ನಗರ ಜತೆ ಗ್ರಾಮಾಭಿವೃದ್ಧಿಯೂ ಮುಖ್ಯ: ಎಚ್ಕೆ


Team Udayavani, Apr 4, 2017, 11:31 AM IST

hk-patiola.jpg

ಬೆಂಗಳೂರು:  “ನಗರ -ಪಟ್ಟಣಗಳಿಂದ ಹಳ್ಳಿಗಳ ಕಡೆಗೆ ಮರುವಲಸೆ ನಡೆಯದಿದ್ದರೆ ಕರ್ನಾಟಕ ಉಳಿಯುವುದಿಲ್ಲ,” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ.ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರ ಆಯೋಜಿಸಿದ್ದ ಎರಡು ದಿನಗಳ ಕರ್ನಾಟಕ ಏಕೀಕರಣ ವಜ್ರಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಅಭಿವೃದ್ಧಿ ವಿಚಾರದಲ್ಲಿ ಬೆಂಗಳೂರಿನ ಆಚೆಗೂ ನಾವು ಗಮನ ಹರಿಸದೇ ಹೋದರೆ ದೊಡ್ಡಮಟ್ಟದ ಅಪಾಯ ಕಾದಿದೆ.   ಮಹಾನಗರಗಳಲ್ಲಿ ಮಾತ್ರ ಕೈಗಾರಿಕೆಗಳು, ಮೆಲ್ಸೇತುಗಳು ಬಂದರೆ ಚೆಲುವ ಕನ್ನಡ ನಾಡು ಸಾಧ್ಯವಿಲ್ಲ. ಗ್ರಾಮೀಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಸಣ್ಣ ನಗರಗಳಲ್ಲೂ ಕೈಗಾರಿಕೆಗಳು ಆರಂಭಗೊಂಡು ಉದ್ಯೋಗ ಸಿಗುವಂತಾಗಬೇಕು. ಉದ್ಯೋಗ ಆರಿಸಿಕೊಂಡು ನಗರಗಳಿಗೆ ಬಂದ ಗ್ರಾಮೀಣ ಪ್ರದೇಶದ ಜನರು ಸ್ವಂತ ನೆಲದಲ್ಲಿ ಬದುಕುವಂತಾದಾಗ ಮಾತ್ರ ಕರುನಾಡಿನ ಉಳಿವು ಸಾಧ್ಯ,” ಎಂದು ಪ್ರತಿಪಾದಿಸಿದರು. 

“ಗ್ರಾಮೀಣ ಕರ್ನಾಟಕವು ನಗರಗಳಿಗೆ ಹೋಲಿಸಿದರೆ ತುಂಬಾ ಹಿಂದುಳಿದಿದೆ. ಈ ತಾರತಮ್ಯವನ್ನು ಹೋಗಲಾಡಿಸಿ, ಅಭಿವೃದ್ಧಿಯಲ್ಲಿ ಸಮಾನತೆಯನ್ನು ತಂದರೆ ಮಾತ್ರ ರಾಜ್ಯ ಸದೃಢವಾಗುತ್ತದೆ. ಇದು ಹೈದರಾಬಾದ್‌-ಕರ್ನಾಟಕ ಮತ್ತು ಮುಂಬೈ-ಕರ್ನಾಟಕ ಪ್ರಾಂತ್ಯಗಳಿಗೆ ಹೆಚ್ಚು ಅನ್ವಯವಾಗುತ್ತದೆ. ಈ ವಾಸ್ತವವನ್ನು ನಾವು ಒಪ್ಪಿಕೊಂಡು, ಮುನ್ನಡೆಯಬೇಕು” ಎಂದರು.

