ಬಿಜೆಪಿ ಕಡೆಗೆ ಗುತ್ತೆದಾರ್ ಒಲವು ?
Team Udayavani, Mar 27, 2018, 6:45 AM IST
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಅಫjಲ್ಪುರ ಶಾಸಕ ಮಾಲಿಕಯ್ಯ ಗುತ್ತೆದಾರ್ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಕಲಬುರಗಿ ಜಿಲ್ಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ತಮ್ಮನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನ ನಡೆಸಿದ್ದಾರೆಂದು ರಾಹುಲ್ ಗಾಂಧಿ ಭೇಟಿಗೆ ಪ್ರಯತ್ನಿಸಿದ್ದರು. ಅನೇಕ ಬಾರಿ ರಾಹುಲ್ ರಾಜ್ಯಕ್ಕೆ ಆಗಮಿಸಿದರೂ, ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಭೇಟಿ ಮಾಡಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಮಾಲಿಕಯ್ಯ ಗುತ್ತೆದಾರ್ ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ರಾಹುಲ್ ಭೇಟಿಗೆ ಅವಕಾಶ ದೊರೆಯದಿದ್ದರೆ ಅಧಿಕೃತವಾಗಿ ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಗುತ್ತೆದಾರ್ ಆಪ್ತ ಮೂಲಗಳು ತಿಳಿಸಿವೆ. ಈ ಮಧ್ಯೆ ಮಾಲಿಕಯ್ಯ ಗುತ್ತೆದಾರ್ ಅವರನ್ನು ಜೆಡಿಎಸ್ಗೆ ಬರುವಂತೆ ದೇವೇಗೌಡರು ಆಹ್ವಾನಿಸಿದ್ದರು. ಆದರೆ, ರಾಷ್ಟ್ರೀಯ; ಪಕ್ಷವೊಂದರಲ್ಲಿ ಇದ್ದರೆ ಸೂಕ್ತ ಎಂದು ಬಿಜೆಪಿ ಪರ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಆರು ಬಾರಿ ಗೆಲುವು ಸಾಧಿಸಿದ್ದರೂ ಸಚಿವ ಸ್ಥಾನ ನೀಡದೆ ಮೊದಲ ಬಾರಿ ಶಾಸಕರಾಗಿರುವ ಪ್ರಿಯಾಂಕ್ ಖರ್ಗೆಗೆ ಸಚಿವ ಸ್ಥಾನ ನೀಡಿದ್ದರಿಂದ ಆರು ತಿಂಗಳ ಹಿಂದೆಯೇ ಗುತ್ತೇದಾರ್ ಮುನಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು