ಸಹೋದರನ ಕೊಲೆಗೆ ಮಹಿಳೆ ಸುಪಾರಿ

ಮಗಳ ಮದುವೆ ವಿಚಾರದಲ್ಲಿ ಮಧ್ಯಪ್ರವೇಶಿಸಿದ್ದಕ್ಕೆ ಸುಪಾರಿ ಕೊಟ್ಟಿದ್ದ ಗೌರಮ್ಮ

Team Udayavani, Jun 28, 2019, 12:31 PM IST

bng-tdy-3

ಬೆಂಗಳೂರು: ಮಗಳ ಮದುವೆ ವಿಚಾರದಲ್ಲಿ ಮಧ್ಯಪ್ರವೇಶಿಸಿದ ಸಹೋದರನನ್ನೇ ಸುಪಾರಿ ಕೊಟ್ಟು ಬರ್ಬರವಾಗಿ ಕೊಲೆ ಮಾಡಿಸಿದ ಸಹೋದರಿ ಸೇರಿ ಐವರು ಕೆಂಗೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೆಂಗೇರಿಯ ಮಾರುತಿನಗರ ನಿವಾಸಿ ಗೌರಮ್ಮ (45) ರಾಯಚೂರು ಮೂಲದ ಮಹಿಳೆ ಮಮ್ತಾಜ್‌ (28), ಮುನ್ನಾ (22), ಪಶ್ಚಿಮ ಬಂಗಾಳ ಮೂಲದ ಅರ್ಜು (19) ಮತ್ತು ಸಾಕೀಬ್‌ (19) ಬಂಧಿತರು.

ಆರೋಪಿ ಗೌರಮ್ಮ ತನ್ನ ದ್ವಿತೀಯ ಪುತ್ರಿಯ ಮದುವೆ ವಿಚಾರದಲ್ಲಿ ಮಧ್ಯಪ್ರವೇಶಿಸಿದ ಸಹೋದರ ರಾಜಶೇಖರ್‌(55)ರನ್ನು ಕೊಲೆಗೈಯಲು ಮೂರು ಲಕ್ಷ ರೂ.ಗೆ ಮಮ್ತಾಜ್‌ಗೆ ಸುಪಾರಿ ಕೊಟ್ಟಿದ್ದರು. ಈ ಸಂಬಂಧ ಆರೋಪಿಗಳು ಜೂನ್‌ 22ರಂದು ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನ ಪಾಳು ಮನೆಯೊಂದಕ್ಕೆ ಕರೆಸಿಕೊಂಡು ಚಾಕುವಿನಿಂದ ಕತ್ತು ಕೊಯ್ದು ಹತ್ಯೆಗೈದಿದ್ದರು ಎಂದು ಪೊಲೀಸರು ಹೇಳಿದರು.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ರಾಜಶೇಖರ್‌ ಹಲವು ವರ್ಷಗಳಿಂದ ಪೇಟಿಂಗ್‌ ಕೆಲಸ ಮಾಡುತ್ತಿದ್ದು, ಕುಟುಂಬದಿಂದ ದೂರವಾಗಿ ಪ್ರತ್ಯೇಕವಾಗಿ ಮಾರುತಿನಗರದಲ್ಲಿ ವಾಸವಾಗಿದ್ದರು. ರಾಜಶೇಖರ್‌ಗೆ ಇಬ್ಬರು ಸಹೋದರಿಯರಿದ್ದಾರೆ. ಆ ಪೈಕಿ ಗೌರಮ್ಮ ಮಾರುತಿನಗರದಲ್ಲೇ ವಾಸವಾಗಿದ್ದಾರೆ.

