ನಿಖರ ಅಂಕಿ-ಅಂಶ ತಿಳಿಸಿದರೆ ಕೋಟಿ ರೂ!
Team Udayavani, May 17, 2019, 7:23 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶಕ್ಕೂ ಮುನ್ನ ಭವಿಷ್ಯ ನುಡಿಯುವ ಜ್ಯೋತಿಷಿಗಳು ವಿವಿಧ ಪಕ್ಷಗಳು ಗೆಲ್ಲುವ ಸ್ಥಾನಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳ ಬಗ್ಗೆ ನಿಖರವಾದ ಅಂಕಿ ಅಂಶ ತಿಳಿಸಿದರೆ ಒಂದು ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಅಖಿಲ ಕರ್ನಾಟಕ ವಿಚಾರವಾದಿ ಸಂಘ ಸವಾಲು ಹಾಕಿದೆ.
ಸಂಘದ ಅಧ್ಯಕ್ಷ ಎ.ಎಸ್.ನಟರಾಜ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ ಮತ್ತು ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ನಿಖರ ಅಂಕಿ ಅಂಶಗಳೊಂದಿಗೆ ಮೇ 20ರೊಳಗೆ ಸಂಘಕ್ಕೆ 10 ಸಾವಿರ ರೂ. ಭದ್ರತಾ ಠೇವಣಿ ಮೂಲಕ ವರದಿ ಸಲ್ಲಿಸಬೇಕು.
ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ಸರಿಯಾದ ವರದಿ ನೀಡಿದವರಿಗೆ ಫಲಿತಾಂಶ ಪ್ರಕಟವಾದ ನಂತರ ಒಂದು ಕೋಟಿ ರೂ. ಬಹುಮಾನ ನೀಡಲಾಗುವುದು. ಒಬ್ಬರಿಗಿಂತ ಹೆಚ್ಚು ಸ್ಪರ್ಧಿಗಳು ಸರಿಯಾದ ಮಾಹಿತಿ ನೀಡಿದರೆ ಬಹುಮಾನದ ಹಣವನ್ನು ಸಮಾನ ಹಂಚಿಕೆ ಮಾಡಲಾಗುವುದು ಎಂದು ದೇಶದ ಯಾವುದೇ ಭಾಗದ ಜ್ಯೋತಿಷಿಗಳು ಇದರಲ್ಲಿ ಭಾಗವಹಿಸಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