಯಲ್ಲಿ ಸ್ವಲ್ಪ ವ್ಯತ್ಯಯ  ಉಂಟಾಗಬಹುದಷ್ಟೇ’ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್ ಸ್ಪಷ್ಟಪಡಿಸುತ್ತಾರೆ. 

ಆದರೆ, 42 ಕಿ.ಮೀ.  ಉದ್ದದ ಮೊದಲ ಹಂತ ದಲ್ಲಿ 1,100ಕ್ಕೂ ಅಧಿಕ ವಯಾಡಕ್ಟ್ಗಳು ಬರುತವೆ. ಹತ್ತು ಸಾವಿರಕ್ಕೂ ಅಧಿಕ ಕಂಬಗಳಿವೆ. ಪ್ರತಿಯೊಂದನ್ನೂ  ಎಂಜಿನಿಯರ್‌ಗಳು ತಮಗೆ ಸೂಚಿಸಿದ ಪದ್ಧತಿಯಲ್ಲೇ ಪರೀಕ್ಷೆ ನಡೆಸಿರು ತ್ತಾರೆ. ಅಷ್ಟಾದರೂ, ಕಣ್ತಪ್ಪಿನಿಂದ ಇಂತಹ ಲೋಪ ಆಗಿರುವ ಸಾಧ್ಯತೆ ಇದೆ.  ಇನ್ನು ಪ್ರತಿ  ಯೊಂದು ಕಂಬ ವನ್ನು ರೈಲ್ವೆ ಸುರಕ್ಷತಾ ಆಯು ಕ್ತರು ಪರಿ ಶೀಲನೆ ಮಾಡಲಾಗದು.

ಒಂದು ಮಾದರಿ ಯನ್ನು ಆ ಅಧಿಕಾರಿಗಳು  ಪರಿಶೀಲಿಸ ಬಹುದು. ಅದೇನೇ ಇರಲಿ, ಘಟನೆಗೆ ಹೊಣೆಗಾರರನ್ನು ಹುಡುಕುವ ಬದಲಿಗೆ ಪರೀಕ್ಷಾ ವಿಧಾನಗಳನ್ನು ಮತ್ತಷ್ಟು  ಸುಧಾರಿಸಿಕೊಳ್ಳುವ ಅವಶ್ಯಕತೆ ಇದೆ. ಅಲ್ಲದೆ, ಪುನರಾವರ್ತನೆ ಆಗದಂತೆ ಉಳಿದೆಡೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೆಸರು  ಹೇಳ ಲಿಚ್ಛಿಸದ ನಿಗಮದ ಅಧಿಕಾರಿಯೊಬ್ಬರು ತಿಳಿಸುತ್ತಾರೆ. 

ಕಾಂಕ್ರೀಟ್‌ ಶಿಥಿಲಗೊಂಡಿರುವ ಸಾಧ್ಯತೆ: ನಿಗಮದ ಮೂಲಗಳ ಪ್ರಕಾರ, ಟ್ರಿನಿಟಿ ನಿಲ್ದಾಣದ ಸಮೀಪದ ವಯಾಡಕ್ಟ್ ಕೆಳಗೆ ಅಳವಡಿಸಲಾಗಿರುವ ನಾಲ್ಕು  ಗರ್ಡರ್‌ಗಳನ್ನು ಜೋಡಿಸಿ ಹಾಕಲಾಗಿ ರುವ 200 ಟನ್‌ ತೂಕದ ಡಯಾಫ್ರೆಮ್‌ (diaphragm)ನಲ್ಲಿ ಕಾಂಕ್ರೀಟ್‌ ಶಿಥಿಲಗೊಂಡಿರುವ ಸಾಧ್ಯತೆ ಇದೆ. 

