ಬೀದಿ ನಾಯಿ ದಾಳಿಗೆ ಕೊನೆ ಎಂದು?


Team Udayavani, Jun 27, 2019, 3:10 AM IST

bdi-nayi

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಬಿಎಂಪಿ ಬೀದಿ ನಾಯಿಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ (ಎಬಿಸಿ) ನಡೆಸುತ್ತಿದೆ. ಆದರೆ, ಬೀದಿ ನಾಯಿಗಳ ಸಂತತಿ ಕ್ಷೀಣಿಸುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

ಇತ್ತೀಚಿನ ದಿನಗಳಲ್ಲಿ ಮತ್ತೇ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವುದು ಎಬಿಸಿ ಶಸ್ತ್ರಚಿಕಿತ್ಸೆಯಲ್ಲಿ ಲೋಪಗಳಾಗುತ್ತಿರುವ ಬಗ್ಗೆ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 2018ರಲ್ಲಿ 45 ಸಾವಿರ ನಾಯಿಗಳಿಗೆ ಎಬಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದಕ್ಕೆ ಬಿಬಿಎಂಪಿ ಅಂದಾಜು 4.5ಕೋಟಿಯನ್ನು ವ್ಯಯಿಸಿದೆ.

ಆದರೆ, ಇದರ ಫ‌ಲಿತಾಂಶ ಮಾತ್ರ ಅಷ್ಟಕಷ್ಟೇ ಎನ್ನುವಂತಿದೆ. ಈ ವರ್ಷ (ಏಪ್ರಿಲ್‌ನಿಂದ) ಇಲ್ಲಿಯವರೆಗೆ 7ಸಾವಿರ ನಾಯಿಗಳಿಗೆ ಎಬಿಸಿ ನಡೆಸಲಾಗಿದೆ. ಇದಕ್ಕೆ 76ಲಕ್ಷರೂ.ಗಳನ್ನು ಖರ್ಚು ಮಾಡಲಾಗಿದೆ. ಪ್ರತಿ ವರ್ಷ ಸಾರ್ವಜನಿಕರ ಹಣ ನೀರಿನಲ್ಲಿ ಹೋಮದಂತಾಗಿದೆ.

ಬೀದಿನಾಯಿಗಳು ಮಕ್ಕಳನ್ನು ಕಚ್ಚುತ್ತಿರುವುದನ್ನು ತಪ್ಪಿಸಲು ಹಲವು ಕ್ರಮಗಳನ್ನು ಬಿಬಿಎಂಪಿ ತೆಗೆದುಕೊಳ್ಳಲಾಗುತ್ತಿದೆಯಾದರೂ, ಇದರ ಫ‌ಲಿತಾಂಶವೇನು ಎನ್ನುವುದು ಮಾತ್ರ ಪ್ರಶ್ನೆಯಾಗಿಯೇ ಉಳಿದಿದೆ. ನಾಯಿಗಳು ಕಚ್ಚಲು ಬರುವಾಗ ಪ್ರತಿರೋಧಿಸುವ ಮತ್ತು ತಪ್ಪಿಸಿಕೊಳ್ಳುವಷ್ಟು ತಿಳವಳಿಕೆ ಮಕ್ಕಳಲ್ಲಿ ಇಲ್ಲದೆ ಇರುವುದರಿಂದ ಮಕ್ಕಳ ಮೇಲೆ ನಾಯಿಗಳು ಗಂಭೀರವಾದ ದಾಳಿ ಮಾಡುತ್ತಿವೆ.