ಕೆಲ ತಿಂಗಳ ಹಿಂದೆ ಗೌರಮ್ಮ ತಮ್ಮ ದ್ವಿತೀಯ ಪುತ್ರಿಗೆ ಪರಿಚಯಸ್ಥ ಯುವಕನ ಜತೆ ಮದುವೆ ನಿಶ್ಚಯ ಮಾಡಿದ್ದು, ನಿಶ್ಚಿತಾರ್ಥ ಕೂಡ ಮಾಡಿದ್ದರು. ಅನಂತರ ಭಾವಿ ಅಳಿಯನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಗೌರಮ್ಮ, ಪುತ್ರಿಯ ಮದುವೆ ನಿಲ್ಲಿಸಲು ಸಿದ್ದತೆ ನಡೆಸಿದ್ದರು. ಆದರೆ, ಇದಕ್ಕೆ ಒಪ್ಪದ ಪುತ್ರಿ ಆತನೊಂದಿಗೇ ಮದುವೆ ಆಗುವುದಾಗಿ ಪಟ್ಟು ಹಿಡಿದಿದ್ದರು. ಅಲ್ಲದೆ, ಈ ವಿಚಾರವನ್ನು ಮಾವ ರಾಜಶೇಖರ್‌ಗೆ ತಿಳಿಸಿ, ಹಿರಿಯರೆಲ್ಲ ಒಪ್ಪಿ ನಿಶ್ಚಿಯಿಸಿದ ಮದುವೆ ಇದು. ಇದೀಗ ಏಕಾಏಕಿ ಮದುವೆ ಬೇಡ ಎಂದರೆ ಹೇಗೆ? ತಾನೂ ಆ ಯುವಕನನ್ನು ಬಹಳ ಪ್ರೀತಿಸುತ್ತಿದ್ದೇನೆ. ಆತನನ್ನು ಬಿಟ್ಟು ಬೇರೆ ಯಾರನ್ನು ಮದುವೆ ಮಾಡಿಕೊಳ್ಳುವುದಿಲ್ಲ ಎಂದಿದ್ದರು.

ಹೀಗಾಗಿ ರಾಜಶೇಖರ್‌, ಆಕೆಯನ್ನು ತನ್ನ ಇನ್ನೊಬ್ಬ ಸಹೋದರಿ ಮನೆಯಲ್ಲಿಟ್ಟು ನಿಶ್ಚಿತಾರ್ಥವಾಗಿದ್ದ ಯುವಕನ ಜತೆ ಮದುವೆ ಮಾಡಲು ಸಿದ್ದತೆ ನಡೆಸಿದ್ದರು. ಈ ವಿಚಾರ ತಿಳಿದ ಗೌರಮ್ಮ ಸಹೋದರ ರಾಜಶೇಖರ್‌ ಜತೆ ವಾಗ್ವಾದ ನಡೆಸಿದ್ದು, ಕೊನೆಗೆ ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದರು.

ಮೂರು ಲಕ್ಷಕ್ಕೆ ಸುಪಾರಿ: ಎಷ್ಟೇ ಪ್ರಯತ್ನಿಸಿದರೂ ಮದುವೆ ನಿಲ್ಲಿಸಲು ಸಾಧ್ಯವಾಗದ ಗೌರಮ್ಮ, ಕೊನೆಗೆ ಸಹೋದರನನ್ನು ಕೊಲ್ಲಲು ನಿರ್ಧರಿಸಿದ್ದರು. ತನ್ನ ಮನೆ ಮುಂಭಾಗದಲ್ಲಿ ವಾಸವಾಗಿದ್ದ ಗಾರೆ ಕೆಲಸ ಮಾಡುವ ಮಮ್ತಾಜ್‌ಗೆ ರಾಜಶೇಖರ್‌ ಕೊಲ್ಲುವಂತೆ ಮೂರು ಲಕ್ಷ ರೂ.ಗೆ ಸುಪಾರಿ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಂಚು ರೂಪಿಸಿದ ಮಮ್ತಾಜ್‌, ತನ್ನೊಂದಿಗೆ ಕೆಲಸ ಮಾಡುವ ಮುನ್ನಾ, ಅರ್ಜು ಮತ್ತು ಸಾಕೀಬ್‌ಗ ತಲಾ ಇಂತಿಷ್ಟು ಹಣ ಕೊಡುವುದಾಗಿ ಹೇಳಿ ಕೃತ್ಯಕ್ಕೆ ಸಹಕಾರ ನೀಡುವಂತೆ ಕೇಳಿಕೊಂಡಿದ್ದಳು ಎಂದು ಪೊಲೀಸರು ಹೇಳಿದರು.

