ಹನಿಟ್ರ್ಯಾಪ್‌ ಮಾಡುತ್ತಿದ್ದ ಮಹಿಳೆ ಸೆರೆ

ಗುತ್ತಿಗೆದಾರರೊಬ್ಬರಿಗೆ ಒಂದು ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಆರೋಪಿಗಳು

Team Udayavani, Oct 16, 2021, 9:48 AM IST

ಹನಿಟ್ರ್ಯಾಪ್‌ ಮಾಡುತ್ತಿದ್ದ ಮಹಿಳೆ ಸೆರೆ

Representative Image used

ಬೆಂಗಳೂರು: ಗುತ್ತಿಗೆದಾರರೊಬ್ಬರನ್ನು “ಹನಿಟ್ರ್ಯಾಪ್‌’ಗೆ ಬೀಳಿಸಿದ ಮಹಿಳೆಯೊಬ್ಬಳು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾಳೆ. ಅನ್ನಪೂರ್ಣಶ್ವೇರಿನಗರದ ನಿವಾಸಿ ಸಿವಿಲ್‌ ಗುತ್ತಿಗೆದಾರ ಲೋಹಿತ್‌ (38) ಇವರ ಜತೆ ಸಲುಗೆ ಬೆಳೆಸಿ ಇಬ್ಬರು ಒಟ್ಟಿಗಿರುವ ಖಾಸಗಿ ದೃಶ್ಯಾವಳಿಗಳನ್ನು ಸೆರೆಹಿಡಿದು ಒಂದು ಕೋಟಿ ರೂ.ಗೆ ಬೇಡಿಕೆಯಿಟ್ಟು ಹನಿಟ್ರ್ಯಾಪ್‌ ಬಲೆ ಹೆಣೆದಿದ್ದ ವಿಜಯನಗರದ ನಿವಾಸಿ ವಿದ್ಯಾ (32) ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

ಸಿವಿಲ್‌ ಗುತ್ತಿಗೆದಾರ ನೀಡಿದ ದೂರು ಆಧರಿಸಿ ಮಹಿಳೆಯನ್ನು ಬಂಧಿಸಿರುವ ಪೊಲೀಸರು, ಹನಿಟ್ರ್ಯಾಪ್‌ಗೆ ನೆರವು ನೀಡಿದ್ದ ಇಬ್ಬರು ಯುವಕರ ಪತ್ತೆಗೆ ಶೋಧ ನಡೆಸಿದ್ದಾರೆ. ಮೂರು ತಿಂಗಳ ಹಿಂದೆ ಸಿವಿಲ್‌ ಗುತ್ತಿಗೆದಾರ ಲೋಹಿತ್‌ ನಾಗರಬಾವಿಯ ನಮ್ಮೂರ ತಿಂಡಿ ಹೋಟೆಲ್‌ ಮುಂಭಾಗದ ರಸ್ತೆಯಲ್ಲಿ ನಿಂತಿದ್ದರು. ಈ ವೇಳೆ ಅವರ ಬಳಿ ಬಂದ ಇಬ್ಬರು ಯುವಕರು, ನಮ್ಮ ಬಳಿ ಇರುವ ಹರ್ಬಲ್‌ ಲೈಫ್ ಉತ್ಪನ್ನಗಳನ್ನು ತೆಗೆದುಕೊಂಡರೆ ನೀವು ಬೇಗ ಸಣ್ಣಗಾಗುತ್ತೀರಿ ಎಂದು ನಂಬಿಸಿದ್ದರು.

ನಂತರ ಆರೋಪಿಗಳು ವಿದ್ಯಾ ಮೊಬೈಲ್‌ ನಂಬರ್‌ ಕೊಟ್ಟು ನೀವು ಈ ನಂಬರ್‌ಗೆ ಕರೆ ಮಾಡಿ ಮಾತನಾಡಿ ಎಂದಿದ್ದರು. ಅದರಂತೆ ವಿದ್ಯಾಗೆ ಕರೆ ಮಾಡಿದ್ದ ಲೋಹಿತ್‌ ಹರ್ಬಲ್‌ ಲೈಫ್ ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಖರೀದಿಸಿದ್ದರು. ನಂತರ ಆಗಾಗ ಲೋಹಿತ್‌ಗೆ ಕರೆ ಮಾಡುತ್ತಿದ್ದ ವಿದ್ಯಾ ಸಲುಗೆ ಬೆಳೆಸಿಕೊಂಡಿದ್ದಳು. ಅದರಂತೆ ಆಕೆ ಇತ್ತೀಚೆಗೆ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ಗೆ ಲೋಹಿತ್‌ನನ್ನು ಕರೆದುಕೊಂಡು ಹೋಗಿದ್ದಳು.