ಫ‌ಲಿಸದ ಎಬಿಸಿ ಚಿಕಿತ್ಸೆ: ಬಿಬಿಎಂಪಿ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗಾಗಿ ಪ್ರತಿ ವರ್ಷ ಕೋಟ್ಯಾಂತರ ರೂ. ಹಣ ವ್ಯಯ ಮಾಡುತ್ತಿದೆ. ಆದರೂ, ನಾಯಿಗಳ ಸಂಖ್ಯೆ ಏರಿಕೆಯಾಗುತ್ತಿದೆಯೇ ಒರತು ಇಳಿಕೆಯಾಗುತ್ತಿಲ್ಲ. ಒಮ್ಮೆ ನಾಯಿ ಶಸ್ತ್ರಚಿಕಿತ್ಸೆಗೆ ಒಳಪಟ್ಟರೆ ಸಂತಾನ ಶಕ್ತಿ ಕಳೆದುಕೊಳ್ಳುತ್ತವೆ. ಆದರೆ, ನಗರದಲ್ಲಿ ನಾಯಿಗಳ ಸಂಖ್ಯೆ ಮಾತ್ರ ಕ್ಷೀಣಿಸುತ್ತಿಲ್ಲ. ಇದಕ್ಕೆ ಪಾಲಿಕೆಯಲ್ಲಿ ಕೆಲವು ಕಡೆ ಎಬಿಸಿ ಕೇಂದ್ರಗಳು ಇಲ್ಲದಿರುವುದು ಮತ್ತು ಪಶುವೈದ್ಯರ ಕೊರತೆಯೂ ಎನ್ನುವ ಆರೋಪವೂ ಇದೆ.

ಪರಿಣಾಮಕಾರಿ ಎಬಿಸಿ ಪರಿಹಾರ: ನಗರದಲ್ಲಿ ಬೀದಿನಾಯಿಗಳ ಹಾವಳಿ ತಪ್ಪಿಸಬೇಕಾದರೆ, ಗುತ್ತಿಗೆ ನೀಡುವ ಸಮಯದಲ್ಲೇ ಹಲವು ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಬೇಕು. ಎಬಿಸಿ ಚಿಕಿತ್ಸೆ ಸರಿಯಾಗಿ ನೀಡದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು, ಒಂದು ವರ್ಷದಲ್ಲಿ ಎಲ್ಲ ನಾಯಿಗಳಿಗೆ ಎಬಿಸಿ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದಾಗ ಸರಿಯಾಗಿ ಕೆಲಸ ಮಾಡುತ್ತಾರೆ. ಇಲ್ಲದಿದ್ದಲ್ಲಿ ನಗರದಲ್ಲಿ ಯಾವುದೇ ಕಾರಣಕ್ಕೂ ಬೀದಿನಾಯಿಗಳು ಕಡಿಮೆಯಾಗುವುದಿಲ್ಲ ಎನ್ನುತ್ತಾರೆ ತಜ್ಞರು.

ಶ್ವಾನವನ್ನು ಪ್ರಚೋದಿಸುವುದು, ಅವುಗಳು ಊಟ ಮಾಡುವಾಗ, ಗರ್ಭಧರಿಸುವ ಸಮಯದಲ್ಲಿ ಅವುಗಳನ್ನು ಕೆಣಕಿದರೆ ಕಚ್ಚುವ ಅಪಾಯ ಹೆಚ್ಚು. ಈ ಬಗ್ಗೆ ಶಾಲೆಗಳಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಿ, ಶ್ವಾನಗಳಿಗೆ ಎಬಿಸಿ ಮುಂದುವರಿಸಲಾಗುವುದು.
-ಡಾ. ಶಶಿಕುಮಾರ್‌, ಉಪನಿರ್ದೇಶಕ (ಪಶುಪಾಲನೆ)

ನಾಯಿ ಕಚ್ಚಿದ ಜಾಗವನ್ನು ಸ್ವಚ್ಛವಾಗಿ ಸಾಬೂನಿನಿಂದ ತೊಳೆದುಕೊಳ್ಳಬೇಕು. ನಾಯಿ ಕಚ್ಚಿದಾಗ ರೇಬಿಸ್‌ ಚುಚ್ಚುಮದ್ದು ತೆಗೆದುಕೊಳ್ಳುವುದರಿಂದ ಭವಿಷ್ಯದಲ್ಲಿ ಆರೋಗ್ಯದ ಮೇಲಾಗುವ ಅಪಾಯ ತಪ್ಪಿಸಬಹುದು.
-ಭಾನು ಮೂರ್ತಿ, ಕೆ.ಸಿ.ಜನರಲ್‌ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ

ಎಬಿಸಿಗೆ ಒಳಪಟ್ಟ ಶ್ವಾನಗಳ ವಿವರ
ವರ್ಷ ಶ್ವಾನಗಳ ಸಂಖ್ಯೆ
2014-15 29,841
2015-16 35,185
2016-17 8,662
2017-18 34,144
2018-19 45,000
2019-20 7,000 (ಏಪ್ರಿಲ್‌ನಿಂದ ಮೇ)

* ಹಿತೇಶ್‌ ವೈ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.