ಕೆರೆ ರಕ್ಷಿಸದ ಪ್ರಾಧಿಕಾರ ಏಕೆ ಬೇಕು?
Team Udayavani, Feb 23, 2019, 6:23 AM IST
ಬೆಂಗಳೂರು: ಕೆರೆ ಸಂರಕ್ಷಣೆ ಸಂಬಂಧ ಸರ್ಕಾರ ಕೆರೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದೆ. ಆದರೂ, ನಗರಗಳಲ್ಲಿರುವ ಕೆರೆಗಳ ಅವಸಾನ ಮಾತ್ರ ನಿಂತಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಯುನೈಟೆಡ್ ಬೆಂಗಳೂರು ಸಂಘಟನೆ ಶುಕ್ರವಾರ ಹಮ್ಮಿಕೊಂಡಿದ್ದ ಕೆರೆಗಳ ವೀಕ್ಷಣೆ ಕಾರ್ಯಕ್ರಮದಲ್ಲಿ ಜಾಲಹಳ್ಳಿ ಸಮೀಪದ ಮಲ್ಲಸಂದ್ರ ಗುಡ್ಡೆ ಕೆರೆ ದುಃಸ್ಥಿತಿ ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ಕೆರೆ ಸಂರಕ್ಷಣೆಗಾಗಿ ಸ್ಥಳೀಯ ಪ್ರಾಧಿಕಾರಗಳ ಜತೆಗೆ ಕೆರೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಆದರೂ ಕೆರೆಗಳ ಅವನತಿ ನಿಂತಿಲ್ಲ.
ಹೀಗಾದರೆ ಕೆರೆ ಅಭಿವೃದ್ಧಿ ಪ್ರಾಧಿಕಾರವಾದರೂ ಏಕೆ ಬೇಕು ಎಂದು ಸರ್ಕಾರವನ್ನು ಪ್ರಶ್ನಿಸಿದರು. ಬೆಂಗಳೂರಿನ ಕೆರೆಗಳನ್ನು ಉಳಿಸುವ ಸಂಬಂಧ ಉಸ್ತುವಾರಿ ಸಚಿವರೂ ಹಾಗೂ ಉಪ ಮುಖ್ಯಮಂತ್ರಿಯೂ ಆಗಿರುವ ಡಾ.ಜಿ.ಪರಮೇಶ್ವರ್ ಹಿರಿಯ ಅಧಿಕಾರಿಗಳ ಸಭೆ ಕರೆದು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಯುನೈಟೆಡ್ ಬೆಂಗಳೂರು ಸಂಚಾಲಕ ಎನ್.ಆರ್.ಸುರೇಶ್ ಮಾತನಾಡಿ, ಎರಡು ವರ್ಷಗಳ ಹಿಂದೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದ ವೇಳೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿತ್ತು. ಇದೀಗ ಮತ್ತೆ ಹೊಸದಾಗಿ ಒತ್ತುವರಿ ಆರಂಭವಾಗಿದೆ.
ಎನ್ಜಿಟಿ ಆದೇಶಗಳು ಕೇವಲ ಪತ್ರದಲ್ಲಿ ಇವೆಯೇ ಹೊರತು ಜಾರಿಯಾಗುತ್ತಿಲ್ಲ ಎಂದು ದೂರಿದರು. ಮಲ್ಲಸಂದ್ರ ಪಾಲಿಕೆ ಸದಸ್ಯ ಲೋಕೇಶ್ ಮಾತನಾಡಿ, ಕೆರೆಗಳ ಸಂರಕ್ಷಣೆ ಸಂಬಂಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು. ಸ್ಥಳೀಯ ಪ್ರಾಧಿಕಾರಿಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