ಸೂಕ್ತ ನಿರ್ವಹಣೆಯಿಲ್ಲದೆ ರುದ್ರಭೂಮಿ ದುಸ್ಥಿತಿ


Team Udayavani, May 8, 2019, 3:09 AM IST

sookta

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ ಬರುವ ನಗರದ ಹಲವು ರುದ್ರಭೂಮಿಗಳು ಸೂಕ್ತ ನಿರ್ವಹಣೆಯಿಲ್ಲದೆ ಸೊರಗಿ ಹೋಗಿವೆ. ಅದರಲ್ಲಿ ದೀಪಾಂಜಲಿ ನಗರ ವಾರ್ಡ್‌ನ ಆವಲಹಳ್ಳಿಯ ವಿನೋಭಾ ಕಾಲೋನಿಯಲ್ಲಿರುವ ಹರಿಜನ ರುದ್ರಭೂಮಿ ಸ್ಥಿತಿ ಕೂಡ ಇದಕ್ಕೆ ಹೊರತಲ್ಲ.

ರುದ್ರಭೂಮಿಯೊಳಗೆ ಗಿಡಗಂಟೆಗಳು ಬೆಳೆದು ನಿಂತಿದೆ. ಶವ ಸಂಸ್ಕಾರಕ್ಕೆ ಜನರು ಸ್ಮಶಾನದ ಒಳಗೆ ಹೆಜ್ಜೆಯಿರಿಸಲಾಗದ ದುಸ್ಥಿತಿ ನಿರ್ಮಾಣವಾಗಿದೆ. ರಾಜಕಾಲುವೆ ಹಾದು ಹೋಗುವ ಬದಿಯಲ್ಲೇ ರುದ್ರಭೂಮಿ ತಲೆ ಎತ್ತಿದಿದ್ದು, ಕೊಳಚೆ ನೀರು ಮಳೆ ಬಂದಾಗ ಸ್ಮಶಾನದೊಳಗೆ ಪ್ರವೇಶ ಮಾಡುವುದರಿಂದ ರುದ್ರಭೂಮಿಯಲ್ಲಿ ಮಲಿನತೆ ತಾಂಡವಾಡುತ್ತಿದೆ.

ನಿರ್ವಹಣೆಗೆ ಸಿಬ್ಬಂದಿ ಕೊರತೆ: ರುದ್ರಭೂಮಿ ನಿರ್ವಹಣೆಗಾಗಿ ಪಾಲಿಕೆ ವತಿಯಿಂದ ಕಟ್ಟಡ ಕಟ್ಟಲಾಗಿದೆ. ಆದರೆ, ಆ ಕಟ್ಟಡದೊಳಗೆ ಕಾರ್ಯ ನಿರ್ವಹಿಸಲು ಭದ್ರತಾ ಸಿಬ್ಬಂದಿಗಳೇ ಇಲ್ಲದಿರುವುದರಿಂದ ಬಾಗಿಲು, ಕಿಟಕಿಗಳು ಇಲ್ಲದೆ ಪಾಳು ಬಿದ್ದಿದೆ. ಕಟ್ಟಡ ಕೂಡ ದುರಸ್ಥಿಗೊಂಡಿದ್ದು ಹೀಗಾಗಿ, ಬೀದಿ ನಾಯಿಗಳ ದರ್ಬಾರು ಅಲ್ಲಿ ಶುರುವಾಗಿದೆ.

ಕೆಲವು ಸ್ಥಳೀಯರು ರಾತ್ರಿ ವೇಳೆ ಘನ ತಾಜ್ಯಗಳನ್ನು ಕಟ್ಟಡ ಸಮೀಪ ಹಾಕುತ್ತಿದ್ದು, ಇಡೀ ಕಟ್ಟಡ ದುರ್ನಾತದಿಂದ ಮುಳುಗಿ ಹೋಗಿದೆ. ಮಹಾಲಯ ಅಮವಾಸ್ಯೆಯ ದಿನದಂದು ಹಿರಿಯರ ಸಮಾಧಿಗಳಿಗೆ ಪೂಜೆ ಸಲ್ಲಿಸಲು ಆ ಕಟ್ಟಡದೊಳಗೆ ಕಾಲಿಟ್ಟು ಹೋಗಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಷ ಜಂತುಗಳ ಭಯ: ರುದ್ರಭೂಮಿಯೊಳಗೆ ಪ್ರವೇಶ ಮಾಡಿದರೆ ಯಾವುದೇ ಒಂದು ಕಾಡಿನೊಳಗೆ ತೆರಳಿದಂತೆ ಭಾಸವಾಗುತ್ತಿದೆ. ಸೂಕ್ತವಾದ ನಿರ್ವಹಣೆಯಿಲ್ಲದೆ ಹಿನ್ನೆಲೆಯಲ್ಲಿ ಗಿಡಗಂಟೆಗಳು, ಸ್ಮಶಾನದ ಕಾಂಪೌಂಡ್‌ಗಳಿಗಿಂತಲೂ ಆಳೆತ್ತರ ಬೆಳೆದು ನಿಂತಿದ್ದು, ಹಾವು, ಚೇಳು ಸೇರಿದಂತೆ ಕೆಲವು ವಿಷ ಜಂತುಗಳು ಅದರೊಳಗೆ ಸೇರಿ ಕೊಂಡಿವೆ.