ಈ ವೇಳೆ ಇಬ್ಬರೂ ಖಾಸಗಿಯಾಗಿ ಕಾಲ ಕಳೆದಿದ್ದಾರೆ. ಕೆಲ ಸಮಯದ ಬಳಿಕ ವಿದ್ಯಾ ಮಾದಕ ವಸ್ತು ಸೇವಿಸಿ ರೆಸಾರ್ಟ್‌ ಸಿಬ್ಬಂದಿ ಜತೆ ಜಗಳ ಮಾಡಿದ್ದಳು. ಆಕೆಯನ್ನು ಲೋಹಿತ್‌ ಸಮಾಧಾನಪಡಿಸಿದರೂ ಆಕೆ ಕೇಳದಾಗ ವಿದ್ಯಾಳನ್ನು ಅಲ್ಲಿಯೇ ಬಿಟ್ಟು ಲೋಹಿತ್‌ ಮನೆಗೆ ಬಂದಿದ್ದರು.

ಪೆನ್‌ಡ್ರೈವ್‌ ಕೊಟ್ಟು 1 ಕೋಟಿ ರೂ.ಗೆ ಬೇಡಿಕೆ: ಸೆ.29ರಂದು ವಿದ್ಯಾ, ಲೋಹಿತ್‌ಗೆ ಕರೆ ಮಾಡಿ ನಾಗರಬಾವಿ ಬಳಿ ಬರುವಂತೆ ಸೂಚಿಸಿದ್ದಳು. ಲೋಹಿತ್‌ ಆಕೆಯನ್ನು ಭೇಟಿಯಾದಾಗ ಇವರಿ ಬ್ಬರೂ ರೆಸಾರ್ಟ್‌ನಲ್ಲಿ ಕಳೆದಿದ್ದ ಖಾಸಗಿ ಫೋಟೋ ಗಳನ್ನು ತೋರಿಸಿ 1 ಕೋಟಿ ರೂ. ಕೊಡುವಂತೆ ಬ್ಲಾಕ್‌ ಮೇಲ್‌ ಮಾಡಿದ್ದಳು. ಇದರಿಂದ ಆತಂಕಗೊಂಡ ಲೋಹಿತ್‌ ಆರಂಭದಲ್ಲಿ 2 ಲಕ್ಷ ರೂ. ಕೊಟ್ಟಿದ್ದರು. ಇದಾದ ಕೆಲ ದಿನಗಳ ಬಳಿಕ ವಿದ್ಯಾ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಳು.

ಇದನ್ನೂ ಓದಿ:- ಅಂಬೇಡ್ಕರ್ ಕನಸಿನ ಭಾರತ ನಿರ್ಮಿಸೋಣ: ಪೆರ್ಲ

ಈ ಮಧ್ಯೆ ಕೆಲ ದಿನಗಳ ಹಿಂದೆ ಇಬ್ಬರು ಅಪರಿಚಿತ ಹುಡುಗರು ಲೋಹಿತ್‌ನನ್ನು ಭೇಟಿಯಾಗಿ ಪೆನ್‌ಡ್ರೈವ್‌ ಕೊಟ್ಟು ಇದರಲ್ಲಿ ಇರುವುದನ್ನು ನೋಡಿ ಎಂದು ಹೇಳಿ ಹೋಗಿದ್ದರು. ಪೆನ್‌ಡ್ರೈವ್‌ನಲ್ಲಿ ಏನಿದೆ ಎಂದು ನೋಡಿದಾಗ ವಿದ್ಯಾ ಮತ್ತು ಲೋಹಿತ್‌ ರೆಸಾರ್ಟ್‌ನಲ್ಲಿ ಕಳೆದ ಖಾಸಗಿ ದೃಶ್ಯಗಳಿದ್ದವು. ವಿದ್ಯಾಗೆ ಕರೆ ಮಾಡಿದ ಲೋಹಿತ್‌ ಈ ಬಗ್ಗೆ ಪ್ರಶ್ನಿಸಿದ್ದರು. 1 ಕೋಟಿ ರೂ. ಕೊಡದಿದ್ದರೆ, ವಿವಾಹವಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ನಿಮ್ಮ ವಿರುದ್ಧ ಪೊಲೀಸರಿಗೆ ದೂರು ಕೊಡುತ್ತೇನೆ ಎಂದು ಆಕೆ ಬೆದರಿಕೆ ಹಾಕಿದ್ದಳು.

ಇದರಿಂದ ಆತಂಕಗೊಂಡ ಲೋಹಿತ್‌ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ವಿದ್ಯಾ ಹನಿಟ್ರ್ಯಾಪ್‌ ನಡೆಸಿರುವುದು ಪತ್ತೆಯಾಗಿತ್ತು. ಆಕೆಯನ್ನು ಬಂಧಿಸಿದ ಪೊಲೀಸರು ಈಕೆಗೆ ಸಹಕರಿಸುತ್ತಿದ್ದ ಇಬ್ಬರು ಹುಡುಗರಿಗೆ ಶೋಧ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.