ಲಾಲ್‌ಬಾಗ್‌ನಲ್ಲಿ ಒಡೆಯರ್‌ ವೈಭವ


Team Udayavani, Aug 1, 2019, 3:08 AM IST

lalbhag

ಬೆಂಗಳೂರು: ಸ್ವಾತಂತ್ರ ಪೂರ್ವದಲ್ಲಿಯೇ ಪ್ರಜಾಪ್ರಭುತ್ವ ಪದ್ಧತಿ, ಪಂಚವಾರ್ಷಿಕ ಯೋಜನೆಗಳನ್ನು ತನ್ನ ಆಡಳಿತದಲ್ಲಿ ಅಳವಡಿಸಿಕೊಳ್ಳುವ ಮೂಲಕ ಎಲ್ಲರಿರೂ ಮಾದರಿಯಾಗಿದ್ದ ಮೈಸೂರು ಮಹಾಸಂಸ್ಥಾನದ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್‌ಗೆ ಬೃಹತ್‌ ಪುಷ್ಪ ನಮನ ಸಲ್ಲಿಸಲು ಲಾಲ್‌ಬಾಗ್‌ ಸಜ್ಜಾಗುತ್ತಿದೆ.

ಜಯಚಾಮರಾಜ ಒಡೆಯರ್‌ ಶತಮಾನೋತ್ಸವ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘವು ಈ ಬಾರಿಯ ಜಯಚಾಮರಾಜ ಒಡೆಯರ್‌ ಅವರ ಜೀವನಾಧಾರಿತ ಫ‌ಲಪುಷ್ಪ ಪ್ರದರ್ಶನ ನಡೆಸಲು ಮುಂದಾಗಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ 210ನೇ ಫ‌ಲಪುಷ್ಟ ಪ್ರದರ್ಶನವು ಆ.9ರಿಂದ 18ವರೆಗೆ ನಡೆಯಲಿದೆ. ಈಗಾಗಲೇ ಲಾಲ್‌ಬಾಗ್‌ನಲ್ಲಿ ಕಲಾವಿದರ ತಂಡ ಪ್ರದರ್ಶನಕ್ಕೆ ಸಿದ್ಧತೆ ಆರಂಭಿಸಿದ್ದು, ಪ್ರದರ್ಶನಕ್ಕೆ ಅಗತ್ಯವಿರುವ ಹೂವಿನ ಪ್ರತಿಕೃತಿಗಳ ಚೌಕಟ್ಟುಗಳನ್ನು ತಯಾರಿಸುತ್ತಿದ್ದಾರೆ.

2019 ಜು.18ರಂದು ಜಯಚಾಮರಾಜ ಒಡೆಯರ್‌ ಜನಿಸಿ 100 ವರ್ಷಗಳಾಗಿವೆ. ಮೈಸೂರು ರಾಜವಂಶಸ್ಥರು, ಸಂಘ ಸಂಸ್ಥೆಗಳು, ಸರ್ಕಾರವು ಒಡೆಯರ್‌ ಹೆಸರಿನಲ್ಲಿ ಶತಮಾನೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರ ಸಾಧನೆ ಹಾಗೂ ನಾಡಿಗೆ ಅವರು ಕೊಟ್ಟ ಕೊಡುಗೆಗಳನ್ನು ಪರಿಚಯಿಸುತ್ತಿದೆ. ಇನ್ನೊಂದೆಡೆ ತೋಟಗಾರಿಕೆ ಇಲಾಖೆಯು ಪುಷ್ಪಗಳ ಸೊಬಗಿನೊಂದಿಗೆ ಒಡೆಯರ್‌ಗೆ ನಮನ ಸಲ್ಲಿಸುತ್ತಿದೆ.

