ಅಪೋಲೊದಲ್ಲಿ ಮಹಿಳೆ-ಮಕ್ಕಳ ಆರೈಕೆ ವಿಭಾಗ
Team Udayavani, May 18, 2019, 3:04 AM IST
ಬೆಂಗಳೂರು: ನಗರದ ಶೇಷಾದ್ರಿಪುರ ಬಡಾವಣೆಯ ಅಪೋಲೊ ಆಸ್ಪತ್ರೆಯಲ್ಲಿ ಆಧುನಿಕ ಹಾಗೂ ಸುಸಜ್ಜಿತ ಮಹಿಳೆ ಮತ್ತು ಮಗುವಿನ ಆರೈಕೆ ವಿಭಾಗ ಆರಂಭದಿಂದ ಸುತ್ತಮುತ್ತಲ ಪ್ರದೇಶಗಳ ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಬೆಂಗಳೂರು ನಗರ ಪೋಲಿಸ್ ಉಪ ಆಯುಕ್ತೆ ಡಾ.ಸೌಮ್ಯಲತಾ ಅಭಿಪ್ರಾಯಪಟ್ಟರು.
ಇತೀ¤ಚೆಗೆ ಅಪೋಲೊ ಆಸ್ಪತ್ರೆಯಲ್ಲಿ ವಿಶ್ವ ಮಟ್ಟದ ಪ್ರಸೂತಿ ಮತ್ತು ನವಜಾತ ಶಿಶು ಆರೈಕೆಯ ನೂತನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಅತ್ಯುತ್ತಮ ಸುರಕ್ಷತೆಯೊಂದಿಗೆ ಆಧುನಿಕ ಶಸ್ತ್ರಚಿಕಿತ್ಸೆ ಉಪಕರಣಗಳು ಹಾಗೂ ತಜ್ಞ ವೈದ್ಯರ ತಂಡ ಇಲ್ಲಿದೆ. ಬಾಣಂತಿ ಮತ್ತು ಮಗುವಿಗೆ ಉತ್ತಮ ಚಿಕಿತ್ಸೆ ಒದಗಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ನಂತರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ಮಾತನಾಡಿ, ಅಪೋಲೊ ಆಸ್ಪತ್ರೆ ತನ್ನ ವೈದ್ಯಕೀಯ ಸೌಲಭ್ಯಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸಾ ವಿಧಾನಗಳನ್ನು ಪರಿಚಯಿಸುವಲ್ಲಿ ಮುಂಚೂಣಿಯಲ್ಲಿದೆ. ಈ ಬದ್ಧತೆ ದೃಷ್ಟಿಯಲ್ಲಿರಿಸಿಕೊಂಡು ಇಲ್ಲಿ ಮಹಿಳೆ ಮತ್ತು ಶಿಶು ಆರೈಕೆ ವಿಭಾಗವನ್ನು ಆರಂಭಿಸಿದ್ದೇವೆ.
ದೇಶದಲ್ಲಿ ಹೆರಿಗೆ ವೇಳೆ ಸಂಭವಿಸುವ ತಾಯಂದಿರ ಸಾವಿನ ಪ್ರಮಾಣ ಶೇ.22ಕ್ಕೆ ಇಳಿದಿದ್ದರೂ, ನವಜಾತ ಶಿಶು ಮತ್ತು ತಾಯಿಯ ಮರಣವನ್ನು ಸಂಪೂರ್ಣ ನಿಲ್ಲಿಸಲು ಬಹಳ ದೂರ ಸಾಗಬೇಕಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ಸುಧಾರಣೆ ತರಲು ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯನಿರ್ವಹಿಸುತ್ತಿದೆ.
ನೂತನ ವಿಭಾಗ ಆರಂಭದಿಂದ ನಿರಂತರವಾಗಿ ದಿನದ 24 ಗಂಟೆ ಹೆರಿಗೆಗಾಗಿ ಬರುವ ತಾಯಿ ಹಾಗೂ ಮಗುವಿನ ಆರೋಗ್ಯ, ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಲು ಆನುಕೂಲವಾಗಲಿದೆ ಎಂದರು. ಈ ಸಂದರ್ಭದಲ್ಲಿ ಅಪೋಲೊ ಆಸ್ಪತ್ರೆಯ ಕರ್ನಾಟಕ ಸಿಇಒ ಡಾ.ಡೇವಿಸನ್, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅನುಪಮ್ ಸಿಂಗ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್