ಪೇಟಿಂಗ್‌ ಕೆಲಸಕ್ಕೆಂದು ಕರೆಸಿ ಕೊಲೆ: ರಾಜಶೇಖರ್‌ ಪೇಟಿಂಗ್‌ ಕೆಲಸ ಮಾಡುತ್ತಿದ್ದನ್ನು ಅರಿತಿದ್ದ ಮಮ್ತಾಜ್‌, ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ಬಳಿ ತನ್ನ ಹಳೇ ಮನೆಯಿದ್ದು, ಪೇಟಿಂಗ್‌ ಮಾಡಬೇಕಿದೆ ಎಂದು ರಾಜಶೇಖರ್‌ನನ್ನು ಜೂನ್‌ 22ರಂದು ತನ್ನೊಂದಿಗೆ ಕರೆದೊಯ್ದಿದ್ದಳು. ರಾಜಶೇಖರ್‌ ಮನೆಯೊಳಗೆ ಹೋಗುತ್ತಿದ್ದಂತೆ ಅವರ ಕೈ, ಕಾಲು ಹಿಡಿದುಕೊಂಡು ಆರೋಪಿಗಳು ಚಾಕುವಿನಿಂದ ಕೊತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದರು.

ಹೊಸ ಸಿಮ್‌, ಮನೆ ಖಾಲಿಗೆ ಸಿದ್ದತೆ: ಕೃತ್ಯ ಎಸಗುತ್ತಿದ್ದಂತೆ ಮಮ್ತಾಜ್‌ ತನ್ನ ಮೊಬೈಲ್ ಮತ್ತು ಸಿಮ್‌ಕಾರ್ಡ್‌ನ್ನು ಬಿಸಾಡಿ ಹೊಸ ಸಿಮ್‌ ಖರೀದಿ ಮಾಡಿದ್ದಳು. ತನ್ನ ಮನೆಯನ್ನು ಖಾಲಿ ಮಾಡಿ ಬೇರೆಡೆ ಹೋಗಲು ಸಿದ್ದತೆ ನಡೆಸಿದ್ದಳು. ಅಲ್ಲದೆ, ತನ್ನ ಸಹಚರರಿಗೆ ಕೆಲ ದಿನಗಳ ಕಾಲ ತಲೆಮರೆಸಿಕೊಳ್ಳುವಂತೆ ಒಂದಿಷ್ಟು ಹಣ ಕೊಟ್ಟು ಕಳುಹಿಸಿದ್ದಳು.

ಈ ಮಧ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಕೆಂಗೇರಿ ಪೊಲೀಸ್‌ ಠಾಣಾಧಿಕಾರಿ ರಾಮಪ್ಪ ಬಿ. ಗುತ್ತೇರ್‌, ರಾಜಶೇಖರ್‌ ಮೊಬೈಲ್ನ ಸಿಡಿಆರ್‌ ಪರಿಶೀಲಿಸಿದಾಗ, ಮಮ್ತಾಜ್‌ ಮೊಬೈಲ್ ನಂಬರ್‌ ಪತ್ತೆಯಾಗಿತ್ತು. ಜತೆಗೆ ಗೌರಮ್ಮರನ್ನು ವಿಚಾರಣೆಗೊಳಪಡಿಸಿದಾಗ, ಆಕೆ ಕೂಡ ಗೊಂದಲದ ಹೇಳಿಕೆ ನೀಡಿದ್ದರು. ಈ ಸಂಬಂಧ ರಾಜಶೇಖರ್‌ ಮತ್ತು ಮಮ್ತಾಜ್‌ನ ಸಿಡಿಆರ್‌ ಪರಿಶೀಲಿಸಿದಾಗ ಇಡೀ ಪ್ರಕರಣ ಬಯಲಿಗೆ ಬಂದಿದ್ದು, ಗೌರಮ್ಮ ಸೇರಿ ಎಲ್ಲರನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.