ಗಾಜಿನ ಮನೆ ಒಳಗೆ ಜಯಚಾಮರಾಜ ವೃತ್ತ: ಜಯಚಾಮರಾಜ ಒಡೆಯರ್‌ ವಿಷಯಾಧಾರಿತ ಫ‌ಲಪುಷ್ಪ ಪ್ರದರ್ಶನವಾಗಿರುವುದರಿಂದ ಮೈಸೂರಿನಲ್ಲಿರುವ ಜಯಚಾಮರಾಜ ವೃತ್ತದ ಮಾದರಿಯನ್ನು ಹೂವುಗಳಿಂದ ಸಿದ್ಧಪಡಿಸಲಾಗುತ್ತಿದೆ. ಆ ವೃತ್ತದಲ್ಲಿರುವಂತೆಯೇ ಇಲ್ಲಿಯೂ ನಾಲ್ಕು ಕಂಬದ ಗೋಪುರ ಮಾಡಿ ಅದರ ಒಳಗೆ ಒಡೆಯರ್‌ ಪ್ರತಿಕೃತಿ ನಿಲ್ಲಿಸಲಾಗುತ್ತಿದೆ. ವಿಶೇಷವೆಂದರೆ ಈ ಗೋಪುರ ಹಾಗೂ ಒಡೆಯರ್‌ ಪ್ರತಿಕೃತಿಯು ನೈಜ ಅಳತೆಯಲ್ಲಿರಲಿದ್ದು, ಅಷ್ಟೇ ಸಂಖ್ಯೆ ಮೆಟ್ಟಿಲು, ಅದೇ ಶೈಲಿ-ವಿನ್ಯಾಸ, ಬಣ್ಣದ ಹೂವುಗಳಿಂದ ಅಲಂಕಾರಗೊಳ್ಳಲಿದೆ.

ಒಡೆಯರ್‌ರ ಆರು ಪ್ರತಿಕೃತಿ: ಈ ಬಾರಿ ಪ್ರದರ್ಶನದಲ್ಲಿ ಜಯಚಾಮರಾಜ ಒಡೆಯರ್‌ ಅವರ ಆರು ಪ್ರತಿಕೃತಿಗಳು ಲಾಲ್‌ಬಾಗ್‌ ಆವರಣದಲ್ಲಿ ಇರಲಿವೆ. ಗಾಜಿನ ಮನೆಯ ಮಧ್ಯಭಾಗದಲ್ಲಿ ನಿರ್ಮಾಣವಾಗುತ್ತಿರುವ ಜಯಚಾಮರಾಜ ವೃತ್ತದ ಮಾದರಿಯಲ್ಲಿ ಒಂದು ಪ್ರತಿಕೃತಿ ಇದ್ದರೆ, ಉಳಿದ ಐದು ಗಾಜಿನ ಮನೆ ಸುತ್ತ ಇರಲಿವೆ. ಇವು ವಿವಿಧ ವೇಷ, ಭಂಗಿಯಲ್ಲಿರುವ ಒಡೆಯರ್‌ ನೆನಪನ್ನು ಮರುಕಳಿಸಲಿವೆ.

ಮೈಸೂರು ಸಂಸ್ಥಾನದ ದರ್ಬಾರ್‌: ಒಡೆಯರು ಎಂದ ಮೇಲೆ ಮೈಸೂರು ಅರಮನೆ, ಅಲ್ಲಿನ ದರ್ಬಾರ್‌ ಇರಲೇಬೇಕು. ಹೀಗಾಗಿ ಗಾಜಿನ ಮನೆ ಹಿಂಭಾಗದಲ್ಲಿ ಹೂವುಗಳಿಂದಲೇ ಮೈಸೂರು ಸಂಸ್ಥಾನದ ದರ್ಬಾರ್‌ ಸನ್ನಿವೇಷವನ್ನು ಮರು ಸೃಷ್ಟಿ ಮಾಡಲಾಗುತ್ತಿದೆ. ಇಲ್ಲಿ ಸಿಂಹಾಸನ, ಎರಡು ಆನೆಗಳು, ಸೇನಾಧಿಪತಿ, ಐದಾರು ಮಂದಿ ಸೈನಿಕರ ಪ್ರತಿಕೃತಿ ನಿರ್ಮಿಸಲಾಗುತ್ತಿದೆ.