ಇತ್ತೀಚಿನ ದಿನಗಳಲ್ಲಿ ಬಿಸಿಲು ಅಧಿಕವಾಗಿರುವ ಹಿನ್ನೆಲೆಯಲ್ಲಿ ರುದ್ರಭೂಮಿಯ ಒಳಗಿರುವ ಹಾಳು, ಚೇಳುಗಳು ಆಗಾಗ್ಗೆ ಕಾಣಿಸಿಕೊಳ್ಳುತ್ತಿದೆ. ಆ ಹಿನ್ನೆಲೆಯಲ್ಲಿ ನೆರೆ ಹೊರೆಯವರು ಅವುಗಳು ಎಲ್ಲಿ ನಮ್ಮ ಮನೆ ಸೇರುತ್ತವೆಯೋ ಎಂಬ ಭಯದಲ್ಲಿ ಬದುಕು ಕಳೆಯುತ್ತಿದ್ದಾರೆ ಎಂದು ವಿನೋಭಾ ಕಾಲೋನಿಯ ನಿವಾಸಿ ಲಕ್ಷ್ಮಮ್ಮ ದೂರಿದರು.

ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ಆವಲಹಳ್ಳಿಯ ವಿನೋಭಾ ಕಾಲೋನಿ ಕೆಲ ನಿವಾಸಿಗಳು, ಎಲ್ಲಾ ಋತುಗಳಲ್ಲೂ ಹಾವು, ಚೇಳುಗಳು ಸೇರಿದಂತೆ ವಿಷ ಜಂತುಗಳು ಕಾಣಿಸಿಕೊಳ್ಳುತ್ತಿದ್ದು, ಭಯ ಕಾಡುತ್ತಿದೆ ಎಂದು ದೂರಿದರು. ಸೊಳ್ಳೆಗಳ ಕಾಟ ಕೂಡ ಹೆಚ್ಚಾಗಿದ್ದು, ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಒತ್ತುವರಿ ಆರೋಪ: ರುದ್ರಭೂಮಿಯ ಎರಡು ಕಡೆಗಳಲ್ಲಿ ಪ್ರವೇಶ ದ್ವಾರಗಳಿವೆ. ಭದ್ರತಾ ಸಿಬ್ಬಂದಿಗಾಗಿ ನಿರ್ಮಿಸಲಾಗಿರುವ ಪ್ರವೇಶ ದ್ವಾರದ ಕಾಂಪೌಂಡ್‌ ನಿರ್ವಹಣೆ ಇಲ್ಲದೆ ಉರುಳಿ ಬಿದ್ದಿದೆ. ಮತ್ತೂಂದು ಕಡೆಯಿರುವ ಪ್ರವೇಶ ದ್ವಾರದ ಗೇಟ್‌ಗೆ ಬೀಗ ಜಡಿಯಲಾಗಿದೆ.

ಜತೆಗೆ ಸ್ಥಳೀಯ ನಿವಾಸಿಗರು ಕೂಡ ರುದ್ರಭೂಮಿಯೊಳಗೆ ರಾತ್ರಿ ವೇಳೆ ಘನ ತಾಜ್ಯವನ್ನು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಡೀ ಸ್ಮಶಾನ ತಾಜ್ಯ ವಸ್ತುಗಳಿಂದಲೇ ತುಂಬಿ ಹೋಗಿದ್ದು, ದುರ್ವಾಸನೆ ಮೂಗಿಗೆ ನಾರುತ್ತಿದೆ. ಈ ಹಿಂದೆ ಸ್ಥಳೀಯರೆ ಸುಮಾರು 5 ಎಕರೆ ಭೂಮಿಯನ್ನು ರುದ್ರಭೂಮಿಗಾಗಿ ನೀಡಿದ್ದರು. ಆದರೆ, ಈಗಾಗಲೇ ಸ್ಮಶಾನದ ಜಾಗ 2 ಎಕರೆಗೆ ಸೀಮಿತವಾಗಿದ್ದು ಜಾಗ ಒತ್ತುವರಿಯಾಗಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ.

ಬೇರೆ ಪ್ರದೇಶದವರು ಈ ರುದ್ರಭೂಮಿಯಲ್ಲಿ ಶವ ಸಂಸ್ಕಾರ ಮಾಡುತ್ತಾರೆ ಎಂದು ರುದ್ರಭೂಮಿ ಗೇಟ್‌ಗೆ ಸ್ಥಳಿಯರೇ ಬೀಗ ಹಾಕಿದ್ದಾರೆ. ರುದ್ರಭೂಮಿ ನಿರ್ವಹಣೆ ಸಂಬಂಧ ಹಲವು ಬಾರಿ ಪ್ರಯತ್ನ ನಡೆಸಿದರೂ ಸ್ಥಳೀಯರು ಸಹಕರಿಸುತ್ತಿಲ್ಲ.
-ಅನುಪಮಾ ಧರ್ಮಪಾಲ್‌, ದೀಪಾಂಜಲಿ ನಗರ ಪಾಲಿಕೆ ಸದಸ್ಯೆ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.