ಪರಿಣಾಮ ಆ ಕಾಂಕ್ರೀಟ್‌ ಮೇಲಿದ್ದ ಬೇರಿಂಗ್‌ ಸುಮಾರು 15 ಮಿ.ಮೀ.ನಷ್ಟು ಕೆಳಗೆ ಕುಸಿದಿದೆ. ಅದಕ್ಕೆ ಕಬ್ಬಿಣದ ಕಂಬಿಗಳನ್ನು ಆಧಾರವಾಗಿ  ಇಡಲಾಗಿದೆ. ಇನ್ನು ಆ ಮಾರ್ಗದಲ್ಲಿ ರೈಲು ಹಾದುಹೋದಾಗ, ಅದರ ಭಾರ ಕಂಬದ ಮೇಲೆ ಬೀಳುವ ಕಾರಣ, ಉದ್ದೇಶಿತ ಮಾರ್ಗದಲ್ಲಿ ಗಂಟೆಗೆ ಕೇವಲ  20 ಕಿ.ಮೀ. ವೇಗದಲ್ಲಿ ಮೆಟ್ರೋ ಸಂಚರಿಸುತ್ತಿದೆ. 

ಸಾಮಾನ್ಯವಾಗಿ ಮೆಟ್ರೋ ಮಾರ್ಗದಲ್ಲಿ ಪ್ರಿ-ಕಾಸ್ಟ್‌ ಸ್ಪ್ಯಾನ್‌ (ಮೊದಲೇ ನಿರ್ಮಿಸಿದ  ವಯಾಡಕ್ಟ್ಗಳು)ಗಳನ್ನು ಹಾಕಲಾಗುತ್ತದೆ. ಆದರೆ, ಮೊದಲ ಹಂತದ ರೀಚ್‌-1 (ಎಂ.ಜಿ. ರಸ್ತೆ-ಬೈಯಪ್ಪನಹಳ್ಳಿ) ಮತ್ತು 2 (ಕುಷ್ಟರೋಗ ಆಸ್ಪತ್ರೆ-ಮೈಸೂರು  ರಸ್ತೆ)ರಲ್ಲಿ ನಿಲ್ದಾಣಗಳ ಅಂಚಿನಲ್ಲಿ ಸಣ್ಣ ಸ್ಪ್ಯಾನ್‌ಗಳನ್ನು ಅಲ್ಲಿಯೇ “ಮೋಲ್ಡ್‌’ ಮಾಡಿ ನಿರ್ಮಿಸಲಾಗಿದೆ. ಇದು ದೆಹಲಿ ಮೆಟ್ರೋದ ಮಾದರಿ.  ಈಗ ಈ ಪದ್ಧತಿಯನ್ನು ಬದಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.  

ದೆಹಲಿ ಮೆಟ್ರೋ ವಯಾಡಕ್ಟ್‌ನಲ್ಲೂ ಕಾಣಿಸಿತ್ತು ಸಮಸ್ಯೆ: ಈ ಹಿಂದೆ ದೆಹಲಿ ಮೆಟ್ರೋದ ವಯಾಡಕ್ಟ್‌ನಲ್ಲಿ ಕೂಡ ಸಮಸ್ಯೆ ಕಾಣಿಸಿಕೊಂಡಿತ್ತು. ಏರ್‌ಪೋರ್ಟ್‌ ಮಾರ್ಗದ ಮೆಟ್ರೋ ಸೇತುವೆಯ ವಯಾಡಕ್ಟ್ ಮತ್ತು ಕಂಬದ ನಡುವಿನ ಬೇರಿಂಗ್‌ ಕಿತ್ತು ಹೊರ ಬಂದಿತ್ತು. ಇದರಿಂದ ಏರ್‌ಪೋರ್ಟ್‌ ಮಾರ್ಗದ ಮೆಟ್ರೋ ಸೇವೆ ಕೆಲ ದಿನಗಳ ಮಟ್ಟಿದೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ದೆಹಲಿ ಮೆಟ್ರೋದಲ್ಲಿ ಆಗ ಕಾಣಿಸಿಕೊಂಡಿದ್ದ ಸಮಸ್ಯೆಗೆ ಹೋಲಿಸಿದರೆ, “ನಮ್ಮ ಮೆಟ್ರೋ’ದಲ್ಲಿ ಈಗ ಉದ್ಭವಿಸಿರುವ ಸಮಸ್ಯೆಯ ಗಂಭೀರತೆ ತೀವ್ರ ಸ್ವರೂಪದ್ದಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.