ಸಂಗೀತ ವಾದ್ಯಗಳು: ಜಯಚಾಮರಾಜ ಒಡೆಯರು ಆಡಳಿತದ ಜತೆಗೆ ಶ್ರೇಷ್ಠ ಸಂಗೀತ ಕಲಾವಿದರು, ಕಲಾ ಸೇವಕರಾಗಿದ್ದು, ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕರ್ನಾಟಕ, ಹಿಂದೂಸ್ತಾನಿ ಹಾಗೂ ಪಾಶ್ಚಾತ್ಯ ಸಂಗೀತ ಪ್ರಕಾರಗಳಲ್ಲಿ ಅವರು ಆಳವಾದ ಜ್ಞಾನ ಪಡೆದಿದ್ದರು. ಹೀಗಾಗಿ, ಗಾಜಿನ ಮನೆಯ ಎಡಭಾಗದಲ್ಲಿ ದೊಡ್ಡ ಗಾತ್ರದಲ್ಲಿ ವೀಣೆ, ಸಿತಾರ್‌, ತಬಲ ಸೇರಿ ವಿವಿಧ ಸಂಗೀತ ವಾದ್ಯಗಳ ಮಾದರಿಯನ್ನು ಹೂವುಗಳಿಂದ ಸಿದ್ಧಪಡಿಸಲಾಗುತ್ತಿದೆ. ಜತೆಗೆ ಪ್ರದರ್ಶನ ಸಂದರ್ಭದಲ್ಲಿ ನಿತ್ಯ ಗಾಜಿನ ಮನೆ ಮುಂಭಾಗದ ಬ್ಯಾಂಡ್‌ ಸ್ಟಾಂಡ್‌ನ‌ಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

ಸಾಧನೆಗಳ ಕುರಿತು ಮಾಹಿತಿ: ಜಯಚಾಮರಾಜ ಒಡೆಯರ್‌ ಸಾಧನೆಗಳ ಮಾಹಿತಿ ಕುರಿತು ಪ್ರದರ್ಶನದಲ್ಲಿ ಬೆಳಕು ಚಲ್ಲಲಾಗುತ್ತಿದೆ. ಈಗಾಗಲೇ ಇತಿಹಾಸ ತಜ್ಞರು ಹಾಗೂ ಅರಮನೆಯಿಂದ ಮಾಹಿತಿ ಕಲೆಹಾಕಲಾಗಿದೆ. ಕೂಲಿಕಾರ್ಮಿಕರಿಗೆ ವಿಮೆ ಜಾರಿ, ಮಹಿಳಾ ವೈದ್ಯರ ನೇಮಕ, ಉನ್ನತ ಶಿಕ್ಷಣಕ್ಕೆ ಆದ್ಯತೆ, ಕರ್ನಾಟಕ ಏಕೀಕರಣ ಹೋರಾಟ, ಆಕಾಶವಾಣಿ, ಎಚ್‌ಎಎಲ್‌ ನಿರ್ಮಾಣಕ್ಕೆ ಸಹಕಾರ ಸೇರಿದಂತೆ ವಿವಿಧ ಕೊಡುಗೆ ಬಗ್ಗೆ ಹೂವುಗಳು ಚಿತ್ರಾಕೃತಿ, ಛಾಯಾಚಿತ್ರ, ಫ‌ಲಕಗಳನ್ನು ಆಳವಡಿಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.

ಜಯಚಾಮರಾಜ ಒಡೆಯರ್‌ ನಾಡಿನ ಹೆಮ್ಮೆ. ಅವರ ಜೀವನ ಕುರಿತು ಈ ಬಾರಿ ಫ‌ಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುತ್ತಿರುವುದು ಸಂತಸದ ವಿಚಾರ. ಸರ್ಕಾರದ ವಿವಿಧ ಇಲಾಖೆಗಳಿಗೆ ಅವರು ನೀಡಿರುವ ಕೊಡುಗೆಗಳನ್ನು ಪ್ರದರ್ಶನದಲ್ಲಿ ಪರಿಚಯಿಸುವ ಕೆಲಸವಾಗಬೇಕು.
-ವರ್ಚಸ್ವಿ ಶ್ರೀಕಂಠ ಸಿದ್ಧಲಿಂಗ ಅರಸ್‌, ಜಯಚಾಮರಾಜ ಒಡೆಯರ್‌ ಮೊಮ್ಮಗ

ಜಯಚಾಮರಾಜ ಒಡೆಯರ್‌ ಶತಮಾನೋತ್ಸವದ ಅಂಗವಾಗಿ ಸ್ವಾತಂತ್ರ್ಯ ದಿನಾಚರಣೆಯ ಫ‌ಲಪುಷ್ಪ ಪ್ರದರ್ಶನದಲ್ಲಿ ಅವರ ಸಾಧನೆ ಕೊಡುಗೆ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ. ದರ್ಬಾರ್‌ ಸಭಾಂಗಣ, ಜಯಚಾಮರಾಜ ವೃತ್ತದ ಪ್ರತಿಕೃತಿ ತಯಾರಿ ಆರಂಭಗೊಂಡಿದೆ.
-ಡಾ.ಎಂ.ಜಗದೀಶ್‌, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.