“ಕಳಸಾ ಬಂಡೂರಿ, ಮಹಾದಾಯಿ ಜಲವಿವಾದದಂಥ ವಿಚಾರದಲ್ಲಿ ಸರ್ಕಾರಕ್ಕೆ  ಸಾಹಿತಿಗಳ ಬಳಗದಿಂದ ಹೆಚ್ಚಿನ ಬೆಂಬಲ ಸಿಗಲಿಲ್ಲ. ರಾಜ್ಯಕ್ಕೆ ಸಮಸ್ಯೆ ಎದುರಾದಾಗ ಸೂಕ್ಷ್ಮಜ್ಞರು ಮೂಕಪ್ರೇಕ್ಷಕರಾಗಿ ಉಳಿದಿರುವುದು ಸರಿಯಲ್ಲ. ಹೀಗಾಗಿ, ಅಖೀಲ ಭಾರತದ ಮಟ್ಟದಲ್ಲಿ ಕರ್ನಾಟಕದ ದನಿ ಅಷ್ಟಾಗಿ ಕೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌ ಜಿ ಸಿದ್ದರಾಮಯ್ಯ, “ರಾಷ್ಟ್ರೀಯತೆ ಎನ್ನುವುದು ಕಲ್ಪನೆಯ ಸಂಗತಿಯಾಗಿದೆ. ಆದರೆ ನಮ್ಮ ಅಸ್ಮಿತೆಗೆ ಕಾರಣವಾಗಿರುವ ಉಪರಾಷ್ಟ್ರೀಯತೆಯು ವಾಸ್ತವ ವಾಗಿದೆ. ವಿಚಿತ್ರವೆಂದರೆ, ರಾಷ್ಟ್ರೀಯತೆಯ ಅಬ್ಬರ ದಲ್ಲಿ ಸ್ಥಳೀಯ ಸಂಸ್ಕೃತಿಯ ಹೆಗ್ಗುರುತುಗಳನ್ನು ನಾಶ ಮಾಡಲಾಗುತ್ತಿದೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರ್‌(ಎಸ್‌ಬಿಎಂ)ನ ವಿಲೀನವೇ ಇದಕ್ಕೊಂದು ಸಾಕ್ಷಿಯಾಗಿದೆ.

ಆದರೆ, ಇದರ ವಿರುದ್ಧ ನಮಗ್ಯಾರಿಗೂ ದನಿ ಎತ್ತಲು ಸಾಧ್ಯವಾಗಲೇ ಇಲ್ಲ,” ಎಂದು ಆತಂಕ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮನು ಬಳಿಗಾರ್‌, ಕಸಾಪ ಪದಾಧಿಕಾರಿಗಳಾದ ಪಿ ಮಲ್ಲಿಕಾರ್ಜುನಪ್ಪ, ವ ಚ ಚನ್ನೇಗೌಡ, ರಾಜಶೇಖರ ಹತಗುಂದಿ ಉಪಸ್ಥಿತರಿದ್ದರು. 

ಸಭೆಯಲ್ಲೇ ಪ್ರತಿಭಟನೆ ಬಿಸಿ 
ಸಚಿವ ಎಚ್‌.ಕೆ. ಪಾಟೀಲ್‌ ತಮ್ಮ ಭಾಷಣದಲ್ಲಿ “ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬೆಂಬಲವೇ ವ್ಯಕ್ತವಾಗುವುದಿಲ್ಲ,” ಎಂದು ಹೇಳಿದ್ದು, ಸಭೆಯಲ್ಲಿ ಪ್ರತಿಭಟನೆಗೆ ಕಾರಣವಾಯಿತು. ಸಚಿವರ ಮಾತಿಗೆ ಸಭೆಯಲ್ಲಿದ್ದ ಕನ್ನಡ ಕಾರ್ಯಕರ್ತರಾದ ರಾ.ನಂ ಚಂದ್ರಶೇಖರ, ಸಿ.ಕೆ. ರಾಮೇಗೌಡ,  ಮಧು ಬಿಲ್ಲಿನಕೋಟೆ, ಕೋ.ವೆಂ ರಾಮಕೃಷ್ಣೇಗೌಡ ಕೂಡಲೇ ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದರು.

“ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲೇ ಮೊದಲು ಸಭೆಗಳು ನಡೆದಿದ್ದು. ನೀವು ಮಂತ್ರಿಗಳಾಗಿ ಹೀಗೆ ತಪ್ಪಾಗಿ ಮಾತನಾಡಬಾರದು,” ಎಂದು ಒಕ್ಕೊರಲಿನಿಂದ ಪ್ರತಿಭಟಿಸಿದರು. ಕೂಡಲೇ ಪಾಟೀಲರು “ಬೆಳಗಾವಿಯ ಪರ ನಿಮ್ಮ ಈ ದನಿ ಕೇಳಿ ನನಗೆ ಸಂತೋಷವಾಯಿತು” ಎಂದು ವಿವಾದಕ್ಕೆ ತೆರೆ ಎಳೆದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.